Scheme: ದಂಡ ಸಹಿತ ಪಾನ್‌-ಆಧಾರ್‌ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!

ದಕ್ಷಿಣ ಕನ್ನಡದಲ್ಲಿ 8,503, ಉಡುಪಿಯಲ್ಲಿ 4,610 ಮಂದಿ ಐಟಿ/ಜಿಎಸ್‌ಟಿಯಿಂದಾಗಿ ಗೃಹಲಕ್ಷ್ಮಿ ಯೋಜನೆಯಿಂದ ಹೊರಕ್ಕೆ!

Team Udayavani, Sep 17, 2024, 7:20 AM IST

Pan-Adhar

ಸುಳ್ಯ: ಪಾನ್‌(ಪರ್ಮನೆಂಟ್‌ ಅಕೌಂಟ್‌ ನಂಬರ್‌)ಗೆ ಕೊನೆಯ ಹಂತದಲ್ಲಿ ದಂಡ ಸಹಿತವಾಗಿ ಆಧಾರ್‌ ಜೋಡಣೆ ಮಾಡಿಸಿಕೊಂಡ ಬಡವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರೀಗ ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು, ಸರಕಾರದ ಕೆಲವು ಯೋಜನೆಗಳ ಫ‌ಲಾನುಭವಿ ಪಟ್ಟಿಯಿಂದ ಹೊರಗುಳಿದಿದ್ದಾರೆ!

ಪಾನ್‌ ಕಾರ್ಡ್‌ಗೆ ವಿಳಂಬವಾಗಿ ಆಧಾರ್‌ ಲಿಂಕ್‌ ಜೋಡಿಸಿದ ಸಂದರ್ಭದಲ್ಲಿ ದಂಡದ ರೂಪದಲ್ಲಿ ಪಾವತಿಸಲಾದ 1 ಸಾ.ರೂ. ಆದಾಯ ತೆರಿಗೆ ಇಲಾಖೆಗೆ ಪಾವತಿಯಾಗಿದ್ದು, ಈ ಕಾರಣದಿಂದ ಅವರು ಈಗ ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿದ್ದಾರೆ ಎನ್ನಲಾಗಿದೆ. ಇದರಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದವರೂ ಇದ್ದಾರೆ. ಅಂಥವರು ಸರಕಾರದ ವಿವಿಧ ಸವಲತ್ತುಗಳಿಂದ ವಂಚಿತರಾಗುವ ಭೀತಿ ಎದುರಾಗಿದೆ.

ಗೃಹಲಕ್ಷ್ಮಿಯಿಂದ ಹೊರಕ್ಕೆ
ಈ ರೀತಿ ಆದಾಯ ತೆರಿಗೆದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಡ ಮಹಿಳೆಯರಿಗೆ ಈಗ ರಾಜ್ಯ ಸರಕಾರದ ಗೃಹಲಕ್ಷ್ಮಿ  ಯೋಜನೆಯ ಹಣ ಬರುತ್ತಿಲ್ಲ. ಜತೆಗೆ ಮನೆ ಕಟ್ಟಲು ಸಾಲ ಪಡೆಯುವ ಉದ್ದೇಶಕ್ಕಾಗಿ ಐಟಿ ರಿಟರ್ನ್ಸ್ ಸಲ್ಲಿಸಿದವರೂ ಗೃಹಲಕ್ಷಿ$¾ ಫ‌ಲಾನುಭವವಿಗಳ ಪಟ್ಟಿಯಿಂದ ಹೊರಗಿದ್ದಾರೆ ಎನ್ನಲಾಗಿದ್ದು, ಇದು ಇಲಾಖೆ ಅಧಿಕಾರಿಗಳಿಗೂ ತಲೆ ನೋವು ತರುತ್ತಿದೆ.

ಮನವಿ ಸ್ವೀಕಾರ
ಈ ರೀತಿಯ ಕಾರಣಗಳಿಂದ ಗೃಹಲಕ್ಷಿ$¾ಯಿಂದ ವಂಚಿತರಾದರಿಗೆ ಯೋಜನೆಯನ್ನು ಮುಂದುವರಿಸಲು ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳು ಮನವಿ ಪತ್ರಗಳನ್ನು ಪಡೆದುಕೊಳ್ಳಲು ಆರಂಭಿಸಿದ್ದಾರೆ. ಅಂತಹವರು ಐಟಿ/ಜಿಎಸ್‌ಟಿ ಪಾವತಿದಾರರಲ್ಲ ಎಂಬ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದುಕೊಳ್ಳುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡದ ವಿವರ
ಗೃಹಲಕ್ಷ್ಮಿ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ 337 ಮಂದಿ ಐಟಿ ಪಾವತಿದಾರರು ಹಾಗೂ 226 ಮಂದಿ ಜಿಎಸ್‌ಟಿ ಪಾವತಿದಾರರು ಎಂದು ದಾಖಲಾಗಿದೆ. ಬೆಳ್ತಂಗಡಿಯಲ್ಲಿ 716 ಐಟಿ, 613 ಜಿಎಸ್‌ಟಿ, ಕಡಬದಲ್ಲಿ 457 ಐಟಿ, 180 ಜಿಎಸ್‌ಟಿ, ಮಂಗಳೂರಿನಲ್ಲಿ 1,470 ಐಟಿ, 976 ಜಿಎಸ್‌ಟಿ, ಮೂಡುಬಿದಿರೆಯಲ್ಲಿ 228 ಐಟಿ, 75 ಜಿಎಸ್‌ಟಿ, ಮೂಲ್ಕಿಯಲ್ಲಿ 180 ಐಟಿ, 93 ಜಿಎಸ್‌ಟಿ, ಪುತ್ತೂರಿನಲ್ಲಿ 586 ಐಟಿ, 436 ಜಿಎಸ್‌ಟಿ, ಉಳ್ಳಾಲದಲ್ಲಿ 571 ಮಂದಿ ಐಟಿ, 347 ಮಂದಿ ಜಿಎಸ್‌ಟಿ ಪಾವತಿದಾರರು ಎಂದು ಒಟ್ಟು ಜಿಲ್ಲೆಯಲ್ಲಿ 8,503 ಮಂದಿಯ ಅರ್ಜಿ ತಿರಸ್ಕೃತಗೊಂಡಿದೆ. ಸುಳ್ಯ ತಾಲೂಕಿನಿಂದ 150ಕ್ಕೂ ಅಧಿಕ ಮಂದಿ ತಾವು ಐಟಿ/ಜಿಎಸ್‌ಟಿ ಪಾವತಿದಾರರಲ್ಲ ಎಂಬುದಾಗಿ ಮನವಿ ಹಾಗೂ ಇತರ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆ ಮಾಹಿತಿ
ಉಡುಪಿ ಜಿಲ್ಲೆಯಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವ 4,610 ಮಂದಿ ಆದಾಯ ತೆರಿಗೆ ಪಾವತಿದಾರರು ಕಂಡು ಬಂದಿದ್ದಾರೆ. ಇದರಲ್ಲಿ ಕೆಲವರಿಗೆ ಗೃಹಲಕ್ಷ್ಮಿ ಹಣ ಬರುವುದು ನಿಂತಿದೆ. 452 ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದರೂ ನೇರವಾಗಿ ಅವರಿಗೆ ಸಂಬಂಧಿಸಿರದ ಕಾರಣಕ್ಕೆ ಈ ಬಗ್ಗೆ ಲಿಖೀತ ದೃಢೀಕರಣ ನೀಡಿದ್ದಾರೆ. ಆ ದೃಢೀಕರಣ ಪತ್ರವನ್ನು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ಆದಾಯ ತೆರಿಗೆ ಪಾವತಿ ಮಾಡುವವರಿಗೆ ತಾನಾಗಿಯೇ ಸೌಲಭ್ಯ ಕಡಿತವಾಗುತ್ತದೆ. ಗೃಹಲಕ್ಷ್ಮಿ ಸಾಫ್ಟ್ ವೇರ್‌ ರೂಪಿಸುವಾಗಲೇ ಪಾನ್‌ ಕಾರ್ಡ್‌-ಆಧಾರ್‌ ಕಾರ್ಡ್‌, ಆದಾಯ ತೆರಿಗೆ ಪಾವತಿ ಇತ್ಯಾದಿ ಲಿಂಕ್‌ ಆಗಿರುವುದರಿಂದ ಅವರಿಗೆ ಸೌಲಭ್ಯ ಹೋಗುವುದಿಲ್ಲ ಎಂದು ಜಿಲ್ಲಾಮಟ್ಟದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಗೃಹಲಕ್ಷ್ಮಿಯೋಜನೆಗೆ ಸಂಬಂಧಿಸಿ ಹಲವರಿಗೆ ಆದಾಯ ತೆರಿಗೆ ಪಾವತಿದಾರರು ಎಂಬುದಾಗಿ ಹಣ ಬಂದಿಲ್ಲ. ಆದರೆ ಪರಿಶೀಲನೆ ವೇಳೆ ಕೆಲವರು ಆದಾಯ ತೆರಿಗೆ ಪಾವತಿದಾರರಲ್ಲ ಎಂಬುದು ತಿಳಿದು ಬಂದಿದೆ. ದಂಡ ಸಹಿತ ಪಾನ್‌ಗೆ ಆಧಾರ್‌ ಜೋಡಣೆ ಮಾಡಿಸಿರುವವರನ್ನೂ ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ ಸೇರಿಸಿರುವುದು ಕಂಡುಬಂದಿದೆ. ಇದು ಸರಿಯಲ್ಲ. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ. ಸಮಸ್ಯೆ ಶೀಘ್ರ ಪರಿಹಾರ ಕಾಣುವ ನಿರೀಕ್ಷೆ ಇದೆ.”
– ಭರತ್‌ ಮುಂಡೋಡಿ, ಜಿಲ್ಲಾಧ್ಯಕ್ಷರು, ಗ್ಯಾರಂಟಿ ಅನುಷ್ಠಾನ ಸಮಿತಿ ದಕ್ಷಿಣ ಕನ್ನಡ

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.