CM ಆರ್ಥಿಕ ಸಲಹೆಗಾರರ ಕೊಠಡಿ ನವೀಕರಣಕ್ಕೆ 15 ಲಕ್ಷ ರೂ.

ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ 55.50 ಲಕ್ಷ ರೂ.

Team Udayavani, Sep 17, 2024, 6:45 AM IST

GOVTCM ಆರ್ಥಿಕ ಸಲಹೆಗಾರರ ಕೊಠಡಿ ನವೀಕರಣಕ್ಕೆ 15 ಲಕ್ಷ ರೂ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರ ವಿಧಾನಸೌಧದಲ್ಲಿನ ಕೊಠಡಿ ನವೀಕರಣಕ್ಕಾಗಿ ರಾಜ್ಯ ಸರಕಾರವು 15.10 ಲಕ್ಷ ರೂ.ಗಳನ್ನು ಪಾರದರ್ಶಕ ಕಾಯ್ದೆ ವಿನಾಯಿತಿ ನೀಡಿ ಮಂಜೂರು ಮಾಡಿದೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿಯ ಟೈಲ್ಸ್‌ಗೆ ಪಾಲಿಶ್‌ ಮಾಡುವುದು, ಕಾನ್ಫರೆನ್ಸ್‌ ಟೇಬಲ್‌ ಅಳವಡಿಕೆ, ಹೊಸ ಮೇಜು, ಕುರ್ಚಿ ಹಾಗೂ ಸೋಫಾ ಸೆಟ್‌ ಅಳವಡಿಕೆ, ಶೌಚಾಲಯ ನವೀಕರಣ ಸೇರಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಲೋಕೋಪಯೋಗಿ ಇಲಾಖೆಗೆ 15.10 ಲಕ್ಷ ರೂ.ಗಳನ್ನು ನೀಡಲಾಗಿದೆ.

ಅದೇ ರೀತಿ ಬಾಲ್ಯ ವಿವಾಹ ಪ್ರಕರಣಗಳ ಅನುಸರಣೆ ಮತ್ತು ಮೇಲ್ವಿಚಾರಣೆಗಾಗಿ ಎನ್‌ಐಸಿ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಸುರಕ್ಷಿಣಿ ವೆಬ್‌ ಪೋರ್ಟಲ್‌ನ್ನು ಸಿಡಿಎಸಿ ಸಂಸ್ಥೆಯ ಸಹಯೋಗದೊಂದಿಗೆ ಹೊಸ ವರ್ಧಿತ ಸಂರಕ್ಷಿಣಿ ತಂತ್ರಾಂಶವನ್ನಾಗಿ ಅಭಿವೃದ್ಧಿಪಡಿಸಲು 34.50 ಲಕ್ಷ ರೂ. ಹಾಗೂ ಸಮಗ್ರ ಮಕ್ಕಳ ರಕ್ಷಣಾ ಯೋಜನೆ (ಐಸಿಪಿಎಸ್‌) ಅಡಿ ಒಂದು ವರ್ಷ ಅವಧಿಗೆ ಐವರು ಸಮಾಲೋಚಕರನ್ನು ನೇಮಿಸಿಕೊಳ್ಳಲು 21 ಲಕ್ಷ ರೂ.ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಲಾಗಿದೆ.

ಬಸ್‌ ಖರೀದಿ
ಲೋಕಾಯುಕ್ತ ಸಂಸ್ಥೆಯಲ್ಲಿ ಮೂವರು ಸಂಶೋಧನ ಸಹಾಯಕರ ಸಮಾಲೋಚನ ಶುಲ್ಕ 33,450 ರೂ., ಸಂಶೋಧನ ಅಧ್ಯಯನ, ತರಬೇತಿ, ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮ, ಪ್ರಯೋಗಾಲಯಗಳ ಮಾದರಿ ವಿಶ್ಲೇಷಣೆಗಾಗಿ ಪರಿಸರ ನಿರ್ವಹಣೆ ಹಾಗೂ ನೀತಿ ಸಂಶೋಧನ ಸಂಸ್ಥೆ (ಎಂಪ್ರಿ) ಸಂಸ್ಥೆಗೆ 30 ಲಕ್ಷ ರೂ.ಗಳನ್ನು ರಾಜ್ಯ ಸರಕಾರ ಮಂಜೂರು ಮಾಡಿದೆ.

ಕರ್ನಾಟಕ ನ್ಯಾಯಾಂಗ ಅಕಾಡೆಮಿಗೆ ಅವಶ್ಯವಿರುವ ಹೊಸ ಬಸ್‌ ಖರೀದಿಸಲು ಬರ್ಮಾ ಆಟೋಮೋಟಿವ್ಸ್‌ ಪ್ರೈ.ಲಿ.ಗೆ 35.90 ಲಕ್ಷ ರೂ.ಗಳನ್ನು ಮಂಜೂರು ಮಾಡಿದ್ದು ಇದರೊಂದಿಗೆ ರಾಜ್ಯದ ಸಂಗ್ರಹಣ ಪ್ರಾಧಿಕಾರಗಳು ಅವಶ್ಯವಿರುವ ತೆಂಗಿನ ನಾರಿನ ಉತ್ಪನ್ನಗಳನ್ನು ಕರ್ನಾಟಕ ರಾಜ್ಯ ತೆಂಗಿನ ನಾರು ಅಭಿವೃದ್ಧಿ ನಿಗಮದಿಂದ ಪಡೆಯಲು 50 ಲಕ್ಷ ರೂ.ಗೆ ಮಂಜೂರಾತಿ ನೀಡಿದೆ. ಈ ಎಲ್ಲ ಸೇವೆಗಳನ್ನು ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ1999ರ ಕಲಂ 4 (ಜಿ) ಅಡಿ ವಿನಾಯಿತಿ ನೀಡಿ ಅಧಿಸೂಚಿಸಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.