Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ
ಕೆಸರು ಗದ್ದೆಯಂತಾದ ಅಡ್ಯಾರ್ಕಟ್ಟೆ ರಸ್ತೆ
Team Udayavani, Sep 17, 2024, 2:17 PM IST
ಅಡ್ಯಾರ್: ನಗರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರ ಅಡ್ಯಾರ್ ಕಟ್ಟೆಯಿಂದ ಅಡ್ಯಾರ್ ಪದವು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರು ಗದ್ದೆಯಂತಾಗಿದೆ. ವಾಹನಗಳ ಸಂಚಾರಕ್ಕೆ, ಜನ ನಡೆದುಕೊಂಡು ಹೋಗಲು ಸಂಕಷ್ಟ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಅಡ್ಯಾರ್ ಕಟ್ಟೆಯಿಂದ ಕೆಮಂಜೂರು ರೈಲ್ವೇ ಟ್ರಾಫಿಕ್ ವರೆಗಿನ ಸುಮಾರು ಅರ್ಧ ಕಿ.ಮೀ. ರಸ್ತೆಯಲ್ಲಿ ಮಳೆಗಾಲದ ಆರಂಭದಲ್ಲೇ ಅಲ್ಲಲ್ಲಿ ಗುಂಡಿ ಬಿದ್ದು ಹದಗೆಟ್ಟು ಸಂಚಾರಕ್ಕೆ ಅಡ್ಡಿಯಾಗಿತ್ತು. ಕಳೆದ ವಾರ ಈ ಗುಂಡಿಗಳಿಗೆ ಮಣ್ಣು ಸುರಿದು ಮುಚ್ಚುವ ಕೆಲಸ ನಡೆದಿತ್ತು. ಆದರೆ ಮಳೆ ಈ ಮಣ್ಣು ಕೆಸರು ರಾಡಿಯಾಗಿದೆ. ಟಿಪ್ಪರ್, ಲಾರಿ, ಟೆಂಪೋ ಸಹಿತ ವಿವಿಧ ಘನ ವಾಹನಗಳ ಸಂಚಾರವೂ ಈ ರಸ್ತೆಯಲ್ಲಿ ಹೆಚ್ಚಾ ಗಿದ್ದು, ಸಂಪೂರ್ಣವಾಗಿದೆ ಹಾಳಾಗಿದೆ.
ಕೆಲವು ಕಡೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ದ್ವಿಚಕ್ರ ವಾಹನ ಸವಾರರಿಗೆ ಗುಂಡಿ ತಪ್ಪಿಸಿ ವಾಹನ ಚಲಾಯಿಸುವ ಸಾಹಸ ಮಾಡಬೇಕಾದ ಪರಿಸ್ಥಿತಿಯಿದೆ. ದೊಡ್ಡ ವಾಹನಗಳು ಸಾಗು ವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವವರ ಮೇಲೆ ಕೆಸರಿನ ಸಿಂಚನವಾ ಗುತ್ತಿದೆ. ನಿತ್ಯ ಮಳೆಯೂ ಸುರಿಯುತ್ತಿ ರುವುದರಿಂದ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆಯಿದ್ದು, ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
China ಓಪನ್ ಬ್ಯಾಡ್ಮಿಂಟನ್:ಮಾಳವಿಕಾ ಕ್ವಾರ್ಟರ್ ಫೈನಲಿಗೆ
Duleep Trophy Cricket: ಸ್ಯಾಮ್ಸನ್ ಅರ್ಧಶತಕ; ಭಾರತ ‘ಡಿ’ 5ಕ್ಕೆ 306
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.