School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…
Team Udayavani, Sep 18, 2024, 3:06 PM IST
ತೆಲಂಗಾಣ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಪೋಟಗೊಂಡ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ.
ಕಾಮರೆಡ್ಡಿ ಜಿಲ್ಲಾ ಕೇಂದ್ರದ ಬ್ರಿಲಿಯಂಟ್ ಗ್ರಾಮರ್ ಶಾಲೆಗೆ ಸೇರಿದ ಬಸ್ ಬುಧವಾರ ಬೆಳಿಗ್ಗೆ ಸುಮಾರು ಐವತ್ತು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಎಚ್ಚೆತ್ತ ಬಸ್ ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ ಅಷ್ಟರಲ್ಲಿ ಭಯಭೀತರಾದ ವಿದ್ಯಾರ್ಥಿಗಳು ಬಸ್ಸಿನಿಂದ ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ ಇದಾದ ಬಳಿಕ ದಟ್ಟ ಹೊಗೆ ಕಾಣಿಸಿಕೊಂಡು ಹೊತ್ತಿ ಉರಿದಿದೆ, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸಾಮಾನ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳನ್ನು ಕಾಲಕಾಲಕ್ಕೆ ತಪಾಸಣೆ ನಡೆಸಿ ಫಿಟ್ ಆಗಿದ್ದರೆ ಮಾತ್ರ ಓಡಿಸಬೇಕು ಎಂದು ಆರ್ ಟಿಎ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ ಕೆಲ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಈ ವಿಚಾರದಲ್ಲಿ ನಿರ್ಲಕ್ಷ್ಯ ತಾಳಿದ್ದು, ವಾಹನ ತಪಾಸಣೆ ನಡೆಸುವಲ್ಲಿ ಸಿಬ್ಬಂದಿಗಳು ವಿಫಲವಾಗಿದ್ದು ಇದರಿಂದಾಗಿ ಹೆಚ್ಚಿನ ಅವಘಡಗಳು ಸಂಭವಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.