T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ


Team Udayavani, Sep 18, 2024, 6:42 AM IST

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

ದುಬಾೖ: ಮಹತ್ವದ ನಿರ್ಧಾರ ವೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಮುಂದಿನ ತಿಂಗಳು ಆರಂಭವಾಗುವ ವನಿತೆಯರ ಟಿ20 ವಿಶ್ವಕಪ್‌ನಿಂದಲೇ ಪುರುಷ ಮತ್ತು ವನಿತೆಯರ ವಿಶ್ವಕಪ್‌ ವಿಜೇತರಿಗೆ ಸಮಾನ ಬಹುಮಾನ ನಿಧಿ ನೀಡಲು ತೀರ್ಮಾನಿಸಿದೆ. ವನಿತೆಯರ ಟಿ20 ವಿಶ್ವಕಪ್‌ ಕೂಟದ ಒಟ್ಟಾರೆ ಬಹುಮಾನ ನಿಧಿಯಲ್ಲಿ ಶೇಕಡಾ 225ರಷ್ಟು ಏರಿಕೆ ಮಾಡಲಾಗಿದೆ. ಸಮಗ್ರವಾಗಿ 7. 95 ಮಿಲಿಯನ್‌ ಡಾಲರ್‌ ಬಹು ಮಾನ ನಿಧಿಯನ್ನು ಈ ವಿಶ್ವಕಪ್‌ ಒಳಗೊಂಡಿದೆ. ಈ ಹಿಂದಿನ ವನಿತಾ ವಿಶ್ವಕಪ್‌ 2.45 ಮಿಲಿಯನ್‌ ಡಾಲರ್‌ ನಿಧಿಯನ್ನು ಒಳಗೊಂಡಿತ್ತು.

ಈ ಬಾರಿಯ ವನಿತೆಯರ ಟಿ20 ವಿಶ್ವಕಪ್‌ ವಿಜೇತರು 2.34 ಮಿಲಿ ಯನ್‌ ಡಾಲರ್‌ ನಿಧಿ (ಸುಮಾರು 19.61 ಕೋಟಿ ರೂ.) ಯನ್ನು ಪಡೆಯಲಿದ್ದಾರೆ. ಇದು ಕಳೆದ ವಿಶ್ವಕಪ್‌ಗಿಂತ ಶೇಕಡಾ 134ರಷ್ಟು ಹೆಚ್ಚು. 2023ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್‌ನ ವಿಜೇತರಾದ ಆಸ್ಟ್ರೇಲಿಯದ ವನಿತೆಯರಿಗೆ ಒಂದು ಮಿಲಿಯನ್‌ ಡಾಲರ್‌ ನಿಧಿ (8.38 ಕೋಟಿ ರೂ.)ಯನ್ನು ನೀಡಲಾಗಿತ್ತು ಎಂದು ಐಸಿಸಿ ಪ್ರಕಟನೆ ತಿಳಿಸಿದೆ.

ಈ ವರ್ಷದ ಆರಂಭದಲ್ಲಿ ನಡೆದ ಪುರುಷರ ಟಿ20 ವಿಶ್ವಕಪ್‌ ಚಾಂಪಿಯನ್ಸ್‌ ಭಾರತ ತಂಡವು 2.45 ಮಿಲಿಯನ್‌ ಡಾಲರ್‌ ನಿಧಿಯನ್ನು ಬಹುಮಾನವಾಗಿ ಪಡೆದಿತ್ತು. ಐಸಿಸಿ ವನಿತಾ ಟಿ20 ವಿಶ್ವಕಪ್‌ ಇಷ್ಟು ದೊಡ್ಡ ಮೊತ್ತದ ನಿಧಿಯನ್ನು ಪಡೆಯುವ ಮೊದಲ ಕೂಟವಾಗಿದೆ. ಇನ್ನು ಮುಂದೆ ಪುರುಷ ಮತ್ತು ವನಿತೆಯರ ಟಿ20 ವಿಶ್ವಕಪ್‌ ವಿಜೇತರು ಸಮಾನ ಬಹುಮಾನ ನಿಧಿ ಪಡೆಯಲಿದ್ದಾರೆ. ಇದು ಕ್ರಿಕೆಟ್‌ ಇತಿಹಾಸದ ಮಹತ್ವದ ಮೈಲುಗಲ್ಲು ಆಗಿ ಗುರುತಿಸುತ್ತದೆ ಎಂದು ಐಸಿಸಿ ತಿಳಿಸಿದೆ.

ವನಿತಾ ಟಿ20 ವಿಶ್ವಕಪ್‌ನ ರನ್ನರ್‌ ಅಪ್‌ ತಂಡವು 1.17 ಮಿಲಿಯರ್‌ ಡಾಲರ್‌ ನಗದನ್ನು ಪಡೆಯಲಿದೆ. ಇದು ಈ ಹಿಂದಿನ ವಿಶ್ವಕಪ್‌ನ ನಿಧಿಗಿಂತ ಶೇಕಡಾ 134ರಷ್ಟು ಹೆಚ್ಚು. ಕಳೆದ ವಿಶ್ವಕಪ್‌ನಲ್ಲಿ ರನ್ನರ್‌ ಅಪ್‌ ದಕ್ಷಿಣ ಆಫ್ರಿಕಾವು 5 ಲಕ್ಷ ಡಾಲರ್‌ ನಗದು ಪಡೆದಿತ್ತು.ಮುಂದಿನ ವನಿತಾ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋತ ಎರಡು ತಂಡಗಳು 6.75 ಲಕ್ಷ ಡಾಲರ್‌ (ಹಿಂದಿನ ವಿಶ್ವಕಪ್‌ನಲ್ಲಿ 2.10 ಲಕ್ಷ ಡಾಲರ್‌) ನಗದು ಪಡೆಯಲಿವೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.