Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ


Team Udayavani, Sep 18, 2024, 6:04 PM IST

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

ಮುಂಬಯಿ: ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ತಜಕಿಸ್ತಾನಿ ಗಾಯಕ, ಸೋಶಿಯಲ್‌ ಮೀಡಿಯಾ ಪ್ರಭಾವಿ, ಬಿಗ್‌ ಬಾಸ್‌ 16 (Bigg Boss) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಅವರ ವಿವಾಹ ಮುರಿದು ಬಿದ್ದಿದೆ.

ಇದೇ ವರ್ಷದ ಏ.24 ರಂದು ಅಬ್ದು ರೋಝಿಕ್ ಎಮಿರಾಟಿ(ದುಬೈ) ಮೂಲದ 19 ವರ್ಷದ  ಅಮೀರಾ ಅವರೊಂದಿಗೆ ಶಾರ್ಜಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದರು. ಜುಲೈ7ರಂದು ತಾವು ವಿವಾಹವಾಗುವುದಾಗಿ ಘೋಷಿಸಿದ್ದರು.

“ಜೀವನದಲ್ಲಿ ನಾನು ಕೂಡ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಆಗುತ್ತೇನೆ ಎಂದು ಯಾವತ್ತೂ ಊಹಿಸಿರಲಿಲ್ಲ. ಜುಲೈ 7 ರ ದಿನಾಂಕವನ್ನು ನೆನಪು ಇಟ್ಟುಕೊಳ್ಳಿ” ಎಂದು ಅಬ್ದು ಹೇಳಿದ್ದರು.

ಆದರೆ ಇದೀಗ ತಮ್ಮ ಮದುವೆ ರದ್ದಾಗಿದ ಎಂದು ಅಬ್ದು ಹೇಳಿದ್ದಾರೆ. ಇ ಟೈಮ್ಸ್ ಜೊತೆ ಮಾತನಾಡಿರುವ ಅವರು, “ನಾನು ನನ್ನ ಮದುವೆಯನ್ನು ರದ್ದುಗೊಳಿಸಿದ್ದೇನೆ ಎಂದು ಘೋಷಿಸಲು ನನಗೆ ದುಃಖವಾಗಿದೆ. ನಿಶ್ಚಿತಾರ್ಥದ ಬಳಿಕ ನಮ್ಮಿಬ್ಬರ ನಡುವೆ ಕೆಲವು ಸಾಂಸ್ಕೃತಿಕ ವ್ಯತ್ಯಾಸಗಳಿರುವುದು ಸ್ಪಷ್ಟವಾಯಿತು. ಆ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ನಾನು  ನನ್ನ ದೈನಂದಿನ ಜೀವನದಲ್ಲಿ ಅನೇಕ ಸವಾಲುಗಳನ್ನು ಹೊಂದಿದ್ದೇನೆ. ಅದನ್ನು ನಿಭಾಯಿಸಲು ಸಮರ್ಥರಾಗಿರುವ ಮತ್ತು ಮಾನಸಿಕವಾಗಿ ಬೆಂಬಲಿಸುವ ಸಂಗಾತಿಯ ಅಗತ್ಯವಿದೆ” ಎಂದು ಅಬ್ದು ಹೇಳಿದ್ದಾರೆ.

“ನನ್ನ ಆರೋಗ್ಯಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿದ್ದೇನೆ. ನನ್ನೊಂದಿಗಿರುವ ಸ್ನೇಹವನ್ನು ಮತ್ತು ಸಂಬಂಧವನ್ನು ನಾನು ಶಾಶ್ವತವಾಗಿ ಪಾಲಿಸುತ್ತೇನೆ. ಭವಿಷ್ಯದಲ್ಲಿ ನಾನು ಮತ್ತೆ ಪ್ರೀತಿಯನ್ನು ಕಂಡುಕೊಳ್ಳುತ್ತೇನೆ ಮತ್ತು ನಿಮ್ಮೆಲ್ಲರ ಶುಭ ಹಾರೈಕೆಗಳಿಗಾಗಿ ಆಶಿಸುತ್ತೇನೆ” ಅವರು ಹೇಳಿದ್ದಾರೆ.

ಬಿಗ್‌ ಬಾಸ್‌ 16 ನಲ್ಲಿ ಸ್ಪರ್ಧಿಯಾಗಿ ಭಾಗಿಯಾದ ಬಳಿಕ ಭಾರತದಲ್ಲಿ ಅಬ್ದು ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಅವರ ಹಾಡುಗಳು ವೇಗವಾಗಿ ವೈರಲ್‌ ಆಗಿವೆ. ಉದ್ಯಮದಲ್ಲೂ ಅವರು ಗುರುತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.