Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ
Team Udayavani, Sep 18, 2024, 2:01 AM IST
ಮಂಗಳೂರು: ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯಕಾರಿಯಾಗಿರುವ ಸೇತುವೆಗಳ ಪರಿಶೀಲನೆಗೆ ಬೆಂಗಳೂರಿನಿಂದ ಆಗಮಿಸಿರುವ ತಾಂತ್ರಿಕ ತಜ್ಞರ ಸಮಿತಿ ಮಂಗಳವಾರ ಮರವೂರು ಸೇತುವೆಯನ್ನು ಪರಿಶೀಲನೆ ನಡೆಸಿದೆ.
ಮರವೂರಿನ ಹಳೆ ಸೇತುವೆಯ ಪಿಲ್ಲರ್ಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಜೂ.14ರಿಂದ ಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪೊಳಲಿ, ಉಳಾಯಿಬೆಟ್ಟು, ಬಳ್ಕುಂಜೆ ಸೇತುವೆಯನ್ನು ಪರಿಶೀಲಿಸಿದ ತಾಂತ್ರಿಕ ತಜ್ಞರು ಮರವೂರು ಸೇತುವೆಯನ್ನೂ ಪರಿಶೀಲಿಸಿದ್ದಾರೆ.
ಬೃಹತ್ ಕ್ರೇನ್ ಮೂಲಕ ಸೇತುವೆ ಯ ಅಡಿಭಾಗಕ್ಕೆ ತೆರಳಿದ ತಜ್ಞರು ಸೇತುವೆ ಯನ್ನು ಪರಿಶೀಲಿಸಿ, ಸೇತುವೆಯ ಪಿಲ್ಲರ್, ಗರ್ಡರ್ನ ಕಾಂಕ್ರೀಟ್ ಭಾಗಗಳನ್ನು ಸಂಗ್ರಹಿಸಿದ್ದಾರೆ. ಇದರ ಮೂಲಕ ಸೇತುವೆಯ ದೃಢತೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಯವರಿಗೆ ವರದಿ ನೀಡಲಿದ್ದಾರೆ. ಜಿಲ್ಲಾಧಿಕಾರಿಯವರು ವರದಿಯನ್ನು ಪರಿಶೀಲಿಸಿದ ಬಳಿಕ ಸೇತುವೆ ಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಅಥವಾ ಕಾಮಗಾರಿ ಕೈಗೊಳ್ಳುವ ಬಗ್ಗೆ ನಿರ್ಧಾರವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.