Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

ಕೆಲವೆಡೆ ಹಿಂದೂ, ಮುಸ್ಲಿಂ, ಕ್ರೈಸ್ತರ ಮಧ್ಯೆ ಬಾಂಧವ್ಯ ಬೆಸೆಯುವ ಸೌಹಾರ್ದ ಕಾರ್ಯಕ್ರಮಗಳೂ ನಡೆದವು

Team Udayavani, Sep 17, 2024, 1:08 AM IST

Eid-Milad

ಮಂಗಳೂರು: ಪ್ರವಾದಿ ಮುಹಮ್ಮದ್‌ ಅವರ ಜನ್ಮದಿನ ಅಂಗವಾಗಿ ಈದ್‌ ಮಿಲಾದ್‌(ಮಿಲಾದುನ್ನಬಿ)ಯನ್ನು ಸಂಭ್ರಮ, ಸಡಗರದಿಂದ ಕರಾವಳಿಯಾದ್ಯಂತ ಸೋಮವಾರ ಆಚರಿಸಲಾಯಿತು.

ರವಿವಾರ ರಾತ್ರಿ ಹೆಚ್ಚಿನ ಮಸೀದಿಗಳಲ್ಲಿ ಮೌಲೂದ್‌ ಪಾರಾಯಣ, ಪ್ರವಚನಗಳ ಮೂಲಕ ಪ್ರವಾದಿಯವರ ಸಂದೇಶ ವನ್ನು ನೀಡಲಾಯಿತು. ಬೆಳಗ್ಗೆ ಮಸೀದಿ, ಮದ್ರಸಾಗಳಲ್ಲಿ ಪ್ರವಾದಿ ಜೀವನದ ಸಂದೇಶ ನೀಡಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮುಸಲ್ಮಾನರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಸಿಹಿ ತಿಂಡಿ ಹಂಚಿ, ಪಾನೀಯ ವಿತರಿಸಲಾಯಿತು. ಮಸೀದಿ, ಮದ್ರಸಾಗಳಲ್ಲಿ ತುಪ್ಪದೂಟ, ರೊಟ್ಟಿಯೊಂದಿಗೆ ಮಾಂಸದ ಪದಾರ್ಥ ತಯಾರಿಸಿ ಹಂಚ ಲಾಯಿತು. ಕೆಲವೆಡೆ ಹಿಂದೂ, ಮುಸ್ಲಿಂ, ಕ್ರೈಸ್ತರ ಮಧ್ಯೆ ಬಾಂಧವ್ಯ ಬೆಸೆಯುವ ಸೌಹಾರ್ದ ಕಾರ್ಯಕ್ರಮಗಳೂ ನಡೆದವು. ಮಂಗಳೂರಿನ ಬಂದರು, ಕುದ್ರೋಳಿ, ಬೆಂಗರೆ, ಕಾವೂರು ಮತ್ತಿತರೆಡೆ ಮೆರವಣಿಗೆ ನಡೆಯಿತು.

ಸಂಜೆ ಮಂಗಳೂರಿನ ನಡುಪಳ್ಳಿಯಿಂದ ಹೊರಟ ಮೆರವಣಿಗೆಯು ಬಂದರು ಕೇಂದ್ರ ಜುಮಾ ಮಸೀದಿಗೆ ಬಂದಿತು. ಅಲ್ಲಿ ಮಂಗಳೂರು ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಚಾಲನೆ ನೀಡಿದ ಬಳಿಕ ಬಾಂಬೆ ಲಕ್ಕಿ, ರಾವ್‌ ಆ್ಯಂಡ್‌ ರಾವ್‌ ವೃತ್ತ, ಲೇಡಿಗೋಷನ್‌, ಹಂಪನಕಟ್ಟೆ ಮೂಲಕ ಬಾವುಟಗುಡ್ಡೆ ಈದ್ಗಾ ಮಸೀದಿಗೆ ಆಗಮಿಸಿತು. ಅಲ್ಲಿ ಮೌಲೂದ್‌ ಪಾರಾಯಣ ಮೂಲಕ ಮೆರವಣಿಗೆ ಮುಕ್ತಾಯಗೊಂಡಿತು.

ಮಿಲಾದ್‌ ರ್‍ಯಾಲಿ
ಮಂಗಳೂರು ಸೋಷಿಯಲ್‌ ಸರ್ವಿಸ್‌ ಸೆಂಟರ್‌ ಇದರ ವತಿಯಿಂದ ಸಾರ್ವಜನಿಕ ಮಿಲಾದ್‌ ರ್‍ಯಾಲಿಯು ಸೋಮವಾರ ನಗರದಲ್ಲಿ ನಡೆಯಿತು. ಕುದ್ರೋಳಿಯ ನಡುಪಳ್ಳಿ ಜುಮಾ ಮಸೀದಿಯಿಂದ ಆರಂಭಗೊಂಡ ರ್‍ಯಾಲಿಯು ಮಂಗಳೂರಿನ ಕೇಂದ್ರ ಜುಮಾ ಮಸೀದಿ ರಸ್ತೆಯಾಗಿ ಬಾವುಟಗುಡ್ಡದ ಈದ್ಗಾ ಮಸೀದಿವರೆಗೆ ನಡೆಯಿತು. ರ್ಯಾಲಿಯಲ್ಲಿ ಬಂದರ್‌, ಕುದ್ರೋಳಿ ಪರಿಸರದ ಮದ್ರಸ ವಿದ್ಯಾರ್ಥಿಗಳ ಆಕರ್ಷಕ ದಫ್‌ ಪ್ರದರ್ಶನವಿತ್ತು.

ಕೇಂದ್ರ ಜುಮಾ ಮಸೀದಿಯ ಬಳಿ ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್‌ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಮೀಲಾದ್‌ ರ್ಯಾಲಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಮಂಗಳೂರು ಸೋಷಿಯಲ್‌ ಸರ್ವಿಸ್‌ ಸೆಂಟರ್‌ ಅಧ್ಯಕ್ಷ ಕೆ.ಪಿ. ಅಬ್ದುಲ್‌ ರಶೀದ್‌, ಗೌರವಾಧ್ಯಕ್ಷ ಹಾಗೂ ಮಾಜಿ ಮೇಯರ್‌ ಕೆ. ಅಶ್ರಫ್‌, ಉಪಾಧ್ಯಕ್ಷ ಸಂಶುದ್ದೀನ್‌ ಬಂದರ್‌, ಅಶ್ರಫ್‌ ಹಳೆಮನೆ, ಕೋಶಾಧಿಕಾರಿ ಸಫಾ ಸಲೀಂ, ಪ್ರಧಾನ ಕಾರ್ಯದರ್ಶಿ ರಿಯಾಝ್ ಕಚ್‌ಮನ್‌, ಕಾರ್ಯದರ್ಶಿ ರಿಯಾ ಝುದ್ದೀನ್‌ ಸಹಿತ ಅಪಾರ ಸಂಖ್ಯೆಯಲ್ಲಿ ಮುಸ್ಲಿಮರು ಪಾಲ್ಗೊಂಡಿದ್ದರು. ಸೌಹಾರ್ದ ರ್‍ಯಾಲಿ ಈದ್‌ ಮೆರವಣಿಗೆಯಲ್ಲಿ ಇದೇ ಮೊದಲ ಬಾರಿಗೆ ಕೇಸರಿ ಧ್ವಜವೂ ಕಾಣಿಸಿಕೊಂಡು ಸೌಹಾರ್ದ ಮೆರೆಯಲಾಗಿದೆ.

ಉಡುಪಿಯಲ್ಲಿ ದಫ್ ಕುಣಿತ ಆಕರ್ಷಣೆ:
ಉಡುಪಿ ಜಿಲ್ಲೆಯ ಕಾಪು, ಉಚ್ಚಿಲ, ಮೂಳೂರು, ಪಡುಬಿದ್ರಿ, ಕಾರ್ಕಳ, ಶಿರ್ವ, ಕಟಪಾಡಿ, ನೇಜಾರು, ದೊಡ್ಡಣಗುಡ್ಡೆ, ಕುಂದಾಪುರ ಕೋಡಿ ಸಹಿತ ಹಲವು ಕಡೆಗಳಲ್ಲಿ ಈದ್‌ ಮಿಲಾದ್‌ ಮೆರವಣಿಗೆ, ಪ್ರವಾದಿ ಮುಹಮ್ಮದ್‌ ಪೈಗಂಬರ ಸಂದೇಶ ಸಾರುವ ಹಾಡುಗಳು, ದಫ್ ಕುಣಿತ ಆಕರ್ಷಣೀಯವಾಗಿತ್ತು. ಮೆರವಣಿಗೆಯಲ್ಲಿ ಸಾಗಿ ಬಂದವರಿಗೆ ಸಿಹಿತಿಂಡಿ ಹಾಗೂ ತಂಪು ಪಾನೀಯಗಳನ್ನು ವಿತರಿಸಲಾಯಿತು. ಕೆಲವು ಕಡೆಗಳಲ್ಲಿ ಹಿಂದೂಗಳು ಕೈಜೋಡಿಸಿ ಸೌಹಾರ್ದ ಮೆರೆದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.