Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ


Team Udayavani, Sep 18, 2024, 8:06 PM IST

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

ಚಿಕ್ಕಮಗಳೂರು: ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆಗಳನ್ನು ಸರ್ಕಾರ ಮತ್ತು ಜಿಲ್ಲಾಡಳಿತ ಹತ್ತು ವರ್ಷ ಕಳೆದರೂ ಪರಿಹರಿಸಿಲ್ಲ. ಹೀಗಾಗಿ ಉತ್ತಮ ಬದುಕು ಕಟ್ಟಿಕೊಳ್ಳುವ ಅವರ ಕನಸು ಈಡೇರದೆ ಬದುಕು ನರಕ ಸದೃಶ್ಯವಾಗಿದೆ ಎಂದು ನಕ್ಸಲ್‌ ಆರೋಪಿತರ ಪರ ನಾಗರಿಕ ನಿಯೋಗ ಆರೋಪಿಸಿದೆ.

ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಸಿ.ಎನ್‌. ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದರ್‌ ಕುಮಾರ್‌ ದಹೀಮ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, 2016ರಲ್ಲಿ ನಾಲ್ವರು ಹಾಗೂ 2017ರಲ್ಲಿ ಮೂವರು ನಕ್ಸಲ್‌ ಚಳವಳಿ ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಮರಳಿದರೂ ಅವರ ವಿರುದ್ಧ ಪ್ರಕರಣಗಳು, ಭೂಮಿ, ವಸತಿ, ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಇದುವರೆಗೂ ಪರಿಹರಿಸಿಲ್ಲ. ಕನ್ಯಾಕುಮಾರಿ ಎಂಬ ನಕ್ಸಲ್‌ ಆರೋಪಿತ ಮಹಿಳೆ ವಿಚಾರಣಾ ಧೀನ ಕೈದಿಯಾಗಿ ಜೈಲಿನಲ್ಲೇ ದಿನ ಕಳೆಯುತ್ತಿದ್ದಾಳೆ. ಆಕೆ ಎಳೆ ವಯಸ್ಸಿನ ಮಗು ತಾಯಿಯ ಮಮತೆ, ಆರೈಕೆಯಿಂದ ವಂಚಿತವಾಗಿದೆ ಎಂದು ತಿಳಿಸಿದರು.

ಬೇಡಿಕೆ ಈಡೇರಿಸಿ: ಪತ್ರಕರ್ತೆ ಗೌರಿ ಲಂಕೇಶ್‌ ಹಾಗೂ ಹಿರಿಯ ನ್ಯಾಯವಾದಿ ಎ.ಕೆ.ಸುಬ್ಬಯ್ಯ ಅವರ ಮರಣ ನಂತರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿದರೂ ರಾಜ್ಯ ಸಮಿತಿ ಪುನರ್‌ ರಚನೆಯಾಗದ ಕಾರಣ ಹಿನ್ನಡೆಯಾಗಿತ್ತು. ಇತ್ತೀಚೆಗೆ ಸಮಿತಿ ಪುನರ್‌ ರಚನೆಗೊಂಡಿದ್ದು, ಮುಖ್ಯವಾಹಿನಿಗೆ ಬಂದಿರುವ ನಕ್ಸಲ್‌ ಆರೋಪಿತರ ಎಲ್ಲ ಬೇಡಿಕೆ ಹಾಗೂ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿದರು.

ನಕ್ಸಲರ ಮೇಲಿನ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಸರ್ಕಾರ ಮುಂದಾಗಬೇಕು. ಕನ್ಯಾಕುಮಾರಿ ಮೇಲಿನ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆಗೊಳಪಡಿಸಿ ಇತ್ಯರ್ಥಪಡಿಸಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಖ್ಯವಾಹಿನಿಗೆ ಬಂದಿರುವ ನಕ್ಸಲ್‌ ಆರೋಪಿತರಾದ ನೀಲಗುಳಿ ಪದ್ಮನಾಭ ಹಾಗೂ ರಿಜ್ವಾನ ಬೇಗಂ ಎಂಬವರಿಗೆ ಬಿಗ್ಗನಹಳ್ಳಿಯ ಸ.ನಂ.265ರಲ್ಲಿ ನಾಲ್ಕು ವರ್ಷ ಹಿಂದೆಯೇ ತಲಾ ಎರಡು ಎಕರೆ ಭೂಮಿ ಗುರುತಿಸಲಾಗಿದ್ದು, ಕೂಡಲೇ ಮಂಜೂರು ಮಾಡಬೇಕು. ನೀಲಗುಳಿ ಪದ್ಮನಾಭ ಅವರು ವಾಸಿಸುವ ಗುಡಿಸಲಿಗೆ ವಿದ್ಯುತ್‌-ಹಕ್ಕುಪತ್ರ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ನಕ್ಸಲ್‌ ಆರೋಪಿತರ ಪರ ನಾಗರಿಕರ ನಿಯೋಗದ ಸದಸ್ಯರು ಹಾಗೂ ಪತ್ರಕರ್ತರಾದ ಸಿರಿಮನೆ ನಾಗರಾಜ್‌, ದಿನೇಶ್‌ ಪಟವರ್ಧನ್‌ ಹಾಗೂ ಹೋರಾಟಗಾರರಾದ ನೀಲಗುಳಿ ಪದ್ಮನಾಭ, ಗೌಸ್‌ಮಹಿದ್ದೀನ್‌, ಹಸನಬ್ಬ ಇದ್ದರು.

ಟಾಪ್ ನ್ಯೂಸ್

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.