PM Modi US Visit: ಕ್ವಾಡ್‌ ಶೃಂಗಸಭೆಗಾಗಿ ಪ್ರಧಾನಿ ಮೋದಿ ಸೆ.21-23ರವರೆಗೆ ಅಮೆರಿಕ ಭೇಟಿ

ನ್ಯೂಯಾರ್ಕ್‌ನಲ್ಲಿ ಸೆ.23ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆ, ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ: ವಿದೇಶಾಂಗ ಸಚಿವಾಲಯ

Team Udayavani, Sep 17, 2024, 8:51 PM IST

Narenrdra-Modi

ಹೊಸದಿಲ್ಲಿ:  ಕ್ವಾಡ್‌ ನಾಯಕರ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೆ.21 ರಿಂದ 23 ರವರೆಗೆ ಅಮೆರಿಕಕ್ಕೆ(United State Of America) ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಸೆ. 21ರಂದು ಕ್ವಾಡ್ ಶೃಂಗಸಭೆ
ಮೋದಿಯವರ ಅಮೆರಿಕ ಭೇಟಿಯ ಅತ್ಯಂತ ಪ್ರಮುಖ ಅಂಶ ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಸೆ.21ರಂದು ನಡೆಯುವ ಕ್ವಾಡ್ ನಾಯಕರ ಶೃಂಗಸಭೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಸ್ವಗ್ರಾಮದಲ್ಲಿ ಸಭೆ ಆಯೋಜಿಸಿದ್ದು, ಅವರು ಎರಡನೇ ಅವಧಿಗೆ ಸ್ಪರ್ಧಿಸುತ್ತಿಲ್ಲವಾದ್ದರಿಂದ ಶೃಂಗಸಭೆಯು ಮಹತ್ವದ್ದಾಗಿದೆ. ಮುಂದಿನ ವರ್ಷ ಭಾರತವು  ಕ್ವಾಡ್ ಶೃಂಗಸಭೆ ಆಯೋಜಿಸಿದಾಗ, ಯುಎಸ್ ನೂತನ ಅಧ್ಯಕ್ಷರ ಹೊಂದಿರುತ್ತದೆ. ಕ್ವಾಡ್ ಶೃಂಗಸಭೆಯಲ್ಲಿ ಜಪಾನ್‌ನ ಫ್ಯೂಮಿಯೊ ಕಿಶಿಡಾ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಭಾಗವಹಿಸಲಿದ್ದಾರೆ.

ವಿದೇಶಾಂಗ ಸಚಿವಾಲಯದ ಪ್ರಕಾರ, ಕ್ವಾಡ್ ನಾಯಕರು ಕಳೆದ ಒಂದು ವರ್ಷದಲ್ಲಿ ಮೈತ್ರಿ ಸಾಧಿಸಿದ ಪ್ರಗತಿಯ ಪರಿಶೀಲಿಸುತ್ತಾರೆ. ತಮ್ಮ ಅಭಿವೃದ್ಧಿ ಗುರಿಗಳು ಮತ್ತು ಆಕಾಂಕ್ಷೆಗಳ ಪೂರೈಸುವಲ್ಲಿ ಇಂಡೋ-ಪೆಸಿಫಿಕ್ ದೇಶಗಳಿಗೆ ಸಹಾಯ ಮಾಡಲು ಅವರು ವರ್ಷದ ಕಾರ್ಯಸೂಚಿ ಹೊಂದಿಸುತ್ತಾರೆ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ.

ಸೆ.22ರಂದು ‘ಮೋದಿ ಮತ್ತು ಯುಎಸ್ ಪ್ರೋಗ್ರೆಸ್ ಟುಗೆದರ್’ ಕಾರ್ಯಕ್ರಮ
ನ್ಯೂಯಾರ್ಕ್‌ನಲ್ಲಿ, ಪ್ರಧಾನಿ ಮೋದಿ ಭಾನುವಾರ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಿಟಿಐ ವರದಿ ಪ್ರಕಾರ, 24,000 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ‘ಮೋದಿ ಮತ್ತು ಯುಎಸ್’ ಪ್ರೋಗ್ರೆಸ್ ಟುಗೆದರ್’ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಮೆರಿಕ ಮೂಲದ ಕಂಪನಿಗಳ ಸಿಇಒಗಳ ಜೊತೆಗೆ ಎಐ ಹಾಗೂ ಕ್ವಾಂಟಮ್‌ ಕಂಪ್ಯೂಟಿಂಗ್‌ , ಸೆಮಿ ಕಂಡಕ್ಟರ್‌ ಹಾಗೂ ಬಯೋ ಟೆಕ್ನಾಲಜಿ ಕುರಿತು ಸಹಯೋಗ ಸಾಧಿಸುವ ಕುರಿತು ಸಭೆ ನಡೆಸಲಿದ್ದಾರೆ.

ಸೆ.23ರಂದು ಯುಎನ್‌ ಸಾಮಾನ್ಯ ಸಭೆ
ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ‘ಭವಿಷ್ಯದ ಶೃಂಗಸಭೆ’ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವರ್ಷ, ಶೃಂಗಸಭೆಯ ಥೀಮ್ ‘ಉತ್ತಮ ನಾಳೆಗಾಗಿ ಬಹುಪಕ್ಷೀಯ ಪರಿಹಾರಗಳು’ ಎಂಬುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜಾಗತಿಕ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಶೃಂಗಸಭೆಯ ಹೊರತಾಗಿ, ಪ್ರಧಾನಿ ಹಲವಾರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳ ನಡೆಸಲಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಟಾಪ್ ನ್ಯೂಸ್

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

1-sa

ODI;ಮೊದಲ ಬಾರಿಗೆ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಅಫ್ಘಾನಿಸ್ಥಾನ

cyber crime

Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.