Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಕಾಶ್ಮೀರದಲ್ಲಿ ಪಿಡಿಪಿ Vs ಎನ್‌ಸಿ ; ಜಮ್ಮುವಿನಲ್ಲಿ ಕಾಂಗ್ರೆಸ್‌ Vs ಬಿಜೆಪಿ; ಹೆಚ್ಚಿನ ಸ್ಥಾನದಲ್ಲಿ ಸ್ಪರ್ಧಿಸಿರುವ ಪ್ರಾದೇಶಿಕ ಪಕ್ಷಗಳದ್ದೇ ಹವಾ

Team Udayavani, Sep 18, 2024, 7:30 AM IST

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಬಳಿಕ ಮೊದಲ ಬಾರಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. 2019ರಲ್ಲಿ ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ತೆಗೆದ ಬಳಿಕ ರಾಷ್ಟ್ರೀಯ ಪಕ್ಷಗಳು ಇಲ್ಲಿನ ರಾಜಕೀಯದಿಂದ ದೂರ ಉಳಿದಿದ್ದವು. ಆದರೆ ಸದಾ ಸಕ್ರಿಯವಾಗಿದ್ದ ಪ್ರಾದೇಶಿಕ ಪಕ್ಷಗಳು ಈ ಚುನಾವಣೆ ಬಳಿಕ ಸರಕಾರ ರಚನೆಯಲ್ಲಿ ಕಿಂಗ್‌ ಮೇಕರ್ ಆಗುವ ಸಾಧ್ಯತೆಗಳನ್ನು ತಳ್ಳಿಹಾಕಲು ಸಾಧ್ಯವಿಲ್ಲ.

90 ಸ್ಥಾನಗಳ ವಿಧಾನಸಭೆಗೆ ಒಟ್ಟು 3 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಸೆ.18ರಂದು ಮೊದಲ ಹಂತ, ಸೆ.25ರಂದು 2ನೇ ಹಂತ ಹಾಗೂ ಅಕ್ಟೋಬರ್‌ 1ರಂದು 3ನೇ ಹಂತದ ಚುನಾವಣೆ ನಡೆಯಲಿದೆ. ಈ ಬಾರಿ ಬರೋಬ್ಬರಿ 908 ಮಂದಿ ಸ್ಪರ್ಧಿಗಳು ಕಣದಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಈ ಚುನಾವಣೆಯಲ್ಲಿ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರೆ, ಪ್ರಾದೇಶಿಕ ಪಕ್ಷಗಳು ತಮ್ಮದೇ ಸರಕಾರ ರಚಿಸಿ ಹಕ್ಕುಗಳಿಗೆ ಹೋರಾಟ ನಡೆಸಲು ಸಿದ್ಧತೆ ನಡೆಸಿವೆ.

ಜಮ್ಮು: ಬಿಜೆಪಿ, ಕಾಂಗ್ರೆಸ್‌ ನೇರ ಸ್ಪರ್ಧೆ
ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಜಮ್ಮು ಪ್ರಾಂತ್ಯದಲ್ಲೇ ಹೆಚ್ಚಿನ ಸ್ಪರ್ಧಿಗಳನ್ನು ಕಣಕ್ಕಿಳಿಸಿವೆ. ನ್ಯಾಶನಲ್‌ ಕಾಂಗ್ರೆಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌ ಒಟ್ಟು 38 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, ಜಮ್ಮು ವಲಯದಲ್ಲಿ 29 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಶ್ಮೀರ ವಲಯದಲ್ಲಿ 9 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿದೆ. ಬಿಜೆಪಿ ಒಟ್ಟು 62 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಜಮ್ಮು ವಲಯದಲ್ಲಿ 43 ಸ್ಥಾನಗಳಲ್ಲಿ ಸ್ಪರ್ಧಿಗಳನ್ನು ಕಣಕ್ಕಿಳಿಸಿದೆ. ಕಾಶ್ಮೀರದಲ್ಲಿ 19 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿದೆ. ಹೀಗಾಗಿ ಜಮ್ಮು ವಲಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.

ಕಾಶ್ಮೀರದಲ್ಲಿ ಸ್ಥಳೀಯ ಪಕ್ಷಗಳ ಹವಾ
ಕಾಶ್ಮೀರ ವಲಯದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಕಾರುಬಾರು. ಪಿಡಿಪಿ, ನ್ಯಾಶನಲ್‌ ಕಾಂಗ್ರೆಸ್‌, ಅಪ್ನಿ ಪಕ್ಷ, ಡೆಮಾಕ್ರಟಿಕ್‌ ಪ್ರೊಗ್ರೆಸಿವ್‌ ಆಜಾದ್‌ ಪಕ್ಷ, ಕಾಶ್ಮೀರ್‌ ಪೀಪಲ್ಸ್‌ ಮೂವ್‌ಮೆಂಟ್‌, ಕಾಶ್ಮೀರ್‌ ಅವಾಮಿ ನ್ಯಾಶನಲ್‌ ಕಾಂಗ್ರೆಸ್‌ ಪಕ್ಷಗಳದ್ದೇ ಈ ವಲಯದಲ್ಲಿ ಹೆಚ್ಚಿನ ಪ್ರಭಾವವಿದೆ. ಇಲ್ಲಿನ ಸ್ಪರ್ಧೆಯನ್ನು ಪಿಡಿಪಿ ಹಾಗೂ ಎನ್‌ಸಿ ನಡುವಿನ ನೇರ ಹಣಾಹಣಿ ಎಂದು ಗುರುತಿಸಲಾಗಿದೆ. ಅಲ್ಲದೇ ಈ ಪ್ರಾದೇಶಿಕ ಪಕ್ಷಗಳೇ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾದೇ ಶಿಕ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಚುನಾವಣ ಪೂರ್ವ ಮೈತ್ರಿಗಳು ನಡೆಯದ ಕಾರಣ, ಫ‌ಲಿತಾಂಶದ ಬಳಿಕ ಈ ಪಕ್ಷಗಳು ಯಾರೊಂದಿಗೆ ಸೇರಿಕೊಳ್ಳಲಿವೆ ಎಂಬುದು ನಿಗೂಢವಾ ಗಿಯೇ ಉಳಿದಿವೆ. 370ನೇ ವಿಧಿ ರದ್ದಾದ ಬಳಿಕ ಈ ಪಕ್ಷಗಳು ಕೇಂದ್ರ ಸರಕಾರದ ವಿರುದ್ಧ ಮಾತಾನಾಡಿದ್ದು, ರಾಷ್ಟ್ರೀಯ ಪಕ್ಷಗ ಳನ್ನು ಧಿಕ್ಕರಿಸಿದ್ದು, ದಿಲ್ಲಿಯಲ್ಲಿ ತಲೆನೋವನ್ನು ಹೆಚ್ಚು ಮಾಡಿದೆ.

ಕಾಂಗ್ರೆಸ್‌, ನ್ಯಾಶನಲ್‌ ಕಾನ್ಫರೆನ್ಸ್‌ ಮೈತ್ರಿ
ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಮತ್ತು ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷಗಳು ಮಾತ್ರ ಮೈತ್ರಿ ಮಾಡಿಕೊಂಡಿವೆ. ಇದು ಕಾಂಗ್ರೆಸ್‌ಗೆ ಲಾಭವಾಗುವ ಸಾಧ್ಯತೆಯನ್ನು ತೋರಿದೆ. ಫಾರೂಕ್‌ ಅಬ್ದುಲ್ಲಾ ನೇತೃತ್ವದ ಎನ್‌ಸಿ ಈ ಬಾರಿ 56 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ 9 ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದರೆ, ಜಮ್ಮುವಿನಲ್ಲಿ 29 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಈ 2 ಪಕ್ಷಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಿದರೆ ಇತರ ಸ್ಥಳೀಯ ನಾಯಕರನ್ನು ಸೆಳೆಯಲು ಚಿಂತನೆಗಳನ್ನು ನಡೆಸಿವೆ.

ಪ್ರತ್ಯೇಕತಾವಾದಿಗಳ ಪ್ರಭಾವ
ಕಾಶ್ಮೀರ ಚುನಾವಣೆಯ ಮೇಲೆ ಪ್ರತ್ಯೇಕತಾವಾದಿಗಳ ಪ್ರಭಾವ ಇರುವುದನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಭಾರತ ಸ್ವಾತಂತ್ರ್ಯ ಪಡೆದುಕೊಂಡಾಗಿನಿಂದಲೂ ಜಮ್ಮು-ಕಾಶ್ಮೀರದಲ್ಲಿ ತೊಂದರೆ ನೀಡುತ್ತಿರುವುದು ಇದೇ ಪ್ರತ್ಯೇಕತಾವಾದಿಗಳು. ಪ್ರತೀ ಬಾರಿ ಚುನಾವಣೆಯ ಸಮಯದಲ್ಲಿ ಹಿಂಸಾಚಾರವನ್ನು ನಡೆಸಿ, ಜನರ ಮನಃಸ್ಥಿತಿಯನ್ನು ಬದಲು ಮಾಡುವಲ್ಲಿ ಇವರ ಪಾತ್ರವಿದೆ. ಆದರೆ 35 ವರ್ಷಗಳಲ್ಲೇ ಮೊದಲ ಬಾರಿ ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣ ಪ್ರಚಾರ ನಡೆದಿರುವುದು ಪ್ರತ್ಯೇಕತಾವಾದಿಗಳ ಮೇಲೆ ಜನ ನಂಬಿಕೆ ಕಳೆದುಕೊಂಡಿರಬಹುದು ಎನ್ನಲಾಗುತ್ತಿದೆ.

ಪಕ್ಷೇತರರಿಂದ ಅತಂತ್ರ ಸರಕಾರ?
ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಶೇ.40ಕ್ಕೂ ಹೆಚ್ಚು ಮಂದಿ ಪಕ್ಷೇತರರು ಸ್ಪರ್ಧೆ ಮಾಡುತ್ತಿದ್ದಾರೆ. ಒಟ್ಟು 908 ಮಂದಿಯಲ್ಲಿ 365 ಮಂದಿ ಪಕ್ಷೇತರ ಅಭ್ಯರ್ಥಿಗಳು ಈ ಬಾರಿ ಕಣದಲ್ಲಿದ್ದಾರೆ. ಇದು ಚುನಾವ ಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ 2ನೇ ಗರಿಷ್ಠ ಸ್ಪರ್ಧೆಯಾಗಿದೆ. 2008ರಲ್ಲಿ 1353 ಮಂದಿ ಪಕ್ಷೇತರರು ಕಣಕ್ಕಿಳಿದಿದ್ದರು. ಕಾಶ್ಮೀರದಲ್ಲಿ ಪ್ರತೀ ಕ್ಷೇತಕ್ಕೂ ಕನಿಷ್ಠ 5 ಮಂದಿ ಪಕ್ಷೇತರ ಅಭ್ಯರ್ಥಿಗಳಿದ್ದಾರೆ. ಇವರು ಕನಿಷ್ಠ ಪ್ರಮಾಣದ ಮತಗಳನ್ನು ಕಿತ್ತುಕೊಂಡರೂ ಉಳಿದ ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಭಾರೀ ವ್ಯತ್ಯಾಸವಾಗಲಿದೆ.

ಕಾಶ್ಮೀರ ಚುನಾವಣೆಯ ಪ್ರಮುಖ ವಿಷಯಗಳು
-ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಭರವಸೆ
-ಕಾಶ್ಮೀರದ ಅಸ್ಮಿತೆಗೆ ಪ್ರಾದೇಶಿಕ ಪಕ್ಷಗಳ ಕೊಡುಗೆ
-370ನೇ ವಿಧಿಯನ್ನು ಮರಳಿ ತರುವ ಭರವಸೆ
-ಭಯೋತ್ಪಾದನೆ ನಿರ್ಮೂಲನೆಯ ಆಶ್ವಾಸನೆ
-ಪ್ರಾದೇಶಿಕ ಪಕ್ಷಗಳು ಮಾಡಿರುವ ಕೆಲಸಗಳು
-ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಘೋಷಣೆ

-ಗಣೇಶ್‌ ಪ್ರಸಾದ್‌

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.