BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ


Team Udayavani, Sep 17, 2024, 12:33 PM IST

9

ಬೆಂಗಳೂರು:  ಬಿಗ್‌ ಬಾಸ್‌ ಕನ್ನಡ ಸೀಸನ್‌ -11 (Bigg Boss Kannada-11) ಆರಂಭಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಸಾಕಷ್ಟು ಕುತೂಹಲ ಹುಟ್ಟಿಸಿದ್ದ ನಿರೂಪಕ ಯಾರೆನ್ನುವ ಪ್ರಶ್ನೆಗೆ ಪ್ರೋಮೊ ಬಿಟ್ಟು ಆಯೋಜಕರು ಸಸ್ಪೆನ್ಸ್‌ ರಿವೀಲ್‌ ಮಾಡಿದ್ದಾರೆ.

ಕಳೆದ 10 ಸೀಸನ್‌ಗಳನ್ನು ನಿರೂಪಣೆ ಮಾಡುತ್ತಾ ಬಂದಿರುವ ಕಿಚ್ಚ ಸುದೀಪ್‌ (Kiccha sudeep) ಅವರೇ ಈ ಬಾರಿಯೂ ಬಿಗ್‌ ಬಾಸ್‌ಗೆ ʼಕಿಂಗ್‌ʼ ಆಗಲಿದ್ದಾರೆ. ಕಾರ್ಯಕ್ರಮದ ಪ್ರೋಮೊ ರಿಲೀಸ್‌ ಆದ ಬೆನ್ನಲ್ಲೇ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯೂ ಜೋರಾಗಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರತಿಬಾರಿಯಂತೆ ಈ ಬಾರಿಯೂ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ. ನಾನಾ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳು ಈ ಪಟ್ಟಿಯಲ್ಲಿದ್ದಾರೆ. ಯಾರೆಲ್ಲಾ ಆ ಸಂಭಾವ್ಯ ಸ್ಪರ್ಧಿಗಳು ಇಲ್ಲಿದೆ ವಿವರ..

ಹುಲಿ ಕಾರ್ತಿಕ್:‌ ʼಗಿಚ್ಚಿ ಗಿಲಿ ಗಿಲಿ-3ʼ ಮೂಲಕ ಪ್ರೇಕ್ಷಕರ ಮನೆಮನವನ್ನು ಗೆದ್ದು, ಕಾರ್ಯಕ್ರಮ ವಿಜೇತರಾಗಿರುವ ಹುಲಿ ಕಾರ್ತಿಕ್‌(Huli Kartik) ಅವರು ಈ ಬಾರಿ ಬಿಗ್‌ ಬಾಸ್‌ ಮನೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಅವರಿಗೆ ಬಿಗ್‌ ಬಾಸ್‌ ಕಡೆಯಿಂದ ಆಫರ್‌ ಬಂದಿದೆ ಎಂದು ಹೇಳಲಾಗುತ್ತಿದೆ.

ಗೌರವ್‌ ಶೆಟ್ಟಿ: ʼಅಮೃತಾಂಜನ್‌ʼ ಸೇರಿದಂತೆ ಹತ್ತಾರು ಶಾರ್ಟ್‌ ಮೂವೀಸ್‌ ಹಾಗೂ ಕಾಮಿಡಿ ವಿಡಿಯೋಗಳಲ್ಲಿ ಕಾಣಿಸಿಕೊಂಡು, ಯೂಟ್ಯೂಬ್‌ನಲ್ಲಿ ಮಿಂಚಿರುವ ಗೌರವ್‌ ಶೆಟ್ಟಿ (Gaurav Shetty) ಅವರಿಗೆ ಬಿಗ್‌ ಬಾಸ್‌ ಮನೆಗೆ ಆಹ್ವಾನ ನೀಡಲಾಗಿದೆ ಎನ್ನಲಾಗುತ್ತಿದೆ.

ಮಾನಸ ಸಂತು: ಬಿಗ್‌ ಬಾಸ್‌ ಸೀಸನ್‌ -10ನಲ್ಲಿ ಸ್ಪರ್ಧಿಯಾಗಿದ್ದ ಕಾಮಿಡಿಯನ್‌ ತುಕಾಲಿ ಸಂತು ಅವರ ಪತ್ನಿ ಮಾನಸ (Manasa Santu) ಈಗಾಗಲೇ ಪ್ರೇಕ್ಷಕರಿಗೆ ಪರಿಚಯವಿರುವ ಹೆಸರು. ತನ್ನ ಹಾಸ್ಯ ಪ್ರಜ್ಞೆಯಿಂದ ಗಮನ ಸೆಳೆದಿರುವ ಮಾನಸ, ಕಿರುತೆರೆ ಶೋಗಳಲ್ಲೂ ಕಾಣಿಸಿಕೊಂಡಿದ್ದಾರೆ.

ಕಳೆದ ಸೀಸನ್‌ನಲ್ಲಿ ಬಿಗ್‌ ಬಾಸ್‌ ಮನೆಗೆ ಅತಿಥಿಯಾಗಿ ಬಂದು ಗಮನ ಸೆಳೆದಿದ್ದರು. ಈ ಬಾರಿ ಅವರು ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ಎನ್ನಲಾಗುತ್ತಿದೆ.

ನಟಿ ಪ್ರೇಮಾ: ಕನ್ನಡ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ನಮ್ಮೂರ ಮಂದಾರ ಹೂವೆ, ʼಚಂದ್ರಮುಖಿ ಪ್ರಾಣಸಖಿʼ , ʼಉಪೇಂದ್ರʼ ಅಂತಹ ಹಿಟ್‌ ಸಿನಿಮಾಗಳಲ್ಲಿ ನಟಿಸಿ, ತೆಲುಗು, ಮಲಯಾಳಂನಲ್ಲೂ ಮಿಂಚಿದ್ದ ನಟಿ ಪ್ರೇಮಾ (Actress Prema), ಇತ್ತೀಚೆಗಿನ ವರ್ಷದಲ್ಲಿ ನಟನೆ ಬಿಟ್ಟು ಕಿರುತೆರೆ ಶೋಗಳಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ.

ಬಿಗ್‌ ಬಾಸ್‌ ಮನೆಗೆ ಪ್ರೇಮಾ ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ.

ಹರೀಶ್ ನಾಗರಾಜ್: ಪ್ರತಿಬಾರಿ ಬಿಗ್‌ ಬಾಸ್‌ ಮನೆಗೆ ನಾನಾ ಕ್ಷೇತ್ರದಿಂದ ಸ್ಪರ್ಧಿಗಳು ಬರುತ್ತಾರೆ. ಕಳೆದ ವರ್ಷ ಗೌರೀಶ್‌ ಅಕ್ಕಿ ಪತ್ರಿಕೋದ್ಯಮ ಕ್ಷೇತ್ರದಿಂದ ದೊಡ್ಮನೆಗೆ ಹೋಗಿದ್ದರು.

ಈ ಬಾರಿ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಕಳೆದ ಅನೇಕ ವರ್ಷದಿಂದ ನ್ಯೂಸ್ ಆ್ಯಂಕರ್‌ ಆಗಿ ಗುರುತಿಸಿಕೊಂಡಿರುವ ಹರೀಶ್ ನಾಗರಾಜ್ (Harish Nagaraj) ಅವರು ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಆಗುತ್ತಾರೆ ಎಂದು ಹೇಳಲಾಗುತ್ತಿದೆ.

ಐಶ್ವರ್ಯಾ ರಂಗರಾಜನ್: ʼಮಗಳು ಜಾನಕಿʼ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ಗಾಯಕಿ ಐಶ್ವರ್ಯಾ ರಂಗರಾಜನ್ (Aishwarya Rangarajan) ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗುತ್ತಾರೆ ಎನ್ನಲಾಗುತ್ತಿದೆ.

ಅದ್ವಿತಿ ಶೆಟ್ಟಿ ಹಾಗೂ ಅಶ್ವಿತಿ ಶೆಟ್ಟಿ : ಕನ್ನಡ ಚಿತ್ರರಂಗದಲ್ಲಿ ನಟಿಯರಾಗಿ ಗುರುತಿಸಿಕೊಂಡಿರುವ ಕರಾವಳಿಯ ಅವಳಿ ಸಹೋದರಿಯರು ಅದ್ವಿತಿ ಶೆಟ್ಟಿ(Adhvithi Shetty) ಹಾಗೂ ಅಶ್ವಿತಿ ಶೆಟ್ಟಿ (ASHVITHI SHETTY) ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಮೂಲ್ಯ ಭಾರದ್ವಾಜ್: ಕಿರುತೆರೆ ನಟಿಯಾಗಿ ಗುರುತಿಸಿಕೊಂಡು, ‘ದಾಸ ಪುರಂದರ’ ಹಾಗೂ ‘ಬೃಂದಾವನ’ಧಾರಾವಾಹಿಗಳಲ್ಲಿ ನಟಿಸಿ ಮನೆ-ಮನದ ಪ್ರೀತಿ ಪ್ರೋತ್ಸಾಹವನ್ನು ಗಳಿಸಿರುವ ನಟಿ ಅಮೂಲ್ಯ ಭಾರದ್ವಾಜ್ (Amulya Bharadwaj) ಈ ಬಾರಿ ದೊಡ್ಡನೆ ಆಟಕ್ಕೆ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.

ಭವ್ಯಾ ಗೌಡ: ಟಿಕ್‌ ಟಾಕ್ ನಲ್ಲಿ ಖ್ಯಾತಿಗಳಿಸಿ,  ಕಿರುತೆರೆಯ ʼಗೀತಾʼ ಧಾರಾವಾಹಿಯಲ್ಲಿ ಅಭಿನಯಿಸಿ ಗಮನ ಸೆಳೆದಿರುವ ನಟಿ ಭವ್ಯಾ ಗೌಡ (Bhavya Gowda) ಅವರ ಹೆಸರು ಕೂಡ ಬಿಗ್‌ ಬಾಸ್‌ ಸ್ಪರ್ಧಿಯ ಲಿಸ್ಟ್‌ನಲ್ಲಿ ಬರುತ್ತಿದೆ.

ದೀಪಕ್‌ ಗೌಡ: ʼನಮ್ಮನೆ ಯುವರಾಣಿʼ ಸೀರಿಯಲ್‌ನಲ್ಲಿ ʼಅನಿಕೇತ್ʼ ಆಗಿ ಖ್ಯಾತಿ ಪಡೆದ ದೀಪಕ್‌ ಗೌಡ (Deepak Gowda) ಬಿಗ್‌ ಬಾಸ್‌ ಮನೆಗೆ ಎಂಟ್ರಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಕ್ಷಯ್‌ ನಾಯಕ್‌: ʼಒಲವಿನ ನಿಲ್ದಾಣʼ ಸೀರಿಯಲ್‌ನಲ್ಲಿ ಸಿದ್ಧಾಂತ್ ಪಾತ್ರದ ಮೂಲಕ ಗಮನ ಸೆಳೆದು, ʼಕಸ್ತೂರಿ ನಿವಾಸʼದಲ್ಲೂ ಮಿಂಚಿರುವ ಅಕ್ಷಯ್‌ ನಾಯಕ್‌ (Akshay Nayak) ಬಿಗ್‌ ಬಾಸ್‌ ಮನೆಗೆ ಬರ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಲೇಖಿ ಗೋಸ್ವಾಮಿ: ʼಲೇಖಿ ರೈಡರ್ʼ ಎಂಬ ಯೂಟ್ಯೂಬ್‌ ಚಾನೆಲ್‌ ನಿಂದ ಖ್ಯಾತಿ ಗಳಿಸಿರುವ ಲೇಖಿ ಗೋಸ್ವಾಮಿ(Lekhi Goswami) ಈ ಬಾರಿ ‘ಬಿಗ್ ಬಾಸ್ ʼ ಸ್ಪರ್ಧಿಯಾಗಿ ಎಂಟ್ರಿ ಆಗಲಿದ್ದಾರೆ ಎನ್ನಲಾಗುತ್ತಿದೆ.

ಇತರೆ ಹೆಸರುಗಳು.. ಇವರುಗಳಲ್ಲದೆ ರೀಲ್ಸ್ ರೇಷ್ಮಾ, ಚಂದ್ರಪ್ರಭ, ರಾಘವೇಂದ್ರ, ಜಾಹ್ನವಿ, ಶರ್ಮಿತಾ ಗೌಡ, ನಟ ತ್ರಿವಿಕ್ರಮ್, ನಟಿ ಸುಕೃತಾ ನಾಗ್, ನಟಿ ಗೌತಮಿ ಜಾಧವ್, ಶರತ್ ಕುಮಾರ್ ಹೆಸರುಗಳೂ ಇವೆ ಬಿಗ್‌ ಬಾಸ್‌ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.

ಇದೇ ಸೆ.29ರಿಂದ ಬಿಗ್‌ ಬಾಸ್‌ ಗ್ರ್ಯಾಂಡ್‌ ಆರಂಭಗೊಳ್ಳಲಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್

BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.