Narendra Modi: ಪ್ರಧಾನಿ ಮೋದಿ ಜನ್ಮದಿನಕ್ಕೆ ಹಾರೈಕೆಗಳ ಮಹಾಪೂರ; ತಾಯಿಯ ನೆನೆದ ಮೋದಿ
ರಾಷ್ಟ್ರಪತಿ, ಖರ್ಗೆ, ರಾಹುಲ್ ಸೇರಿ ಹಲವರಿಂದ ಶುಭಾಶಯ
Team Udayavani, Sep 17, 2024, 9:02 PM IST
ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿದಂತೆ ಪ್ರಮುಖ ನಾಯಕರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿದೆ.
ಎನ್ಡಿಎ ಮೈತ್ರಿ ಪಕ್ಷದ ನಾಯಕರೂ ಶುಭಾಹಾರೈಸಿದ್ದು, ಮಾಜಿ ಪ್ರಧಾನಿ ದೇವೇಗೌಡ ಅವರೂ ಟ್ವೀಟ್ ಮೂಲಕ ಪ್ರಧಾನಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು ದೇಶ ಮೊದಲು ಎಂಬ ನಿಮ್ಮ ಧ್ಯೇಯ ಸಾರ್ಥಕವಾಗಲು ನಿಮಗೆ ದೇವರು ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುರ್ಮು ಟ್ವೀಟ್ ಮಾಡಿದ್ದಾರೆ.
ಮೋದಿ ಸಂಪುಟದ ಸಚಿವರಾದ ಅಮಿತ್ ಶಾ, ರಾಜನಾಥ ಸಿಂಗ್, ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಶುಭ ಹಾರೈಸಿದ್ದಾರೆ. ದೇಶಾದ್ಯಂತ ಬಿಜೆಪಿ ಘಟಕಗಳು, ಅಂಗಸಂಸ್ಥೆಗಳು ಹಾಗೂ ಪ್ರಧಾನಿ ಬೆಂಬಲಿಗರು ಸೇರಿ ರಕ್ತದಾನ, ದಾಸೋಹದಂತ ವಿವಿಧ ಕಾರ್ಯಕ್ರಮಗಳನ್ನೂ ಮಂಗಳವಾರ ನಡೆಸಿದ್ದಾರೆ.
ತಾಯಿಯ ನೆನೆದ ಮೋದಿ: ಆದಿವಾಸಿ ತಾಯಿಂದ ಸಿಹಿ
ಒಡಿಶಾದ ಭುವನೇಶ್ವರದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಸ್ಮರಿಸಿದ್ದಾರೆ. “”ನನ್ನ ಹುಟ್ಟುಹಬ್ಬದಂದು ಪ್ರತಿವರ್ಷ ನನ್ನ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದೆ. ಅವರು ನನಗೆ ಸಿಹಿ ತಿನಿಸುತ್ತಿದ್ದರು, ಈಗ ಅವರಿಲ್ಲ. ಆದರೆ, ನಾನು ಇಲ್ಲಿಗೆ ಬರುವ ಮೊದಲು ಆದಿವಾಸಿ ಕುಟುಂಬವೊಂದರ ಗೃಹ ಪ್ರವೇಶಕ್ಕೆ ತೆರಳಿದ್ದೆ. ಆ ಮನೆಯ ತಾಯಿ ನನಗೆ ಸಿಹಿ ತಿನಿಸಿ ಆಶೀರ್ವದಿಸಿದರು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
China ಓಪನ್ ಬ್ಯಾಡ್ಮಿಂಟನ್:ಮಾಳವಿಕಾ ಕ್ವಾರ್ಟರ್ ಫೈನಲಿಗೆ
Duleep Trophy Cricket: ಸ್ಯಾಮ್ಸನ್ ಅರ್ಧಶತಕ; ಭಾರತ ‘ಡಿ’ 5ಕ್ಕೆ 306
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.