Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ

ಟ್ರೈನಿ ವೈದ್ಯೆ ಕೇಸು ಮುಚ್ಚಿಹಾಕುವ ಆಯಾಮದ ತನಿಖೆ ನಡೆಯಲಿ: ಪೀಠ

Team Udayavani, Sep 17, 2024, 11:09 PM IST

Kolkata incident; CBI Report Concerned: Supreme court

ಕೋಲ್ಕತಾ: ಪಶ್ಚಿಮ ಬಂಗಾಲ ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಸಲ್ಲಿಸಿರುವ ಸ್ಥಿತಿಗತಿ ವರದಿ ಮನಸ್ಸನ್ನು ಕಲಕುವ ಹಾಗೂ ಆತಂಕಕಾರಿ ಅಂಶಗಳನ್ನು ಒಳಗೊಂಡಿದೆ ಎಂದು ಸುಪ್ರೀಂಕೋರ್ಟ್‌ ಮಂಗಳವಾರ ಹೇಳಿದೆ.

ಸಿಬಿಐ ತನಿಖಾ ವರದಿಯನ್ನು ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ಪರಿಶೀಲಿಸಿದೆ. ಘಟನ ಸ್ಥಳದಿಂದ ಸಂತ್ರಸ್ತೆಯ ಒಳ ಉಡುಪಗಳನ್ನು ಮೊದಲಿಗೆ ವಶಪಡಿಸಿಕೊಂಡಿಲ್ಲ. ಹಾಗಾಗಿ ಯಾವ ದಿನಾಂಕದಲ್ಲಿ ಅವುಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂಬುದು ದೃಢಪಟ್ಟಿಲ್ಲ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಈ ಬಗ್ಗೆ ನ್ಯಾಯಪೀಠ ಆತಂಕ ವ್ಯಕ್ತಪಡಿಸಿ, ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆಯೇ ಎಂಬ ಆಯಾಮವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಅದಕ್ಕೆ ಅಗತ್ಯ ಸಮಯವನ್ನು ನೀಡಬೇಕಿದೆ ಎಂದು ನ್ಯಾಯಪೀಠ ಹೇಳಿದೆ.

ಇದೇ ವೇಳೆ  ಟ್ರೈನಿ ವೈದ್ಯೆಯ ಹೆಸರು, ಮಾಹಿತಿ ತೆಗೆದುಹಾಕುವಂತೆ ವಿಕಿಪಿಡೀಯಾಗೆ ಸುಪ್ರೀಂ ಸೂಚಿಸಿದೆ. ಜತೆಗೆ ವೈದ್ಯೆ ಹತ್ಯೆ  ಹೊಣೆ ಹೊತ್ತು ಸಿಎಂ ಮಮತಾ ರಾಜೀನಾಮೆಗೆ ನಿರ್ದೇಶನ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಜಾ ಮಾಡಿದೆ.

ಮಮತಾ ಸರಕಾರಕ್ಕೆ ತರಾಟೆ: ರಾಜ್ಯ ಸರಕಾರವು ವೈದ್ಯರ ಸುರಕ್ಷೆಗೆ ಕೈಗೊಂಡಿರುವ ಕ್ರಮಗಳನ್ನು ನ್ಯಾಯಪೀಠ ಪರಿಶೀಲಿಸಿ ” ರಟ್ಟಿರೇರ್‌ ಸಾತಿ’ಗೆ ಗುತ್ತಿಗೆ ಭದ್ರತಾ ಸಿಬಂದಿಯನ್ನು ನೇಮಿಸಲು ಯೋಜಿಸಿದ್ದೀರಾ? ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಅದೇ ರೀತಿ ಗುತ್ತಿಗೆ ಸಿಬಂದಿಯಾಗಿದ್ದರು. ಇದು ನಿಮ್ಮ ಗಮನದಲ್ಲಿರಲಿ ಎಂದು ಹೇಳಿದೆ. ಜತೆಗೆ ಯಾವುದೇ ಮಹಿಳೆಗೆ ರಾತ್ರಿ ಕೆಲಸ ಮಾಡಬೇಡಿ ಎಂದು ಹೇಳುವ ಹಕ್ಕು ನಿಮಗಿಲ್ಲ, ಅವರಿಗೆ ಭದ್ರತೆ ಒದಗಿಸುವುದು ನಿಮ್ಮ ಕರ್ತವ್ಯ ಎಂದು ನ್ಯಾಯಪೀಠ ಹೇಳಿದೆ.

ವಿಚಾರಣೆ ನೇರಪ್ರಸಾರ ಸ್ಥಗಿತಕ್ಕೆ ನಕಾರ

ಟ್ರೈನಿ ವೈದ್ಯೆ ಕೇಸಿನಲ್ಲಿ ಪ.ಬಂಗಾಲ ಸರಕಾರವನ್ನು ಪ್ರತಿನಿಧಿಸುವ ಮಹಿಳಾ ವಕೀಲರಿಗೆ ಆ್ಯಸಿಡ್‌ ದಾಳಿಯಂಥ ಬೆದರಿಕೆಗಳು ಬರುತ್ತಿವೆ. ಹಾಗಾಗಿ ವಿಚಾರಣೆಯ ನೇರ ಪ್ರಸಾರ ಮಾಡಬಾರದು ಎಂದು ವಕೀಲ ಕಪಿಲ್‌ ಸಿಬಲ್‌ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಆದರೆ ಸಿಜೆಐ ತಡೆ ನೀಡಲು ನಿರಾಕರಿಸಿದ್ದು, ನೇರಪ್ರಸಾರ ಸಾರ್ವಜನಿಕ ಹಿತಾಸಕ್ತಿಗಾಗಿ ಮಾಡುತ್ತಿರುವುದು. ವಕೀಲರಿಗೆ ಬೆದರಿಕೆ ಬಂದರೆ ನಾವು ಮಧ್ಯಪ್ರವೇಶಿಸುತ್ತೇವೆ. ಆದರೆ ನೇರಪ್ರಸಾರಕ್ಕೆ ತಡೆ ನೀಡಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.