Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
Team Udayavani, Sep 18, 2024, 11:34 AM IST
ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಸೆ.18ರ ಬುಧವಾರ 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸವಾಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ರೂ. ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ, ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಧಿಕಾರಿಗಳಿಂದ ತೊಂದರೆಯಾದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.