Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು


Team Udayavani, Sep 18, 2024, 12:29 PM IST

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

ಮುಂಬಯಿ: ಟೀಮ್ ಇಂಡಿಯಾ(Team India) ಕೋಚ್ ಗೌತಮ್ ಗಂಭೀರ್ (Gautam Gambhir) ಹಾಗೂ ವಿರಾಟ್ ಕೊಹ್ಲಿ(Virat Kohli)  ಮತ್ತೆ ಹಳೆಯ ಸ್ನೇಹಿತರಾಗಿ ಆತ್ಮೀಯರಾಗಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಎಲ್ಲಾ ಮಸಾಲ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.

ಒಂದು ಕಾಲದಲ್ಲಿ ಗೌತಮ್‌ ಗಂಭೀರ್‌ ಹಾಗೂ ವಿರಾಟ್‌ ಕೊಹ್ಲಿ ಟೀಮ್‌ ಇಂಡಿಯಾದ ಪರವಾಗಿ ಜತೆಯಾಗಿ ಆಡಿದವರು. 2011ರ ಏಕದಿನ ವಿಶ್ವಕಪ್‌ನಲ್ಲಿ ಆಡಿದ ಆಟದಿಂದಿಡಿದು ಟಿ-20, ಟೆಸ್ಟ್‌ನಲ್ಲೂ ಗಂಭೀರ್‌ – ಕೊಹ್ಲಿ ಮಾಡಿರುವ ಸಾಧನೆ ಒಂದೆರೆಡಲ್ಲ. ಇಬ್ಬರು ಉತ್ತಮ ಸ್ನೇಹಿತರು. ಆದರೆ ಐಪಿಎಲ್‌ ಸಂದರ್ಭದಲ್ಲಿ ಮೈದಾನದಲ್ಲಾದ ಒಂದಷ್ಟು ಸನ್ನಿವೇಶದಿಂದ ಇಬ್ಬರು ಪರಸ್ಪರ ಶತ್ರುವಿನಂತೆ ಕಾಣಿಸಿಕೊಂಡಿದ್ದರು.

ಕೆಕೆಆರ್‌ – ಆರ್‌ ಸಿಬಿ ನಡುವಿನ ಪಂದ್ಯ ಹಾಗೂ ಗಂಭೀರ್‌ ಲಕ್ನೋ ತಂಡದ ಮೆಂಟರ್‌ ಆಗಿದ್ದ ಸಂದರ್ಭದಲ್ಲಾದ ಕೆಲ ಸನ್ನಿವೇಶಗಳು ವಿರಾಟ್‌ – ಗಂಭೀರ್‌ ನಡುವಿನ ಸ್ನೇಹಿತರ ಬಾಂಧವ್ಯಕ್ಕೆ ಒಂದಷ್ಟು ಹಾನಿಯುಂಟು ಮಾಡಿತ್ತು.

ಗೌತಮ್‌ ಗಂಭೀರ್‌ ಟೀಮ್‌ ಇಂಡಿಯಾದ ಮುಖ್ಯ ಕೋಚ್‌ ಆದ ಬಳಿಕ ಕೊಹ್ಲಿ ಅವರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಮತ್ತೆ ಹಳೆಯ ಟೀಮ್‌ ಮೇಟ್ಸ್‌ ನಂತೆ ಇಬ್ಬರು ಅಭ್ಯಾಸದ ವೇಳೆ ಕಾಣಿಸಿಕೊಂಡಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್‌ ಸರಣಿ ಮುನ್ನ ಗೌತಿ ಹಾಗೂ ಕೊಹ್ಲಿ ಆತ್ಮೀಯತೆಯ ಚಿಟ್‌ ಚಾಟ್‌ ವಿಡಿಯೋವೊಂದನ್ನು ಬಿಸಿಸಿಐ ಹಂಚಿಕೊಂಡಿದೆ.

ವಿಡಿಯೋದಲ್ಲಿ 2011ರಲ್ಲಿ ಏಕದಿನ ವಿಶ್ವಕಪ್‌ ನಲ್ಲಿ ಗಂಭೀರ್‌ ಹಾಗೂ ಕೊಹ್ಲಿ ಅವರು ಆಡಿದ ಅಮೋಘ ಇನ್ನಿಂಗ್ಸ್‌ ಹಾಗೂ ಟೆಸ್ಟ್‌ ಪಂದ್ಯಗಳಲ್ಲಿ ಇಬ್ಬರು ಗಳಿಸಿದ ರನ್‌ ಸುರಿಮಳೆಗಳ ಝಲಕ್‌ ನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ಗಂಭೀರ್‌ ಮಾತನಾಡುತ್ತಾ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಳಿಸಿದ ರನ್‌ಗಳ ಬಗ್ಗೆ ಶ್ಲಾಘಿಸಿ ನ್ಯೂಜಿಲೆಂಡ್‌ ವಿರುದ್ಧ ತಾನು ನೇಪಿಯರ್ ನಲ್ಲಿ ಆಡಿದ ಇನ್ನಿಂಗ್ಸ್‌ ಕುರಿತು ನೆನಪಿಸಿಕೊಂಡಿದ್ದಾರೆ.

ಇದಲ್ಲದೆ ಆಸ್ಟ್ರೇಲಿಯಾ ವಿರುದ್ಧ ಮೈದಾನದಲ್ಲಿ ನಡೆದಿದ್ದ ಕೆಲ ಸನ್ನಿವೇಶಗಳ ಇಬ್ಬರು ಮಾತನಾಡಿದ್ದಾರೆ.

ಸದ್ಯ ಈ ಸಂದರ್ಶನದ ಝಲಕ್‌ ಬಿಡಲಾಗಿದ್ದು, ಶೀಘ್ರದಲ್ಲಿ ಬಿಸಿಸಿಐ.ಟಿವಿಯಲ್ಲಿ ಸಂಪೂರ್ಣ ಸಂದರ್ಶನ ಪ್ರಸಾರವಾಗಲಿದೆ.

ಭಾರತ ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್‌, ಮೂರು 3 T20I ಪಂದ್ಯಗಳನ್ನು ಆಡಲಿದೆ. ಟೆಸ್ಟ್‌ ಸರಣಿ ಗುರುವಾರ(ಸೆ.19) ದಿಂದ ಆರಂಭಗೊಳ್ಳಲಿದೆ.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.