Audio Contraversy: ಶರಣ್‌ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡು ಸಹಜ ಸ್ಥಿತಿಗೆ, ದ.ಕ.ಜಿಲ್ಲಾ ಪೊಲೀಸರ ಜತೆಗೆ ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ, ಕಾಸರಗೋಡು ಜಿಲ್ಲೆಯಲ್ಲಿ ತೀವ್ರ ನಿಗಾ

Team Udayavani, Sep 18, 2024, 7:00 AM IST

BC-Road

ಬಂಟ್ವಾಳ: ಮಿಲಾದ್‌ ರ್‍ಯಾಲಿಯ ವಿಷಯಕ್ಕೆ ಸಂಬಂಧಿಸಿ ಬಿ.ಸಿ.ರೋಡಿನಲ್ಲಿ ಉಂಟಾಗಿದ್ದ ಬಿಗುವಿನ ವಾತಾವರಣ ತಿಳಿಯಾಗಿದ್ದು, ಮಂಗಳವಾರ ಸಹಜ ಸ್ಥಿತಿ ಕಂಡು ಬಂತು.

ಇದೇ ವಿಚಾರದಲ್ಲಿ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳ ಆಧಾರದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಧರ್ಮವನ್ನು ನಿಂದಿಸಿ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಂಟ್ವಾಳ ನಿವಾಸಿ ಮಹಮ್ಮದ್‌ ರಫೀಕ್‌ ಕೆಳಗಿನಪೇಟೆ ನೀಡಿದ ದೂರಿನ ಆಧಾರದಲ್ಲಿ ಶರಣ್‌ ಪಂಪುವೆಲ್‌ ಹಾಗೂ ಭರತ್‌ ಕುಮ್ಡೇಲ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಮುಸ್ಲಿಂ ಧರ್ಮವನ್ನು ನಿಂದಿಸಿ, ಪುರಸಭಾ ಸದಸ್ಯ ಮಹಮ್ಮದ್‌ ಶರೀಫ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಂಟ್ವಾಳದ ಮಹಮ್ಮದ್‌ ಸಪ್ನಾಜ್‌ ನವಾಜ್‌ ನೀಡಿದ ದೂರಿನಂತೆ ಯಶೋಧರ ಕರ್ಬೆಟ್ಟು ವಿರುದ್ಧ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡಿನಲ್ಲಿ ಮಂಗಳವಾರವೂ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮುಂದುವರಿದಿದ್ದು, ದ.ಕ.ಜಿಲ್ಲಾ ಪೊಲೀಸರ ಜತೆಗೆ ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ ಪೊಲೀಸರನ್ನೂ ನಿಯೋಜಿಸಲಾಗಿತ್ತು. ಸಹಜ ಸ್ಥಿತಿಯ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆಗಳು ನಡೆದ ಕುರಿತು ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿನ ಸ್ಥಿತಿ: ಕಾಸರಗೋಡು ಜಿಲ್ಲೆಯಲ್ಲಿ ತೀವ್ರ ನಿಗಾ
ಕಾಸರಗೋಡು: ದ.ಕನ್ನಡ ಜಿಲ್ಲೆಯ ಕೆಲವೆಡೆ ಕೋಮು ಸಾಮರಸ್ಯ ಹದಗೆಡುವಂತೆ ಮಾಡುವ ಕೆಲವೊಂದು ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಬಿಗು ಪೊಲೀಸ್‌ ನಿಯಂತ್ರಣ ಏರ್ಪಡಿಸಲಾಗಿದೆ.

ಇದರಂತೆ ತಲಪಾಡಿ, ಪೆರ್ಲ, ಆದೂರು, ಪಾಣತ್ತೂರು, ಕೆದುಂಬಾಡಿ, ಆನೆಕಲ್ಲು ಮೊದಲಾದ ಕೇರಳ- ಕರ್ನಾಟಕ ಗಡಿ ಪ್ರದೇಶದ ತಪಾಸಣೆ ಕೇಂದ್ರಗಳಲ್ಲಿ ಪೊಲೀಸ್‌ ಬಿಗು ನಿಯಂತ್ರಣ ಏರ್ಪಡಿಸಲಾಗಿದೆ. ಎಲ್ಲ ವಾಹನಗಳನ್ನು ತಪಾಸಣೆಗೆ ಒಳಪಡಿಸ ಲಾಗುತ್ತಿದೆ. ವಾಹನದಲ್ಲಿ ಸಂಚರಿಸುವ ಎಲ್ಲರ ಮಾಹಿತಿ ಪಡೆಯಲಾಗುತ್ತಿದೆ. ಶಂಕಿತರಿದ್ದಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.