ನಿಗಮ – ಮಂಡಳಿಗಳ ನಿರ್ದೇಶಕ,ಸದಸ್ಯರ ಆಯ್ಕೆ ಮತ್ತಷ್ಟು ವಿಳಂಬ?
Team Udayavani, Sep 18, 2024, 6:07 AM IST
ಬೆಂಗಳೂರು: ರಾಜ್ಯದ ವಿವಿಧ ನಿಗಮ- ಮಂಡಳಿಗಳ ಸದಸ್ಯರು ಮತ್ತು ನಿರ್ದೇಶಕರ ಆಯ್ಕೆಯೂ ವಿಳಂಬವಾಗುವ ಸ್ಪಷ್ಟ ಲಕ್ಷಣಗಳಿದ್ದು, ಇದೇ ನಿಗಮ-ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಯ ಮುಂದುವರಿದ ಭಾಗವಾಗುತ್ತಿದೆ.
ಈ ಹಿಂದೆ ನಿಗಮ-ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ವೇಳೆ ಪಕ್ಷದ ವಿವಿಧ ಹಂತಗಳಲ್ಲಿ ಮ್ಯಾರಥಾನ್ ಸಭೆಗಳು ನಡೆದವು. ವಿಳಂಬದ ಬಗ್ಗೆ ಟೀಕೆ- ಟಿಪ್ಪಣಿ ವ್ಯಕ್ತವಾದವು. ಹಲವು ತಿಂಗಳುಗಳ ಅನಂತರ ಅದಕ್ಕೆ ಮುಹೂರ್ತ ಕೂಡಿಬಂತು. ಈಗ ಸದಸ್ಯರು ಹಾಗೂ ನಿರ್ದೇಶಕರ ಆಯ್ಕೆ ವಿಚಾರದಲ್ಲೂ ಅದೇ ಸರ್ಕಸ್ ಪುನರಾವರ್ತನೆಯಾಗುವ ಸಾಧ್ಯತೆಗಳು ಕಂಡುಬರುತ್ತಿವೆ.
ಈಚೆಗೆ ಸಮಿತಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ| ಜಿ. ಪರಮೇಶ್ವರ ನೇತೃತ್ವದಲ್ಲಿ ಎರಡನೇ ಸುತ್ತಿನ ಸಭೆ ನಡೆದಿತ್ತು. ಈ ವೇಳೆ ಸದಸ್ಯರಿಂದ ಆಕಾಂಕ್ಷಿಗಳ ಪಟ್ಟಿಯನ್ನು ಸಂಗ್ರಹಿಸಲಾಗಿತ್ತು. ಹೀಗೆ ಸಂಗ್ರಹಿಸಲಾದ ಪಟ್ಟಿಯಲ್ಲಿ ಸಂಸದರು ಮತ್ತು ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳು ಇನ್ನೂ ಪಟ್ಟಿಯನ್ನು ಸಮಿತಿಯ ಸದಸ್ಯರಿಗೆ ನೀಡಿಲ್ಲದಿರುವುದು ಗೊತ್ತಾಗಿದೆ. ವಿವಿಧ ನಿಗಮ-ಮಂಡಳಿ ಗಳ ಒಟ್ಟಾರೆ 1,100ಕ್ಕೂ ಅಧಿಕ ಸದಸ್ಯರು ಮತ್ತು ನಿರ್ದೇಶಕರನ್ನು ಈ ಸಮಿತಿಯು ಆಯ್ಕೆ ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.