Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

2 ವರ್ಷವಾದರೂ ಶಿಥಿಲ ಕಟ್ಟಡ ದುರಸ್ತಿ ಮುಗಿದಿಲ್ಲ; ಬೆಂಚು, ಡೆಸ್ಕ್ ಇಲ್ಲ; ಶಿಕ್ಷಕರೂ ನೆಲದಲ್ಲೇ ಕುಳಿತು ಪಾಠ!

Team Udayavani, Sep 18, 2024, 12:53 PM IST

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

ಅರಂತೋಡು: ಅಜ್ಜಾವರ ಗ್ರಾಮದ ದೊಡ್ಡೇರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕಳೆದ ಎರಡು ವರ್ಷಗಳಿಂದ ಅಕ್ಷರ ದಾಸೋಹ ಕೊಠಡಿಯ ಜಗುಲಿಯೇ ಕ್ಲಾಸ್‌ ರೂಮ್‌ ಆಗಿದೆ! ಇದಕ್ಕೆ ಕಾರಣ, ಎರಡು ವರ್ಷಗಳ ಹಿಂದೆ ಆರಂಭಗೊಂಡ ಶಿಥಿಲ ಕಟ್ಟಡದ ದುರಸ್ತಿ ಕಾಮಗಾರಿ ಇನ್ನೂ ಮುಗಿಯದಿರುವುದು!

2 ವರ್ಷದ ಹಿಂದೆ ಶಾಲೆ ಕಟ್ಟಡದ ಹಿಂಬದಿ ಗೋಡೆ ಸಂಪೂರ್ಣ ಶಿಥಿಲಗೊಂಡಿತ್ತು. ಆಗ ಮಕ್ಕಳನ್ನು ಅಕ್ಷರ ದಾಸೋಹ ಕಟ್ಟಡದ ಜಗಲಿಗೆ ಸ್ಥಳಾಂತರ ಮಾಡಲಾಗಿತ್ತು.

ಆಗ ಸಚಿವರಾಗಿದ್ದ ಎಸ್‌.ಅಂಗಾರ ಅವರು ಶಾಲೆ ದುರಸ್ತಿಗಾಗಿ ಪ್ರಾಕೃತಿಕ ವಿಕೋಪ ಯೋಜನೆಯಲ್ಲಿ 7 ಲಕ್ಷ ರೂ.ಅನುದಾನ ಮಂಜೂರು ಮಾಡಿಸಿದ್ದರು. ಅದರಲ್ಲಿ ಶಾಲೆಯ ಗೋಡೆಯನ್ನು ಸಂಪೂರ್ಣ ಕೆಡವಿ ಹೊಸ ಗೋಡೆ ನಿರ್ಮಿಸಲಾಯಿತು. ಹಳೆಯ ಪಕ್ಕಾಸು, ಹಂಚು ಬಳಸಿಕೊಂಡು ಮೇಲ್ಛಾವಣಿ ಮಾಡಲಾಯಿತು, ಆದರೆ, ನೆಲಕ್ಕೆ ಟೈಲ್ಸ… ಅಳವಡಿಕೆ ಆಗಿಲ್ಲ. ಕಿಟಕಿ ಜೋಡಣೆ, ಕರಿ ಹಲಗೆ ಜೋಡಣೆ ಬಾಕಿ ಉಳಿದಿವೆ. ಹೀಗಾಗಿ ಮಕ್ಕಳು ಈ ಶೈಕ್ಷಣಿಕ ವರ್ಷವನ್ನು ಕೂಡಾ ಅಕ್ಷರ ದಾಸೋಹ ಕಟ್ಟಡದ ಜಗಲಿಯಲ್ಲೇ ಕಳೆಯುವಂತಾಗಿದೆ. ತುರ್ತಾಗಿ ಶಾಲೆ ದುರಸ್ತಿ ಮಾಡಿ ಎನ್ನುವುದು ಮಕ್ಕಳ ಪೋಷಕರ ಆಗ್ರಹ.

ಎಲ್ಲ ಕ್ಲಾಸಿನ ಮಕ್ಕಳಿಗೆ ಒಟ್ಟಿಗೇ ಪಾಠ
ಈ ಶಾಲೆಯಲ್ಲಿ 15 ಮಕ್ಕಳಿದ್ದಾರೆ. ಈ ವರ್ಷ ದಾಖಲಾತಿ ಹೆಚ್ಚಿದೆ. ಶಾಲೆಯ ಪೀಠೊಪಕರಣಗಳನ್ನು ಪಕ್ಕದ ಕಾಂತಮಂಗಲ ಶಾಲೆಯಲ್ಲಿ ಇಡಲಾಗಿದೆ. ಇಲ್ಲಿಗೆ ಮರಳಿ ತಂದರೂ ಇಡಲು ಜಾಗವಿಲ್ಲ. ಆದ್ದರಿಂದ ಮಕ್ಕಳು ನೆಲದಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ. ಶಿಕ್ಷಕರು ನೆಲದಲ್ಲೇ ಕುಳಿತು ಪಾಠ ಮಾಡುತ್ತಿದ್ದಾರೆ. ಜಗಲಿ ಸಣ್ಣದಾಗಿರುವುದರಿಂದ ಒಂದರಿಂದ ಐದನೇ ಕ್ಲಾಸ್‌ವರೆಗಿನ ಎಲ್ಲರಿಗೂ ಒಟ್ಟಿಗೇ ಪಾಠ ನಡೆಯುತ್ತಿದೆ!

ಅನುದಾನ ಇರಿಸಲಾಗಿದೆ
ದೊಡ್ಡೇರಿ ಶಾಲೆಯ ಉಳಿದ ಕಾಮಗಾರಿಗೆ ತಾ.ಪಂ.ನಲ್ಲಿ ಅನುದಾನ ಇರಿಸಲಾಗಿದೆ.ಆದಷ್ಟು ಬೇಗ ಉಳಿದ ಕಾಮಗಾರಿಗಳನ್ನು ಮುಗಿಸುತ್ತೇವೆ.
-ಮಣಿಕಂಠ, ಜಿ.ಪಂ. ಸಹಾಯಕ ಅಭಿಯಂತ

ಜಗಲಿಯಲ್ಲಿ ಪಾಠ ಕೇಳುವ ಪರಿಸ್ಥಿತಿ
ನಮ್ಮ ಮಕ್ಕಳು ಎರಡು ವರ್ಷದಿಂದ ಜಗಲಿಯಲ್ಲಿ ಪಾಠ ಕೇಳುವ ಪರಿಸ್ಥಿತಿ ಎದುರಾಗಿದೆ. ತತ್‌ಕ್ಷಣ ಶಾಲೆಯ ಕಾಮಗಾರಿ ಮುಗಿಸಿಕೊಡಿ.
-ದಯಾನಂದ ಡಿ.ಕೆ., ಎಸ್‌ಡಿಎಂಸಿ ಅಧ್ಯಕ್ಷರು

-ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.