Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ


Team Udayavani, Sep 17, 2024, 7:00 AM IST

1-ccrr

ಮುಂಬರುವ ಭಾರತ-ಬಾಂಗ್ಲಾ ದೇಶ ನಡುವಿನ ಟೆಸ್ಟ್‌ ಸರಣಿ ಅನೇಕ ದಾಖಲೆಗಳನ್ನು ತೆರೆದಿಡಲು ಸಜ್ಜಾಗಿದೆ. ತಂಡ ಹಾಗೂ ವೈಯಕ್ತಿಕ ಸಾಧನೆಗಳ ಮೂಲಕ ಈ ಸರಣಿ ಕುತೂಹಲ ಹುಟ್ಟಿಸಿದೆ. ಇಂಥ ಕೆಲವು ದಾಖಲೆಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ.

ಗೆಲುವು-ಸೋಲು ಸಮ ಸಮ
1932ರಲ್ಲಿ ಟೆಸ್ಟ್‌ ಮಾನ್ಯತೆ ಪಡೆ ದಂದಿನಿಂದಲೂ ಭಾರತದ ಸೋಲಿನ ಸಂಖ್ಯೆ ಗೆಲುವಿಗಿಂತ ಜಾಸ್ತಿಯೇ ಇದೆ. ಒಮ್ಮೆಯೂ ಗೆಲುವು “ಸೋಲಿನ ಗಡಿ’ ದಾಟಿ ಮುನ್ನಡೆದದ್ದಿಲ್ಲ. ಇದೀಗ ಗೆಲುವು-ಸೋಲುಗಳ ದಾಖಲೆ ಸಮನಾಗಿದೆ (178). ಸೋಲನ್ನು ಮೀರಿ ನಿಲ್ಲುವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ.

ಕೊಹ್ಲಿ 9 ಸಾವಿರ ರನ್‌
ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 9 ಸಾವಿರ ರನ್‌ ಕ್ಲಬ್‌ ಸೇರಲು ಇನ್ನು ಕೇವಲ 152 ರನ್‌ ಮಾಡಿದರೆ ಸಾಕು. ಆಗ ಅವರು 9 ಸಾವಿರ ರನ್‌ ಗಳಿಸಿದ ಭಾರತದ 4ನೇ ಕ್ರಿಕೆಟಿಗನಾಗಿ ಮೂಡಿಬರಲಿದ್ದಾರೆ. ಉಳಿದವರೆಂದರೆ ಸಚಿನ್‌ ತೆಂಡುಲ್ಕರ್‌ (15,921), ರಾಹುಲ್‌ ದ್ರಾವಿಡ್‌ (13,265) ಮತ್ತು ಸುನೀಲ್‌ ಗಾವಸ್ಕರ್‌ (10,122).

ರಹೀಂ 6 ಸಾವಿರ ರನ್‌
ಬಾಂಗ್ಲಾದ ಸೀನಿಯರ್‌ ಬ್ಯಾಟರ್‌ ಮುಶ್ಫಿಕರ್‌ ರಹೀಂ ಟೆಸ್ಟ್‌ ಕ್ರಿಕೆಟ್‌ನಲ್ಲಿ 6 ಸಾವಿರ ರನ್‌ ಗಡಿಯಲ್ಲಿ ನಿಂತಿದ್ದಾರೆ. ಇದಕ್ಕೆ ಬೇಕಿರುವುದಿನ್ನು 108 ರನ್‌ ಮಾತ್ರ. ಆಗ ರಹೀಂ ಬಾಂಗ್ಲಾ ಪರ ಈ ಮೈಲುಗಲ್ಲು ನೆಟ್ಟ ಮೊದಲ ಕ್ರಿಕೆಟಿಗನೆಂಬ ಹಿರಿಮೆಗೆ ಭಾಜನರಾಗಲಿದ್ದಾರೆ.

ಜಡೇಜ 300 ವಿಕೆಟ್‌
ಆಲ್‌ರೌಂಡರ್‌ ರವೀಂದ್ರ ಜಡೇಜ 300 ಟೆಸ್ಟ್‌ ವಿಕೆಟ್‌ಗಳಿಂದ ಸ್ವಲ್ಪವೇ ದೂರದಲ್ಲಿದ್ದಾರೆ. ಅವರಿನ್ನು 6 ವಿಕೆಟ್‌ ಉರುಳಿಸಿದರೆ ಸಾಕು. ಆಗ 300 ವಿಕೆಟ್‌ ಕೆಡವಿದ ಭಾರತದ 6ನೇ ಬೌಲರ್‌ ಆಗಲಿದ್ದಾರೆ. ಹಾಗೆಯೇ 300 ವಿಕೆಟ್‌ ಪ್ಲಸ್‌ 3 ಸಾವಿರ ರನ್‌ ಸಾಧನೆಗೈದ ವಿಶ್ವದ 11ನೇ, ಭಾರತದ 2ನೇ ಸವ್ಯಸಾಚಿಯಾಗಲಿದ್ದಾರೆ. ಕಪಿಲ್‌ದೇವ್‌ ಮತ್ತು ಅಶ್ವಿ‌ನ್‌ ಉಳಿದಿಬ್ಬರು.

ತೈಜುಲ್‌ ಇಸ್ಲಾಮ್‌ 200 ವಿಕೆಟ್‌
ಬಾಂಗ್ಲಾದ ಎಡಗೈ ಸ್ಪಿನ್ನರ್‌ ತೈಜುಲ್‌ ಇಸ್ಲಾಮ್‌ 200 ವಿಕೆಟ್‌ ಪೂರ್ತಿಗೊಳಿಸಲು ಐದೇ ವಿಕೆಟ್‌ ಉರುಳಿಸಬೇಕಿದೆ. ಆಗ ಈ ಸಾಧನೆಗೈದ ಬಾಂಗ್ಲಾದ 2ನೇ ಕ್ರಿಕೆಟಿಗನಾಗಲಿದ್ದಾರೆ. ಶಕಿಬ್‌ ಅಲ್‌ ಹಸನ್‌ ಮೊದಲಿಗ (245 ವಿಕೆಟ್‌).

ಮೊದಲ ಜಯದ ನಿರೀಕ್ಷೆ

ಬಾಂಗ್ಲಾದೇಶ ಟೆಸ್ಟ್‌ ಕ್ರಿಕೆಟ್‌ನಲ್ಲಿ ಈವರೆಗೆ ಭಾರತವನ್ನು ಸೋಲಿಸಿಲ್ಲ. ಆಡಿದ 13 ಪಂದ್ಯಗಳಲ್ಲಿ 11 ಸೋಲನುಭವಿಸಿದೆ. 2 ಡ್ರಾ ಆಗಿವೆ. ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಮಾಡಿದ ಕಾರಣ ಈ ಬಾರಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

27 ಸಾವಿರ ರನ್‌ ಗಡಿಯಲ್ಲಿ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಸಾವಿರ ರನ್‌ ಪೂರೈಸಲು ವಿರಾಟ್‌ ಕೊಹ್ಲಿ ಅವರಿಗೆ ಕೇವಲ 58 ರನ್‌ ಅಗತ್ಯವಿದೆ. ಆಗ ಅವರು ಅತೀ ವೇಗದಲ್ಲಿ ಈ ಗಡಿ ತಲುಪಿದ ಕ್ರಿಕೆಟಿಗನಾಗಲಿದ್ದಾರೆ. ದಾಖಲೆ ತೆಂಡುಲ್ಕರ್‌ ಹೆಸರಲ್ಲಿದೆ (623 ಇನ್ನಿಂಗ್ಸ್‌). ಕೊಹ್ಲಿ ಸದ್ಯ 591 ಇನ್ನಿಂಗ್ಸ್‌ ಆಡಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.