UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ


Team Udayavani, Sep 18, 2024, 5:08 PM IST

17-uv-fusion

ಭೂಮಿಯ ಮೇಲೆ ಮನುಷ್ಯ ಆರೋಗ್ಯಕರವಾಗಿ ಜೀವನ ನಡೆಸಲು ಅತೀ ಮುಖ್ಯವಾಗಿ ಬೇಕಾಗಿರುವ ಗಾಳಿ, ನೀರು, ಬೆಳಕು ಎಲ್ಲವೂ ಪ್ರಕೃತಿ ಮಾತೆಯ ವರದಾನ. ಪ್ರಕೃತಿ ಇಲ್ಲದೆ ಮಾನವನ ಬದುಕೇ ಇಲ್ಲ. ಈ ಎಲ್ಲ ಸಂಗತಿಗಳನ್ನು ನಾವು ತಿಳಿದಿದ್ದರೂ ಪ್ರಕೃತಿಯನ್ನು ಉಳಿಸಿಕೊಳ್ಳುವಲ್ಲಿ ವಿಫ‌ಲರಾಗುತ್ತಿದ್ದೇವೆ. ಇದರರ್ಥ ಮುಂದೆ ನಮ್ಮನ್ನು ನಾವು ಉಳಿಸಿಕೊಳ್ಳಲು ಆಗದಂತಹ ಪರಿಸ್ಥಿತಿಗೆ ಬರುತ್ತೇವೆ ಎಂದು.

ಇತ್ತೀಚೆಗೆ ಅನೇಕ ಪ್ರಕೃತಿ ವಿಕೋಪಗಳು ನಮ್ಮ ಕೆಣ್ಣೆದುರೇ ನಡೆಯುತ್ತಿ¤ದೆ. ಇದಕ್ಕೆಲ್ಲ ಕಾರಣ ನಾವೇ… ಬುದ್ಧಿವಂತ ಮನುಜರು. ಬೇಸಗೆಯ ಪ್ರಾರಂಭದಲ್ಲೇ ನೀರಿಗಾಗಿ ಪರದಾಟ, ಮಳೆಗಾಲ ಪ್ರಾರಂಭವಾಗುತ್ತಲೇ ಭೂಕುಸಿತ, ಪ್ರವಾಹಗಳು. ಇನ್ನು ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ, ಹಾನಿಗೊಳ್ಳುತ್ತಿರುವ ಸೂರ್ಯನ ನೇರಳಾತೀತ ಕಿರಣಗಳನ್ನು ತಡೆದು ಜೀವ ಸಂಕುಲವನ್ನು ರಕ್ಷಿಸುತ್ತಿರುವ ಓಝೋನ್‌ ಪದರ, ಹೀಗೆ ಅನೇಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದೆ. ಇದಕ್ಕೆಲ್ಲ ಪ್ರಮುಖ ಕಾರಣ ಏನು ಎಂದು ಯೋಚಿಸಿದರೆ ನಮ್ಮ ಕಣ್ಣ ಎದುರು ಕಾಣುವುದು ಪರಿಸರ ನಾಶ.

ನಮ್ಮ ಹಿರಿಯರು ಹೇಳುತ್ತಿದ್ದ ಕಾಲ, ಗತಿಗಳು ಈಗಿಲ್ಲ, ಎಲ್ಲವೂ ಬದಲಾಗಿದೆ. ಹವಾಮಾನ ವೈಪರೀತ್ಯದಿಂದ ವ್ಯತಿರಿಕ್ತ ಪರಿಣಾಮವನ್ನು ನಾವು ಕಾಣುತ್ತಿದ್ದೇವೆ. ಎಲ್ಲವೂ ನಮ್ಮಿಂದಲೇ, ನಾವೇ ಮಾಡಿಕೊಂಡಿರುವುದು. ಇಂದು ಪರಿಸರ ಸಂರಕ್ಷಣೆ ಎನ್ನುವುದು ಕೇವಲ ಒಂದು ದಿನಕ್ಕೆ ಸೀಮಿತವಾದ ಪದವಾಗಿ ಬಿಂಬಿತವಾಗುತ್ತಿದೆ. ಒಂದು ಕಡೆ ಅಭಿವೃದ್ಧಿಯ ಹೆಸರಿನಲ್ಲಿ ಕಡಿಯುತ್ತಿರುವ ಮರ-ಗಿಡಗಳು ಮತ್ತೂಂದೆಡೆ ಕೇವಲ ಛಾಯಾಚಿತ್ರಕ್ಕಾಗಿ ಗಿಡ ನೆಟ್ಟು ಮತ್ತೆ ಅದರತ್ತ ಹೋಗದ ನಾವುಗಳು.

ಹೀಗಿರುವಾಗ ಹೇಗೆ ತಾನೆ ಪ್ರಕೃತಿ ಬೆಳೆಯಲು ಸಾಧ್ಯ. ಒಬ್ಬ ಮನುಷ್ಯನಿಗೆ ಆಮ್ಲಜನಕಯುಕ್ತ ಶುದ್ಧ ಗಾಳಿ ದೊರಕಬೇಕಾದರೆ ತಲಾ ಒಬ್ಬರಿಗೆ  ಏಳು ಮರ ಗಿಡಗಳು ಬೇಕು ಎಂದು ಹೇಳಲಾಗುತ್ತದೆ. ಇದಂತೂ ನಗರ ಪ್ರದೇಶಗಳಲ್ಲಿ ಅಸಾಧ್ಯವೇ ಸರಿ. ಇನ್ನು ಮುಂದಿನ ಜನಾಂಗದ ಜೀವನ ಮಟ್ಟ ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆ.

ಈ ಕುರಿತಂತೆ ಪ್ರತಿಯೊಬ್ಬರು ಜಾಗೃತಗೊಳ್ಳುವ ಅವಶ್ಯಕತೆ ಇದೆ. ಇಲಾಖೆಯೂ ಆರ್ಥಿಕ ಲಾಭದ ಉದ್ದೇಶಕ್ಕೆ ಗಿಡಗಳನ್ನು ನೆಟ್ಟು ಬೆಳೆಸದೆ ವಾಸ್ತವವಾಗಿ ಸಮಾಜವನ್ನು ನೋಡಬೇಕು. ಹಸುರಿದ್ದರೆ ಉಸಿರು ಎನ್ನುವುದು ಸರ್ವಕಾಲಕ್ಕೂ ಸತ್ಯ. ಈ ನಿಟ್ಟಿನಲ್ಲಿ ನಮ್ಮ ಮನುಕುಲವನ್ನು ಉಳಿಸಿಕೊಳ್ಳವಲ್ಲಿ ನಾವೆಲ್ಲರೂ ಕಟಿಬದ್ಧರಾಗೋಣ.

-ಲತಾ ಚೆಂಡೆಡ್ಕ ಪಿ.

ವಿವೇಕಾನಂದ ಕಾಲೇಜು ಪುತ್ತೂರು

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

16-uv-fusion

UV Fusion: ಎಲ್ಲರಿಗೂ ಬದುಕುವ ಹಕ್ಕಿದೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.