Bhubaneswar; ಪೂಜಾದ್ವೇಷಿ ಕಾಂಗ್ರೆಸ್‌ ಪ್ರಧಾನಿ ಮೋದಿ ಕಿಡಿ

ಬ್ರಿಟಿಷರಂತೆ ಗಣೇಶ ಹಬ್ಬಕ್ಕೆ ಕಾಂಗ್ರೆಸ್‌ ವಿರೋಧ: ಪ್ರಧಾನಿ

Team Udayavani, Sep 18, 2024, 6:20 AM IST

Bhubaneswar; ಪೂಜಾದ್ವೇಷಿ ಕಾಂಗ್ರೆಸ್‌ ಪ್ರಧಾನಿ ಮೋದಿ ಕಿಡಿ

ಭುವನೇಶ್ವರ: ಪೂಜೆಯನ್ನು ದ್ವೇಷಿಸುವಷ್ಟು ಕನಿಷ್ಠ ಮಟ್ಟಕ್ಕೆ ಕಾಂಗ್ರೆಸ್‌ ಇಳಿದಿದೆ. ನಾನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್‌ ಹಾಗೂ ಅವರ ಜತೆಗಾರರು ಕೋಪಗೊಂಡಿದ್ದಾರೆ. ದೇಶವನ್ನು ಒಡೆದ ಇವರೇ ಗಣಪತಿಯನ್ನು ಕರ್ನಾಟಕದಲ್ಲಿ ಜೈಲು ಸೇರಿಸಿದರು ಎಂದು ಪ್ರಧಾನಿ ಮೋದಿ ಕಾಂಗ್ರೆಸ್‌ ವಿರುದ್ಧ ಮಂಗಳವಾರ ವಾಗ್ಧಾಳಿ ನಡೆಸಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ದೊರೆಯುವ ಸಮಯದಲ್ಲಿ ಕಾಂಗ್ರೆಸ್‌ ದೇಶವನ್ನು ಒಡೆಯುವ ಕೆಲಸ ಮಾಡಿತು. ಈಗಲೂ ಅದನ್ನೇ ಮುಂದುವರಿಸಿರುವ ಆ ಪಕ್ಷ ಗಣಪತಿ ಪೂಜೆಯನ್ನು ಕೂಡ ದ್ವೇಷಿಸುತ್ತಿದೆ. ಗಣೇಶೋತ್ಸವ ಎಂಬುದು ನಮ್ಮ ದೇಶದಲ್ಲಿ ಕೇವಲ ಹಬ್ಬವಲ್ಲ; ಅದು ದೇಶದ ನಂಬಿಕೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಇದು ಪ್ರಮುಖ ಪಾತ್ರ ವಹಿಸಿತ್ತು ಎಂದರು.

ಸ್ವಾತಂತ್ರ್ಯ ದೊರಕುವ ಸಮಯದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸಿದ ಬ್ರಿಟಿಷರು ಗಣಪತಿ ಉತ್ಸವ ವನ್ನು ದ್ವೇಷಿಸುತ್ತಿದ್ದರು. ಈಗ ಅಧಿಕಾರದ ದಾಹದಿಂದ ಕುರುಡಾಗಿರುವ ಕಾಂಗ್ರೆಸ್‌ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದು, ಇವರಿಗೂ ಗಣಪತಿ ಉತ್ಸವದ ಮೇಲೆ ದ್ವೇಷವಿದೆ. ಇದೇ ಕಾಂಗ್ರೆಸ್‌ ಸರಕಾರ ಕರ್ನಾಟಕದಲ್ಲಿ ಗಣಪತಿಯನ್ನು ಜೈಲಿಗೆ ಹಾಕಿತು ಎಂದು ಆರೋಪಿಸಿದರು.

ಕಾಂಗ್ರೆಸ್‌ ನಡೆಯಿಂದ ಇಡೀ ದೇಶ ಗೊಂದಲಕ್ಕೀಡಾಗಿದೆ. ಇದು ಮುಂದುವರಿಯಲು ನಾವು ಬಿಡಬಾರದು. ಗಣೇಶ ಉತ್ಸವ ದೇಶದಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಸಂಭ್ರಮವಾಗಿಯೇ ಉಳಿದುಕೊಳ್ಳಬೇಕು ಎಂದರು.

ಕೆಲವು ದಿನಗಳ ಹಿಂದೆ ಸಿಜೆಐ ಚಂದ್ರಚೂಡ್‌ ಅವರ ಮನೆಯಲ್ಲಿ ನಡೆದ ಗಣಪತಿ ಪೂಜೆಯಲ್ಲಿ ಪ್ರಧಾನಿ ಭಾಗಿಯಾಗಿದ್ದರು. ಈ ಬಗ್ಗೆ ವಿಪಕ್ಷ ಒಕ್ಕೂಟದ ಕೆಲವು ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಹುಟ್ಟುಹಬ್ಬದಂದೇ ವಿವಿಧ ಯೋಜನೆಗಳಿಗೆ ಮೋದಿ ಚಾಲನೆ
-ಒಡಿಶಾದ ಮಹಿಳೆಯರಿಗೆ 50 ಸಾವಿರ ರೂ. ಸಹಾಯಧನ ನೀಡುವ “ಸುಭದ್ರಾ ಯೋಜನೆ’ ಉದ್ಘಾಟನೆ
-2,871 ಕೋಟಿ ರೂ. ಮೌಲ್ಯದ ರೈಲ್ವೇ ಯೋಜನೆಗಳಿಗೆ ಒಡಿಶಾದಲ್ಲಿ ಚಾಲನೆ
-ಒಂದು ಸಾವಿರ ಕೋಟಿ ರೂ. ಮೊತ್ತದರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಹಸುರು ನಿಶಾನೆ
-ಪಿಎಂಎವೈಯ 26 ಲಕ್ಷ ಫ‌ಲಾನುಭವಿಗಳ ಗೃಹ ಪ್ರವೇಶ ಸಮಾರಂಭಕ್ಕೆ ಚಾಲನೆ
-ಪ್ರಧಾನಮಂತ್ರಿ ಆವಾಸ್‌ ಯೋಜನೆ (ಗ್ರಾಮೀಣ)ಯ 10 ಲಕ್ಷ ಫ‌ಲಾನುಭವಿಗಳಿಗೆ ಮೊದಲ ಕಂತಿನ ಮೊತ್ತ ಬಿಡುಗಡೆ
-ಭುವನೇಶ್ವರದ ಸಬರ್‌ಶಾಹಿ ಕೊಳಗೇರಿ ಪ್ರದೇಶಕ್ಕೆ ಭೇಟಿ, 20 ಪಕ್ಕಾ ಮನೆಗಳ ಉದ್ಘಾಟನೆ, ಫ‌ಲಾನುಭವಿಗಳ ಜತೆಗೆ ಸಂವಾದ

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.