RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ
ಬೂಟು ಧರಿಸಿ ನುಗ್ಗಿ ಪ್ರಚಾರಕರು, ಸ್ವಯಂಸೇವಕರನ್ನು ಎಳೆದಾಡಿ ದಾಂಧಲೆ: ಆರೋಪ
Team Udayavani, Sep 17, 2024, 7:10 AM IST
ಪಾಂಡವಪುರ (ಮಂಡ್ಯ): ಪಟ್ಟಣದ ಆರೆಸ್ಸೆಸ್ ಕಚೇರಿಗೆ ರವಿವಾರ ರಾತ್ರಿ ಪೊಲೀಸರು ಬೂಟು ಧರಿಸಿಕೊಂಡೇ ನುಗ್ಗಿ ಸಂಘದ ಪ್ರಚಾರಕರು ಹಾಗೂ ಸ್ವಯಂ ಸೇವಕರನ್ನು ಎಳೆದಾಡಿ ದಾಂಧಲೆ ಮಾಡಿದ್ದಾರೆ ಎಂದು ಆರೋಪಿಸಿ ಆರೆಸ್ಸೆಸ್ ಹಾಗೂ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಸೋಮವಾರ ಪಟ್ಟಣದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಸೋಮವಾರ ಬೆಳಗ್ಗೆ 11ಕ್ಕೆ ಆಗಮಿಸಿ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಡಿವೈಎಸ್ಪಿ ಮುರಳಿ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ವಿವೇಕಾನಂದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅಮಾನತಿಗೆ ಆಗ್ರಹಿಸಿದರು.
ಪ್ರತಿಭಟನ ಸ್ಥಳದಲ್ಲಿಯೇ ಅಡುಗೆ ಮಾಡಿ ಮಧ್ಯಾಹ್ನದ ಊಟ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನ ಸ್ಥಳಕ್ಕೆ ಮಾಜಿ ಉಪಮುಖ್ಯಮಂತ್ರಿ ಡಾ| ಅಶ್ವತ್ಥನಾರಾಯಣ, ಮಾಜಿ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಸಹಿತ ಹಲವರು ಭೇಟಿ ನೀಡಿ ಪ್ರತಿಭಟನೆಗೆ ಸಾಥ್ ನೀಡಿದರು. ಪೊಲೀಸರು ಕಚೇರಿ ಮೇಲೆ ದಾಳಿ ಮಾಡುವ ವೇಳೆಗೆ ಅಲ್ಲಿಂದ ಶರಣ್ ಪಂಪುವೆಲ್ ಮತ್ತಿತರರು ತೆರಳಿ ಆಗಿತ್ತು ಎನ್ನಲಾಗಿದೆ.
ಹೊರ ಜಿಲ್ಲೆ ಪೊಲೀಸ್ ಅಧಿಕಾರಿಗಳಿಂದ ತನಿಖೆ
ಪ್ರತಿಭಟನ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪ್ರತಿಭಟನಕಾರರೊಂದಿಗೆ ಚರ್ಚಿಸಿದರು. ಪ್ರಕರಣ ಸಂಬಂಧದ ಲಿಖಿತ ಮನವಿಯನ್ನು ಮೇಲಧಿ ಕಾರಿಗಳ ಗಮನಕ್ಕೆ ತಂದು ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೆ ಒಪ್ಪದ ಕಾರ್ಯಕರ್ತರು ಡಿವೈಎಸ್ಪಿ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಮೇಲಧಿಕಾರಿಗಳೊಂದಿಗೆ ಚರ್ಚಿಸಿ, ವೈಎಸ್ಪಿ ಮುರಳಿ ಹಾಗೂ ಸರ್ಕಲ್ ಇನ್ಪೆಕ್ಟರ್ ವಿವೇಕಾನಂದ ಅವರನ್ನು ಬೇರೆಡೆಗೆ ನಿಯೋಜನೆ ಮಾಡಿ, ಹೊರ ಜಿಲ್ಲೆಯ ಪೊಲೀಸ್ ಅ ಧಿಕಾರಿಗಳಿಂದ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ಮೇರೆಗೆ ಪ್ರತಿಭಟನೆ ವಾಪಸ್ ಪಡೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.