CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

5 ವರ್ಷ ಅವಧಿ ಪೂರ್ಣಗೊಳಿಸುವ ಬಗ್ಗೆ ಸಿಎಂ ಸಂಶಯ ಜೆಡಿಯು, ಟಿಡಿಪಿ ಹೊರ ಬಂದರೆ ಸರಕಾರ ಪತನ

Team Udayavani, Sep 19, 2024, 6:50 AM IST

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 5 ವರ್ಷ ಅವಧಿ ಪೂರ್ಣಗೊಳಿಸುವುದು ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, “ಮೋದಿ ನೇತೃತ್ವದ ಸರಕಾರವು ಜೆಡಿಯು ಮತ್ತು ಟಿಡಿಪಿ ನೆರವಿನಿಂದ ನಡೆಯುತ್ತಿದೆ. ಅವರು ಹೊರಬಂದರೆ ಮುಗಿಯಿತು. ನನಗಿರುವ ಮಾಹಿತಿ ಪ್ರಕಾರ ಈಗಿರುವ ಕೇಂದ್ರ ಸರಕಾರ 5 ವರ್ಷಗಳ ಅವಧಿ ಪೂರ್ಣಗೊಳಿಸುತ್ತದೆ ಅಂತ ಅನಿಸುತ್ತಿಲ್ಲ’ ಎಂದು ಅನುಮಾನ ವ್ಯಕ್ತಪಡಿಸಿದರು.

136 ಸ್ಥಾನಗಳನ್ನು ಹೊಂದಿರುವ ನಮ್ಮ ಸರಕಾರ ನಾಳೆಗೆ ಬಿದ್ದುಹೋಗುತ್ತದೆ, ನಾಡಿದ್ದು ಬೀಳುತ್ತದೆ ಅಂತ ವಿಪಕ್ಷಗಳು ಹೇಳುತ್ತವೆ. ಆದರೆ, ಮೋದಿ ನೇತೃತ್ವದ ಕೇಂದ್ರ ಸರಕಾರವೇ ತನ್ನ ಅವಧಿ ಪೂರ್ಣಗೊಳಿಸುವುದು ಅನುಮಾನ ಎಂದರು.
ಈ ನಡುವೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ವರ್ಚಸ್ಸು ಮತ್ತು ಬೆಳವಣಿಗೆ ಸಹಿಸಲಾಗದ ಬಿಜೆಪಿಯು ರಾಜಕೀಯವಾಗಿ ಮುಗಿಸಲು ಕುತಂತ್ರ ನಡೆಸುತ್ತಿದೆ. ಅದಕ್ಕೆ ಇತ್ತೀಚೆಗೆ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳು ಹಾಗೂ ಅದರ ಸುತ್ತಲಿನ ಬೆಳವಣಿಗೆಗಳೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಉತ್ತರ ಪ್ರದೇಶದ ಬಿಜೆಪಿಯ ಓರ್ವ ಶಾಸಕ, ರಾಹುಲ್‌ ಗಾಂಧಿ ಅವರನ್ನು ನಂಬರ್‌ ಒನ್‌ ಭಯೋತ್ಪಾದಕ ಎನ್ನುತ್ತಾರೆ. ಮಹಾರಾಷ್ಟ್ರದ ಮತ್ತೋರ್ವ ಬಿಜೆಪಿ ಶಾಸಕ, ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ಅಂತಾರೆ. ಇನ್ನೊಬ್ಬರು ಕೊಲೆ ಬೆದರಿಕೆ ಹಾಕುತ್ತಾರೆ. ಇದೆಲ್ಲವನ್ನೂ ನೋಡಿದರೆ, ರಾಹುಲ್‌ ಗಾಂಧಿ ಅವರಿಗೆ ಜೀವ ಬೆದರಿಕೆ ಇದೆ ಅನ್ನುವುದು ಸ್ಪಷ್ಟವಾಗುತ್ತದೆ. ಕೂಡಲೇ ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಒತ್ತಾಯಿಸಿದರು.

ಯತ್ನಾಳ್‌ ಇಟ್ಟುಕೊಂಡಿದ್ದೇ ಬೊಗಳಿಸಲು
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರನ್ನು ಬಿಜೆಪಿ ಇಟ್ಟುಕೊಂಡಿರುವುದೇ ಬೊಗಳಿಸಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿಯು ಬೇಕಾಬಿಟ್ಟಿ ಸುಳ್ಳು ಆರೋಪಗಳನ್ನು ಮಾಡಲಿಕ್ಕಾಗಿಯೇ ಇಂತಹ ಕೆಲವರನ್ನು ಪಕ್ಷದಲ್ಲಿ ಇಟ್ಟುಕೊಂಡಿದೆ. ಹಿಂದೆ ಯತ್ನಾಳ್‌, ಯಡಿಯೂರಪ್ಪ ಮತ್ತು ಬಿ. ವೈ. ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ರೂ. ಆರೋಪ ಮಾಡಿದ್ದರು. ಅದರ ಅನಂತರವೂ ಅನೇಕ ಸಲ ಹೇಳಿಕೆ ನೀಡಿದ್ದಾರೆ. ಪಕ್ಷ (ಬಿಜೆಪಿ) ಏನಾದರೂ ಕ್ರಮ ಕೈಗೊಂಡಿತೇ? ಕೇಂದ್ರ ಮಾಜಿ ಸಚಿವ ಅನಂತಕುಮಾರ್‌ ಹೆಗಡೆ ಸಂವಿಧಾನ ಬದಲಾಯಿಸುವುದಾಗಿ ಹೇಳಿದರು. ಅವರ ವಿರುದ್ಧ ಏನಾದರೂ ಕ್ರಮ ಆಯಿತಾ?’ ಎಂದು ಪ್ರಶ್ನೆಯೊಂದಕ್ಕೆ ಕೇಳಿದರು.

ಮುನಿರತ್ನ ವಿರುದ್ಧ ಕಾನೂನು ಪ್ರಕಾರ ಕ್ರಮ
ಶಾಸಕ ಮುನಿರತ್ನ ಪ್ರಕರಣದಲ್ಲಿ ಪೊಲೀಸರು ತಮ್ಮ ವಿವೇಚನೆ ಮೇರೆಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಿಎಸ್‌ಐ ಪರಶುರಾಮ ಸಾವಿನ ವಿಚಾರದಲ್ಲಿ ಕೇಳಿಬಂದ ಶಾಸಕ ಚನ್ನಾರೆಡ್ಡಿ ಪಾಟೀಲ ತನ್ನೂರು ಪ್ರಕರಣದೊಂದಿಗೆ ಶಾಸಕ ಮುನಿರತ್ನ ಪ್ರಕರಣವನ್ನು ಹೋಲಿಕೆ ಮಾಡುವುದು ಸರಿ ಅಲ್ಲ. ಆ ಪ್ರಕರಣದಲ್ಲಿ ಎಲ್ಲಿಯೂ ಪರಶುರಾಮ, ಶಾಸಕನ ಹೆಸರು ಹೇಳಿದ್ದಾರೆಯೇ? ಇಲ್ಲ, ಹೀಗಿರುವಾಗ ಪ್ರಕರಣವನ್ನು ಮುನಿರತ್ನ ಪ್ರಕರಣಕ್ಕೆ ಹೋಲಿಕೆ ಮಾಡಲು ಬರುವುದಿಲ್ಲ ಎಂದು ಹೇಳಿದರು.

ಈ ಮಧ್ಯೆ ಒಕ್ಕಲಿಗ ಮುಖಂಡರು ನನ್ನನ್ನು ಭೇಟಿ ಮಾಡಿ, ಒಕ್ಕಲಿಗ ಮತ್ತು ಪರಿಶಿಷ್ಟ ಜಾತಿ ಬಗ್ಗೆ ಹೀನಾಯವಾಗಿ ಮಾತನಾಡಿರುವ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕಾನೂನು ಪ್ರಕಾರ ಕ್ರಮ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.