Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ

ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಎಪಿಎಂಸಿ ಕಾರ್ಯದರ್ಶಿಗೆ ಮನವಿ

Team Udayavani, Sep 17, 2024, 5:51 PM IST

Sagara

ಸಾಗರ: ಅಡಿಕೆ ಮಾರುಕಟ್ಟೆಯಲ್ಲಿ ಕಳಪೆ ಹಾಗೂ ಕಲಬೆರಕೆ ಅಡಕೆ ಬರುತ್ತಿದ್ದು, ಮಲೆನಾಡಿನ ಗುಣಮಟ್ಟದ ಅಡಿಕೆ ತನ್ನ ಬೆಲೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಕಲಬೆರಕೆ ಅಡಿಕೆ ಮಾರಾಟಗಾರರ ಮತ್ತು ಮಿಶ್ರಣ ಮಾಡಿ ಅಡಿಕೆ ಗುಣಮಟ್ಟ ಹಾಳು ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಎಪಿಎಂಸಿ ಕಾರ್ಯದರ್ಶಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಕ್ರಮವಾಗದಿದ್ದರೆ ಸಂಘದಿಂದ ಪ್ರತಿಭಟನೆ:
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ಮಲೆನಾಡು ಭಾಗದಲ್ಲಿ ಸಾಂಪ್ರದಾಯಿಕ ಅಡಿಕೆ ಬೆಳೆಗಾರರಿದ್ದು, ಗುಣಮಟ್ಟದ ಅಡಿಕೆ ಮಾರುಕಟ್ಟೆಗೆ ತರುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕಲಬೆರಕೆ ಹಾಗೂ ಕಳಪೆ ಅಡಿಕೆ ಮಾರುಕಟ್ಟೆಗೆ ವ್ಯಾಪಕವಾಗಿ ಪ್ರವೇಶವಾಗುತ್ತಿದೆ. ಕೆಲವು ಮಧ್ಯವರ್ತಿಗಳು ಅಡಿಕೆ ಕಲಬೆರೆಕೆ ಮೂಲಕ ಅಡಿಕೆಗೆ ಕೆಟ್ಟ ಹೆಸರು ತರುತ್ತಿದ್ದಾರೆ. ಅಡಿಕೆಗೆ ಬಣ್ಣ ಹಾಕಿ ಉತ್ತಮ ಅಡಿಕೆ ಜೊತೆ ಸೇರಿಸಿ ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಇದರಿಂದ ಅಡಿಕೆ ಸೇವನೆ ಮಾಡುವವರ ಆರೋಗ್ಯವೂ ಹದಗೆಡುತ್ತಿದೆ. ಯಾರು ಕಲಬೆರಕೆ ಮಾಡುತ್ತಿದ್ದಾರೋ ಅವರನ್ನು ಬಂಧಿಸಿ. ಮುಂದಿನ 10-15  ದಿನಗಳಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಬೆಳೆಗಾರರ ಸಂಘ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಡಿಕೆ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ:
ಎಪಿಎಂಸಿ ಮಾಜಿ ಅಧ್ಯಕ್ಷ ಚೇತನರಾಜ್ ಕಣ್ಣೂರು ಮಾತನಾಡಿ, ಅಡಿಕೆ ಬೆಳೆಗಾರರ ರಕ್ಷಿಸುವುದು ನಮ್ಮ ಕರ್ತವ್ಯ. ಅಡಿಕೆ ಕಲಬೆರೆಕೆಯಿಂದ ಬೆಳೆಗಾರರ ಹೆಸರು ಹಾಳಾಗುವ ಜೊತೆಗೆ ಅಡಿಕೆ ಗುಣಮಟ್ಟ ಕೆಡುತ್ತಿದೆ. ಕೆಲವು ಮಧ್ಯವರ್ತಿಗಳ  ಕೃತ್ಯದಿಂದಾಗಿ ಅಡಿಕೆ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ತಕ್ಷಣ ಅಧಿಕಾರಿಗಳು ಅಡಿಕೆಗೆ ಬಣ್ಣ ಮಿಶ್ರಣ ಮಾಡುವವರು ಮತ್ತು ಕಳಪೆ ಅಡಿಕೆ ಮಿಶ್ರಣ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಮುಲಾಜಿಲ್ಲದೆ ಕ್ರಮ: ಎಪಿಎಂಸಿ ಕಾರ್ಯದರ್ಶಿ 
ಮನವಿ ಸ್ವೀಕರಿಸಿ ಮಾತನಾಡಿದ ಎಪಿಎಂಸಿ ಕಾರ್ಯದರ್ಶಿ ನಿಜಲಿಂಗಪ್ಪ ತೋಟದ್, ಅಡಿಕೆಗೆ ಬಣ್ಣ ಮಿಶ್ರಣ ಮತ್ತು ಕಳಪೆ ಅಡಕೆ ಬೆರೆಸುವವರ ಬಗ್ಗೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು. ಅಂತಹ ಪ್ರಕರಣ ಕಂಡು ಬಂದಲ್ಲಿ ಕಾನೂನಿನ ಪ್ರಕಾರ ಕ್ರಮ  ಕೈಗೊಳ್ಳಲಾಗುವುದು. ಅಡಕೆ ಕಳಪೆ ಬಗ್ಗೆ ಮಾಹಿತಿ ಇದ್ದವರು 9008063378ಗೆ ಕರೆ ಮಾಡಲು ತಿಳಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಆರ್.ಎಸ್.ಗಿರಿ, ಹಿರಿಯ ಸಹಕಾರಿ ಯು.ಎಚ್.ರಾಮಪ್ಪ ಮಾತನಾಡಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ರವಿಕುಮಾರ್ ಎಚ್.ಎಂ., ಅಡಿಕೆ ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ಭೀಮನಕೋಣೆ ಪ್ಯಾಕ್ಸ್ ಅಧ್ಯಕ್ಷ ರಾಜೇಶ್ ಕೆ.ಕೆ., ವರುಣ ಹೆಗಡೆ, ವೆಂಕಟಗಿರಿ ಕುಗ್ವೆ, ವೆಂಕಟೇಶ್, ನಾಗಾನಂದ, ರಾಜಶೇಖರ ಹಂದಿಗೋಡು ಇನ್ನಿತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.