Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ


Team Udayavani, Sep 17, 2024, 5:32 PM IST

Asian Champions Trophy 2024: ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

ಹುಲುನ್‌ಬಿಯುರ್‌: ಸತತ ಎರಡು ಒಲಿಂಪಿಕ್ಸ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತ ಹಾಕಿ ತಂಡವು ಇದೀಗ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ (Asian Champions Trophy) ಕಿರೀಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಮಂಗಳವಾರ (ಸೆ.17) ಆತಿಥೇಯ ಚೀನಾ ವಿರುದ್ದ ನಡೆದ ಫೈನಲ್‌ ಪಂದ್ಯದಲ್ಲಿ ಭಾರತವು 1-0 ಅಂತರದಿಂದ ಗೆದ್ದುಕೊಂಡಿದೆ.

ಇದು ಭಾರತ ಗೆದ್ದ ಐದನೇ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯಾಗಿದೆ. ಅತ್ಯಂತ ಜಿದ್ದಾಜಿದ್ದಿನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಕೊನೆಯ ಕ್ಷಣದಲ್ಲಿ ಜುಗ್ರಾಜ್‌ ಸಿಂಗ್‌ ಅವರು ಗೋಲು ಬಾರಿಸಿ ಭಾರತಕ್ಕೆ ಮೇಲುಗೈ ತಂದುಕೊಟ್ಟರು.

ಭಾರತ ಮತ್ತು ಚೀನಾ ತಮ್ಮ ಟೂರ್ನಮೆಂಟ್‌ನ ಆರಂಭಿಕ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು 3-0 ಅಂತರದಲ್ಲಿ ಭಾರತವು ಗೆದ್ದುಕೊಂಡಿತ್ತು. ಕೂಟದಲ್ಲಿ ಅಜೇಯವಾಗಿದ್ದ ಹಾಲಿ ಚಾಂಪಿಯನ್‌ ಗಳಾದ ಹರ್ಮನ್‌ಪ್ರೀತ್ ಸಿಂಗ್ ತಂಡವು ಹಾಟ್ ಫೇವರಿಟ್‌ ಗಳಾಗಿ ಫೈನಲ್‌ ಸವಾಲಿಗೆ ಇಂದು ಇಳಿದಿತ್ತು. ಆದರೆ ಆತಿಥೇಯರು ಹೋರಾಟವಿಲ್ಲದೆ ಬಿಟ್ಟುಕೊಡಲು ಸಿದ್ಧರಿರಲಿಲ್ಲ.

ಭಾರತದ ರಕ್ಷಣಾ ವಿಭಾಗವನ್ನು ಒತ್ತಡಕ್ಕೆ ಸಿಲುಕಿಸಲು ಚೀನಾ ಪ್ರಯತ್ನಿಸುವುದರೊಂದಿಗೆ ಪಂದ್ಯ ಆರಂಭಗೊಂಡಿತ್ತು. ಎರಡೂ ತಂಡಗಳು ಜಿದ್ದಾಜಿದ್ದಿಗೆ ಬಿದ್ದಂತೆ ಆಡಿದವು. ಮೊದಲ ಮೂರು ಕ್ವಾರ್ಟರ್‌ ನಲ್ಲಿ ಯಾವುದೇ ತಂಡವು ಗೋಲು ಗಳಿಸಿಲು ಸಾಧ್ಯವಾಗಲಿಲ್ಲ. ಆದರೆ 51ನೇ ನಿಮಿಷದಲ್ಲಿ ಜುಗ್ರಾಜ್‌ ಸಿಂಗ್‌ ಅವರು ನಿರ್ಣಾಯಕ ಗೋಲು ಬಾರಿಸಿ ಭಾರತದ ಗೆಲುವಿಗೆ ಕಾರಣವಾದರು.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.