Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್ ಕಿಡಿ
Team Udayavani, Sep 18, 2024, 9:59 PM IST
ಬೆಂಗಳೂರು: ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮತ್ತು ಸಿದ್ದರಾಮಯ್ಯನವರಿಗೆ ಎತ್ತಣಿಂದೆತ್ತ ಸಂಬಂಧ? ಸಂಗೊಳ್ಳಿ ರಾಯಣ್ಣನ ಹೆಸರು ಹೇಳಲು ಸಿಎಂ ಸಿದ್ದರಾಮಯ್ಯನವರಿಗೆ ನೈತಿಕ ಹಕ್ಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತರ ಜತೆಗೆ ಅವರು ಮಾತನಾಡಿ, ನಮ್ಮ ರಾಜ್ಯದ ಉಳಿವಿಗಾಗಿ, ಕಿತ್ತೂರು ಕರ್ನಾಟಕದ ಉಳಿವಿಗೆ ರಾಯಣ್ಣ ಅವರು ನಿಸ್ವಾರ್ಥವಾಗಿ ಹೋರಾಟ ನಡೆಸಿದ್ದರು. ಸಿದ್ದರಾಮಯ್ಯನವರ ರೀತಿ ಸಂಗೊಳ್ಳಿ ರಾಯಣ್ಣ 14 ನಿವೇಶನ ಪಡೆದಿರಲಿಲ್ಲ. ರಾಜ್ಯಕ್ಕೋಸ್ಕರ ನಿಸ್ವಾರ್ಥ ಹೋರಾಟ ಮಾಡಿ ಬಲಿದಾನ ಮಾಡಿ, ನಾಡಿಗೆ ಕೀರ್ತಿ ತಂದ ವ್ಯಕ್ತಿ ಸಂಗೊಳ್ಳಿ ರಾಯಣ್ಣ ಎಂದು ತಿರುಗೇಟು ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ನನ್ನು ತಾವು ಸಂಗೊಳ್ಳಿ ರಾಯಣ್ಣನೊಂದಿಗೆ ಹೋಲಿಸಿಕೊಂಡಿದ್ದಾರೆ. ಸಂಗೊಳ್ಳಿ ರಾಯಣ್ಣನಿಗೆ ದ್ರೋಹ ಆದ ಮಾದರಿಯಲ್ಲೇ ತಮಗೂ ದ್ರೋಹ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರನ್ನು ಬಲಿ ಕೊಡುವವರು ಯಾರು? ಅವರ ಹೆಸರು ಏನು? ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.