Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

ಉಗ್ರರು ಬಳಕೆ ಮಾಡುತ್ತಿದ್ದ ಸಾವಿರಾರು ಪೇಜರ್ಸ್‌ ಗಳು ಏಕಕಾಲಕ್ಕೆ ಸ್ಫೋಟಗೊಂಡಿವೆ.

Team Udayavani, Sep 18, 2024, 12:57 PM IST

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

ಇಸ್ರೇಲ್/ಬೈರುತ್:‌ ಲೆಬನಾನ್‌(Lebanese) ಹಾಗೂ ಸಿರಿಯಾದ ಹಲವು ಭಾಗಗಳಲ್ಲಿ ಮಂಗಳವಾರ ಏಕಕಾಲಕ್ಕೆ ಸಾವಿರಾರು ಪೇಜರ್‌ ಗಳು ಸ್ಫೋಟಗೊಂಡು ಹೆಜ್ಬುಲ್ಲಾ ಉಗ್ರರು ಸೇರಿದಂತೆ 9 ಮಂದಿ ಸಾವಿಗೀಡಾಗಿರುವ ಘಟನೆ ಹಿಂದೆ ಇಸ್ರೇಲ್‌ ನ ಚಾಣಕ್ಯ ಗುಪ್ತಚರ ಸಂಸ್ಥೆ ಮೊಸ್ಸಾದ್‌(Mossad Spy) ಕೈವಾಡ ಇರುವುದು ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ.

ಮೊಸ್ಸಾದ್‌ ಕೈಚಳಕ!

ಸುಮಾರು 5 ತಿಂಗಳ ಹಿಂದೆ ಲೆಬನಾನ್‌ ನಲ್ಲಿ ಕಾರ್ಯಾಚರಿಸುತ್ತಿರುವ ಹೆಜ್ಬುಲ್ಲಾ ಉಗ್ರಗಾಮಿ ಸಂಘಟನೆ ತೈವಾನ್‌ ನಿರ್ಮಿತ 5,000 ಪೇಜರ್‌ ಗಳನ್ನು ಪೂರೈಸಲು ಬೇಡಿಕೆ ಇಟ್ಟಿತ್ತು. ಈ ಪೇಜರ್‌ (Pagers)ಗಳ ಒಳಗಡೆ ಇಸ್ರೇಲ್‌ ಗುಪ್ತಚರ ಸಂಸ್ಥೆ ಮೊಸ್ಸಾದ್‌ ಸಣ್ಣ ಪ್ರಮಾಣದ ಸ್ಫೋಟಗಳನ್ನು ಅಳವಡಿಸಿತ್ತು ಎಂಬ ಅಂಶ ವರದಿಯಲ್ಲಿ ಬಯಲಾಗಿದೆ.

ಹೆಜ್ಬುಲ್ಲಾ ಉಗ್ರರು ತರಿಸಿಕೊಂಡಿದ್ದ ತೈವಾನ್‌ ನಿರ್ಮಿತ ಪೇಜರ್ಸ್‌ ಗಳು ಮಂಗಳವಾರ ಏಕಾಏಕಿ ಸ್ಫೋಟಗೊಂಡಿರುವುದರ ಹಿಂದೆ ಇಸ್ರೇಲ್‌ ಗುಪ್ತಚರ ಸಂಸ್ಥೆ ಇದ್ದಿರುವುದಾಗಿ ಹೆಜ್ಬುಲ್ಲಾ ಆರೋಪಿಸಿದೆ.

ಮೊಬೈಲ್‌ ಫೋನ್‌ ಬಳಕೆಯಿಂದ ದೂರ ಇರಲು ಹೇಳಿದ್ದ ಇರಾನ್‌ ಬೆಂಬಲಿತ ಹೆಜ್ಬುಲ್ಲಾ ಉಗ್ರಗಾಮಿ ಸಂಘಟನೆ ಸಂವಹನಕ್ಕಾಗಿ ವಯರ್‌ ಲೆಸ್‌ ಪೇಜರ್ಸ್‌ ಗಳನ್ನು ಸಂಘಟನೆಯ ಸಾವಿರಾರು ಉಗ್ರರು ಬಳಕೆ ಮಾಡುತ್ತಿದ್ದರು ಎಂದು ವರದಿ ವಿವರಿಸಿದೆ.

ಹೀಗೆ ಲೆಬನಾನ್‌ ಮತ್ತು ಸಿರಿಯಾದಲ್ಲಿ ಉಗ್ರರು ಬಳಕೆ ಮಾಡುತ್ತಿದ್ದ ಪೇಜರ್ಸ್‌ ಗಳು ಏಕಕಾಲಕ್ಕೆ ಸ್ಫೋಟಗೊಂಡಿವೆ. ಸಿರಿಯಾದಲ್ಲಿ ಸುಮಾರು ನೂರು ಸ್ಫೋಟ ಪ್ರಕರಣಗಳು ವರದಿಯಾಗಿದೆ.

ಸಾವಿರಾರು ಪೇಜರ್ಸ್‌ ಗಳಿಗೆ ಏಕಕಾಲಕ್ಕೆ ಕೋಡೆಡ್‌ (Coded) ಸಂದೇಶಗಳನ್ನು ರವಾನಿಸಿದ್ದು, ಅದನ್ನು ಸ್ವೀಕರಿಸಿದ ಉಗ್ರರು ಪೇಜರ್‌ ಬಟನ್‌ ಒತ್ತಿದಾಗ ಸ್ಫೋಟ ಸಂಭವಿಸಿರುವುದಾಗಿ ಲೆಬನಾನ್‌ ನ ಹಿರಿಯ ಭದ್ರತಾ ಅಧಿಕಾರಿಯೊಬ್ಬರು ರಾಯಿಟರ್ಸ್‌ ನ್ಯೂಸ್‌ ಏಜೆನ್ಸಿಗೆ ತಿಳಿಸಿದ್ದಾರೆ.

ಛಿದ್ರಗೊಂಡ ಪೇಜರ್ಸ್‌ ಚಿತ್ರಗಳಲ್ಲಿ ಗೋಲ್ಡ್‌ ಅಪೋಲೋ ಕಂಪನಿ ಲಿಮಿಟೆಡ್ ಇದನ್ನು ತಯಾರಿಸಿರುವ ಸ್ಟಿಕ್ಕರ್ಸ್‌ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ಸ್ಕೈ ನ್ಯೂಸ್‌ ಅರೇಬಿಯಾ ವರದಿ ಪ್ರಕಾರ, ಇಸ್ರೇಲ್‌ ನ ಗುಪ್ತಚರ ಸಂಸ್ಥೆ ಮೊಸ್ಸಾದ್‌, ಪೇಜರ್ಸ್‌ ಒಳಗೆ PETN ಸ್ಫೋಟಕವನ್ನು ಸಣ್ಣ ಪ್ರಮಾಣದಲ್ಲಿ ಅಳವಡಿಸಲಾಗಿತ್ತು. ಇದು ಭಾರೀ ದುರಂತದ ಸ್ಫೋಟಕವಾಗಿದೆ. ಪೇಜರ್ಸ್‌ ನ ಬ್ಯಾಟರಿಯ ಟೆಂಪರೇಚರ್‌ ಅನ್ನು ಇದು ಹೆಚ್ಚಳ ಮಾಡುವ ಮೂಲಕ ಸ್ಫೋಟಗೊಳ್ಳಲಿದೆ ಎಂದು ವಿವರಿಸಿದೆ.

ಲೆಬನಾನ್‌ ನಲ್ಲಿ ಸಂಭವಿಸಿದ ಪೇಜರ್ಸ್‌ ಸ್ಫೋಟಕ್ಕೆ ಇಸ್ರೇಲ್‌ ವಿರುದ್ಧ ಪ್ರತೀಕಾರ ತೆಗೆದುಕೊಳ್ಳುವುದಾಗಿ ಹೆಜ್ಬುಲ್ಲಾ ಶಪಥ ಮಾಡಿದ್ದು, ಲೆಬನಾನ್‌ ಮಾಹಿತಿ ಸಚಿವ ಝಿಯಾದ್‌ ಸ್ಫೋಟವನ್ನು ಖಂಡಿಸಿ, ಇದೊಂದು ಇಸ್ರೇಲ್‌ ಆಕ್ರಮಣ ಎಂದು ಆರೋಪಿಸಿದ್ದಾರೆ.

ಆದರೆ ಲೆಬನಾನ್‌ ನಲ್ಲಿ ಸಂಭವಿಸಿದ ಸಾವಿರಾರು ಪೇಜರ್ಸ್‌ ಗಳ ಸ್ಫೋಟದ ಬಗ್ಗೆ ಕೇಳಿ ಬಂದ ಆರೋಪದ ಬಗ್ಗೆ ಇಸ್ರೇಲ್‌ ಅಧಿಕಾರಿಗಳು ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.