Nipah 2ನೇ ಬಲಿ: ಕೇರಳಕ್ಕೆ ಮತ್ತೆ ನಿರ್ಬಂಧಗಳ ಸರಪಳಿ
ಸಾರ್ವಜನಿಕ ಸಭೆ ರದ್ದು, ಮಾಸ್ಕ್ ಧಾರಣೆ ಕಡ್ಡಾಯ
Team Udayavani, Sep 17, 2024, 6:55 AM IST
ತಿರುವನಂತಪುರ: ಕೇರಳದಲ್ಲಿ ನಿಫಾ ವೈರಸ್ಗೆ 2ನೇ ವ್ಯಕ್ತಿ ಸಾವನ್ನಪ್ಪಿದ ಬೆನ್ನಲ್ಲೇ, ರಾಜ್ಯದಲ್ಲಿ ಸೋಂಕಿನ ಬಗ್ಗೆ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ವ್ಯಕ್ತಿ ಮೃತಪಟ್ಟ ಮಲಪ್ಪುರಂ ಜಿಲ್ಲೆಯಲ್ಲಿ ವಿವಿಧ ನಿರ್ಬಂಧ ವಿಧಿಸಿದೆ. ಕೊರೊನಾ ಕಾಲದಲ್ಲಿದ್ದ ಮಾಸ್ಕ್ ಧಾರಣೆ ಕಡ್ಡಾಯ, ಸಾರ್ವಜನಿಕ ಸಭೆ-ಕಾರ್ಯ ಕ್ರಮಗಳ ನಿಷೇಧ, ಸಾಮಾಜಿಕ ಅಂತರ ಕಡ್ಡಾಯದಂಥ ಹಲವು ಕ್ರಮಗಳನ್ನು ಮರುಜಾರಿಗೊಳಿಸಲಾಗಿದೆ.
ಮಲಪ್ಪುರಂ ಜಿಲ್ಲೆಯ ತುರುವಲ್ಲಿ ಗ್ರಾಮ ಪಂಚಾಯತ್ನ 4, 5, 6 ಮತ್ತು 7ನೇ ವಾರ್ಡ್ಗಳಲ್ಲಿ ಹಾಗೂ ಮಾಂಪತ್ ಗ್ರಾಮ ಪಂಚಾಯತ್ ವಾರ್ಡ್ ನಂಬರ್ 7ರಲ್ಲಿ ಎಲ್ಲಾ ಶಾಲೆ, ಕಾಲೇಜು, ಮದ ರಸಾ, ಅಂಗನವಾಡಿಗಳನ್ನು ಮುಂದಿನ ಆದೇಶದವರೆಗೆ ತೆರೆಯ ದಂತೆ ನಿರ್ಬಂಧ ವಿಧಿಸಲಾಗಿದೆ.
ಉಳಿದಂತೆ ಜಿಲ್ಲೆಯ ಬೇರೆ ಶಾಲೆ, ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿ ಸಲಾಗಿದೆ. ಅಲ್ಲದೇ, ಅಂಗಡಿ-ಮುಂಗಟ್ಟುಗಳನ್ನು ಬೆ.10ರಿಂದ ಸಂಜೆ 7 ಗಂಟೆವರೆಗೆ ಮಾತ್ರ ತೆರೆಯುವಂತೆ ಸಮಯ ನಿಗದಿಪಡಿಸಲಾಗಿದ್ದು, ಸಭೆ- ಕಾರ್ಯಕ್ರಮಗಳನ್ನು ನಡೆಸದಂತೆ ನಿಷೇಧಿಸಲಾಗಿದೆ. ಪ್ರಮುಖ ಕಾರ್ಯಕ್ರಮಗಳಿಗೂ ಅನುಮತಿ ಪಡೆಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.