Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ


Team Udayavani, Sep 18, 2024, 1:29 PM IST

Karkala:ಪಶ್ಚಿಮಘಟ್ಟದ ತಪ್ಪಲಿನ ಶಾಲೆಗಳ ಮಕ್ಕಳಲ್ಲಿ ಕಾಡಿನ ಬಗ್ಗೆ ಪ್ರೀತಿ ಮೂಡಿಸುವ ಕಲಾವಿದೆ

ಕಾರ್ಕಳ: ಪಶ್ಚಿಮ ಘಟ್ಟದ ತಪ್ಪಲಿನ ಮಕ್ಕಳಲ್ಲಿ  ಕಾಡಿನ ಬಗ್ಗೆ ಪ್ರೀತಿ ಉಳಿದರೆ ಮಾತ್ರ ಮುಂದಿನ ದಿನಗಳಲ್ಲಿ  ಅರಣ್ಯ ಉಳಿದೀತು.  ಇದನ್ನು ಮನಗಂಡ ಕಲಾವಿದೆಯೊಬ್ಬರು ಕಾಡಂಚಿನ ಶಾಲೆಗಳ ಮಕ್ಕಳಲ್ಲಿ ಪರಿಸರ ಪ್ರೀತಿ ಹೆಚ್ಚಿಸುವ, ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕಾಪು ಮೂಲದ ಚಿತ್ರ ಕಲಾವಿದೆಯಾಗಿರುವ  ರಕ್ಷಾ ಪೂಜಾರಿ ಪಶ್ಚಿಮ ಘಟ್ಟಗಳ ಸಾಲಿನ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹಳ್ಳಿ ವಿದ್ಯಾರ್ಥಿಗಳಿಗೆ ಚಿತ್ರಕಲೆಯ ಮೂಲಕ ಪರಿಸರದ ಪಾಠ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ. ಆಳ್ವಾಸ್‌ ಕಾಲೇಜಿನಲ್ಲಿ ವಿಷ್ಯುವಲ್‌ ಆರ್ಟ್ಸ್ ನಲ್ಲಿ ಪದವಿ ಪಡೆದ ಇವರು ತಮ್ಮ ಕಾಯಕಕ್ಕೆ ಇಟ್ಟಿರುವ ಹೆಸರು: ವನಗಿರಿಯ ರಂಗು!

ಯಾವ್ಯಾವ ಶಾಲೆಯಲ್ಲಿ  ಜಾಗೃತಿ?
ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಹಿಂದುಳಿದಿರುವ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಚಿತ್ರ ಕಲೆಗಳಲ್ಲಿ  ಆಸಕ್ತಿ ಮೂಡಿಸುವುದು, ಆ ಮೂಲಕ ಪರಿಸರ ಪಾಠ ಹೇಳಿಕೊಡುವುದು  ಇವರ ಉದ್ದೇಶ. ಕುಂದಾಪುರ ತಾ|ನ ಹಾಲಾಡಿಯ ಕೆಳಸುಂಕ ಶಾಲೆಯಲ್ಲಿ ವನಗಿರಿ ರಂಗು ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿತ್ತು.

ತಪ್ಪಲಿನ ಊರುಗಳಾದ ಅಮಾವಾಸ್ಯೆಬೈಲು, ಹೆಬ್ರಿ, ನಾಡಾ³ಲು, ಮುದ್ರಾಡಿ, ಕಬ್ಬಿನಾಲೆ, ಮುನಿಯಾಲು, ಮುಟ್ಲುಪಾಡಿ, ಅಂಡಾರು, ಕಾರ್ಕಳ ತಾಲೂಕಿನ ಶಿರ್ಲಾಲು, ಅಜೆಕಾರು ಕೆರುವಾಶೆ, ಮಾಳ, ನೂರಾಳಬೆಟ್ಟು, ನಾರಾವಿ, ಹೊಸ್ಮಾರು, ಬೆಳ್ತಂಗಡಿ ತಾಲೂಕಿನ ಅಳದಂಗಡಿ, ಚಿಕ್ಕಮಗಳೂರಿನ ಕುದುರೆಮುಖ, ಕಳಸ, ಜಾಂಬಳೆ, ಸಂಸೆ, ಹೊರನಾಡು, ಶೃಂಗೇರಿ, ಕೊಗ್ರೆ, ಕಿಗ್ಗ, ಶಿವಮೊಗ್ಗ ಜಿಲ್ಲೆಯ ಆಗುಂಬೆ ಹೊಸನಗರ, ತಾಲೂಕಿನ ಭಾಗಗಳಲ್ಲಿ  ಪ್ರಯಾಣಿಸಿ  ಅಲ್ಲಿನ  ಸರಕಾರಿ ಶಾಲೆಗಳಲ್ಲಿ ಚಿತ್ರಕಲೆಯೊಂದಿಗೆ ಪರಿಸರದ ಪಾಠ ಕಲಿಸಲಿದ್ದಾರೆ.

ಮಗಳ ಈ ಕೆಲಸಕ್ಕೆ ತಂದೆ ರಮೇಶ್‌ ಅವರು ಸಹಕಾರ ನೀಡುತ್ತಿದ್ದಾರೆ. ಆಕೆಯ ಕೆಲಸ ಹೆಮ್ಮೆ ತಂದಿದೆ ಎನ್ನುತ್ತಾರೆ ಅವರು.

ಸ್ವಂತ ಹಣದಿಂದಲೇ ಪರಿಕರ ಖರೀದಿ
ರಕ್ಷಾ ಪೂಜಾರಿ ಅವರು  ಬೆಂಗಳೂರು, ಕೋಲ್ಕತ್ತಾ ಸೇರಿದಂತೆ ದೇಶದ ಹಲವೆಡೆ ಕಲಾಕೃತಿಗಳ ಪ್ರದರ್ಶನ ನೀಡಿದ್ದಾರೆ. ವಿವಿಧ ಕಲಾಕೃತಿ  ರಚಿಸಿ ಮಾರಾಟ ಮಾಡುತ್ತಾರೆ. ಆಯಿಲ್‌ ಪೈಂಟಿಂಗ್‌, ವಾಲ್‌ ಮ್ಯೂರಲ್ಸ…, ವಾಲ್‌ ಪೈಂಟಿಂಗ್‌ಗಳಲ್ಲಿ ಅನುಭವಿಗಳು. ಇವರು ವಿದ್ಯಾರ್ಥಿಗಳಿಗೆ ಚಿತ್ರಕಲೆ ಗಳಿಗೆ ಬೇಕಾದ ಪರಿಕರಗಳನ್ನು  ಸ್ವಂತ ಖರ್ಚಿನಿಂದಲೇ ಒದಗಿಸುತ್ತಿದ್ದಾರೆ.

ಚಿತ್ರ, ಫೋಟೊಗಳ ಮೂಲಕ ಜಾಗೃತಿ
ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಕಲಾಕೃತಿಗಳನ್ನು ತಯಾರಿಸುವ ಕಾರ್ಯಾಗಾರ ಮಾಡುತ್ತಾರೆ ರಕ್ಷಾ. ಇದು ಮಕ್ಕಳ ಮನೋವಿಕಾಸ, ಕಲ್ಪನಾ ಶಕ್ತಿ ಹೆಚ್ಚಿಸಲು ಸಹಕಾರಿ ಆಗುವುದರ ಜತೆಗೆ ಪರಿಸರದ ಮೇಲೆ ಪ್ರೀತಿಯನ್ನು ಹೊಂದುತ್ತದೆ ಎನ್ನುವುದು ಅವರು ಕಂಡುಕೊಂಡ ಸತ್ಯ.  ಸಾಸ್ತಾನದ ವನ್ಯಜೀವಿ ಛಾಯಾಗ್ರಾಹಕ ಮನೋಜ್‌ ಭಂಡಾರಿ ತೆಗೆದಿರುವ ವಿವಿಧ ಕಾಡು ಪ್ರಾಣಿ ಪಕ್ಷಿಗಳ ಚಿತ್ರಗಳನ್ನೂ ವಿದ್ಯಾರ್ಥಿ ಗಳಿಗೆ ತೋರಿಸಲಾಗುತ್ತಿದೆ.  ಪರಿಸರ ಸಂರಕ್ಷಣೆ ಸಂಬಂಧಿತ  ಪ್ರಬಂಧಗಳನ್ನೂ ಬರೆಸಲಾಗುತ್ತದೆ.

ಹೆತ್ತವರೇ ಸ್ಫೂರ್ತಿ
ಕಲೆಯ ಬಗ್ಗೆ ನನಗೆ ಎಳವೆ ಯಿಂದಲೂ ಆಸಕ್ತಿ. ಹೆತ್ತವರೇ ನನಗೆ ಸ್ಫೂರ್ತಿ. ಸ್ನೇಹಿತರ ಪ್ರೋತ್ಸಾಹದಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ  ಕಲಾ ಪ್ರದರ್ಶನ ನೀಡಲು ಸಾಧ್ಯವಾಗಿದೆ. ರಾಜ್ಯದ 80ಕ್ಕೂ ಹೆಚ್ಚು ಕಡೆ ಸಂಚರಿಸಿ ಶಿಬಿರ ಏರ್ಪಡಿಸಿದ್ದೇನೆ. ಮುಂದೆ ಹಳ್ಳಿಯ ಶಾಲೆಗಳಲ್ಲಿ ಜಾಗೃತಿ ಮೂಡಿಸಿ ವಿಸ್ತರಿಸಲಾಗುವುದು.
-ರಕ್ಷಾ ಪೂಜಾರಿ, ಚಿತ್ರಕಲಾವಿದೆ

– ಬಾಲಕೃಷ್ಣ ಭೀಮಗುಳಿ 

ಟಾಪ್ ನ್ಯೂಸ್

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.