Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ


Team Udayavani, Sep 17, 2024, 8:25 PM IST

basavaraj

ಧಾರವಾಡ: ಸಮಾಜದ ಶಾಂತಿ ಕದಡುವವರಿಗೆ ಶಿಕ್ಷೆಯ ಗ್ಯಾರಂಟಿಯಾದರೆ ಖಂಡಿತವಾಗಿಯೂ ಶಾಂತಿ ಕಾಪಾಡಲು ಸಾಧ್ಯವಿದ್ದು, ಈ ಕುರಿತಂತೆ ಸಿಎಂಗೆ ಪತ್ರ ಬರೆಯುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಕೆಲವರು ಬೆಂಕಿ ಹಚ್ಚುವವರು ಇರುತ್ತಾರೆ. ಗಲಾಟೆ ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದಾರೆ. ಹೀಗಾಗಿ ಎಲ್ಲಿಯವರೆಗೆ ಸಮಾಜಘಾತುಕ ಶಕ್ತಿಗಳು ಇರುತ್ತವೆಯೋ ಅಲ್ಲಿಯವರೆಗೆ ಎಲ್ಲರೂ ಒಂದಾಗಲು ಸಾಧ್ಯವಿಲ್ಲ ಎಂದರು.

ಉತ್ತರ ಪ್ರದೇಶದಲ್ಲಿ ಮಾಡಿದಂತೆ ಬಂದೋಬಸ್ತ್ ಮಾಡಬೇಕು. ಶಿಕ್ಷೆ ಆಗುವಂತಹ ಕೆಲಸ ಆಗಬೇಕು. ಆದರೆ ನಮ್ಮಲ್ಲಿ ಶಿಕ್ಷೆ ಆಗುತ್ತದೆ ಎಂಬ ಗ್ಯಾರಂಟಿಯೇ ಇಲ್ಲ. ನಾಲ್ಕೈದು ದಿನ ಜೈಲಿನಟ್ಟಿದ್ದು, ಆ ಬಳಿಕ ಬಿಡುತ್ತಾರೆ ಎಂಬ ಅಸಡ್ಡೆ. ಇದು ತಪ್ಪಬೇಕು. ಹೀಗಾಗಿ ಈ ನಿಟ್ಟಿನಲ್ಲಿ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ನಾನೊಂದು ಪತ್ರ ಬರೆಯುತ್ತಿರುವೆ. ಈಗಾಗಲೇ ಅರ್ಧ ಪತ್ರ ಬರೆದಿದ್ದು, ಆ ಬಳಿಕ ಸರಕಾರಕ್ಕೆ ಕಳುಹಿಸುವೆ. ಸಭಾಪತಿಯಾಗಿ ನನಗೂ ಜವಾಬ್ದಾರಿ ಇದೆ. ಹೀಗಾಗಿ ಸಿಎಂಗೆ ಪತ್ರ ಬರೆದು ಗಮನ ಸೆಳೆಯುತ್ತೇನೆ ಎಂದರು.

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಒಪ್ಪಿ ದೊಡ್ಡವರಾದರಿಗೆ ಅಷ್ಟೇ ಗೌರವ ಕೂಡ ಸಿಕ್ಕಿದೆ. ಹೀಗಾಗಿ ಸೌಹರ್ದತೆಯಿಂದ ಹೋಗುವ ಕೆಲಸ ಮಾಡಬೇಕು. ಎಲ್ಲರೂ ಕೂಡಿ ಇರಬೇಕಾಗುತ್ತದೆ. ಎಲ್ಲರೂ ಹೊಂದಿಕೊಂಡು ಹೋಗುವ ಕೆಲಸ ಆಗಬೇಕು ಎಂದರು.

ಇಂದಿನ ರಾಜಕಾರಣದಲ್ಲಿ ಮೌಲ್ಯ ಕಡಿಮೆಯಾಗಿದೆ. ದುಡ್ಡು ಕೊಟ್ಟು ಮತ ಹಾಕಿಸಿಕೊಳ್ಳುತ್ತಾರೆ. ದುಡ್ಡು ತಗೊಂದು ಮತ ಹಾಕುತ್ತಾರೆ. ಇದು ಇರುವವರೆಗೂ ಏನಾದರೂ ಆಗಬಹುದು. ಹೀಗಾಗಿ ನಾನು ಬಹಳ ವಿಚಾರ ಮಾಡುತ್ತಿದ್ದೇವೆ. ಶಾಸಕರಿಗೆ ತರಬೇತಿ ಕೊಡುವ ವಿಚಾರವೂ ಮಾಡುತ್ತಿದ್ದೇವೆ ಎಂದರು.

ಇವತ್ತಿಗೂ ಒಕ್ಕುಲತನ ಬಿಟ್ಟಿಲ್ಲ

ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಮೂಲ ವೃತ್ತಿ ಪ್ರಸ್ತಾಪಿಸುತ್ತಾ ತಮ್ಮ ಮೂಲ ವೃತ್ತಿ ಬಗ್ಗೆ ಹೇಳಿಕೊಂಡ ಸಭಾಪತಿ ಬಸವರಾಜ ಹೊರಟ್ಟಿ, ನಮ್ಮದು ಕೃಷಿ ಮೂಲ ವೃತ್ತಿ. ಇಂದಿಗೂ ನಾನು ಕೃಷಿ ಮಾಡುವೆ. ಹೀಗಾಗಿ ರಾಜಕಾರಣದ ಈ ಸ್ಥಾನ ಹೋದರೆ ಪೂರ್ಣ ಪ್ರಮಾಣದಲ್ಲಿಯೇ ಕೃಷಿ ಮಾಡುವೆ. ಹೀಗಾಗಿ ನಾನು ಇವತ್ತಿಗೂ ಒಕ್ಕುಲತನ ಬಿಟ್ಟಿಲ್ಲ ಎಂದರು.

ರಾಜಕಾರಣದ ಸ್ಥಾನ ಯಾವಾಗ ಹೋಗುತ್ತೋ ಬಿಡುತ್ತದೆಯೋ ಗೊತ್ತಿಲ್ಲ. ಇವತ್ತಿನ ರಾಜಕಾರಣವೇ ಬಹಳ ವಿಚಿತ್ರವಿದೆ. ನಮ್ಮ ಮೂಲ ಉದ್ಯೋಗವೇ ಸ್ಥಿರ. ರಾಜಕಾರಣ ಹೋದರೆ ನಾನು ಕೃಷಿ ಮಾಡುವೆ. ನಾವೀಗ ವಿಚಿತ್ರವಾದ ಕಾಲದಲ್ಲಿಯೇ ಬದುಕುತ್ತಿದ್ದೇವೆ. ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ, ಇವತ್ತು ಇರುವ ಸ್ಥಾನ ನಾಳೆಗೆ ಹೋಗಬಹುದು. ಹೀಗಾಗಿ ನಮ್ಮ ಮೂಲ ಉದ್ಯೋಗ ಬಿಡಬಾರದು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.