Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ಶೌರ್ಯ ರಾಜ್ಯ ಮಟ್ಟದ ಕಾರ್ಯಾಗಾರ ಸಮಾರೋಪ

Team Udayavani, Sep 19, 2024, 2:58 AM IST

Shourya

ಬೆಳ್ತಂಗಡಿ: ನಿಸ್ವಾರ್ಥದಿಂದ ಆಪತ್ತಿನಲ್ಲಿರುವವರನ್ನು ರಕ್ಷಿಸುವ ಶೌರ್ಯ ಯೋಧರು ಆಪ್ತ ರಕ್ಷಕರು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಧರ್ಮಸ್ಥಳ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ವತಿಯಿಂದ ಧರ್ಮಸ್ಥಳದಲ್ಲಿ ಸೆ.18 ರಂದು ಜರಗಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣ ಸಮಿತಿಗಳ ರಾಜ್ಯ ಮಟ್ಟದ ಮಾಸ್ಟರ್‌ ಮತ್ತು ಕ್ಯಾಪ್ಟನ್‌ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಶೌರ್ಯ ತಂಡವು ರಾಜ್ಯದ 91 ತಾಲೂಕುಗಳಲ್ಲಿ 638 ಘಟಕಗಳ ಮೂಲಕ 10,640 ಆಪ್ತರಕ್ಷಕರನ್ನು ಹೊಂದಿದೆ. ಇವರೆಲ್ಲ ತ್ಯಾಗ, ಸಾಹಸಗಳ ಮೂಲಕ ಮಹೋನ್ನತ ಸೇವೆ ಸಲ್ಲಿಸುತ್ತಿದ್ದಾರೆ. ಜೀವ ಉಳಿಸುವುದು ಪುಣ್ಯದ ಕಾರ್ಯ. ತಮ್ಮ ತಾಲೂಕುಗಳಲ್ಲಿ ವಿಪ ತ್ತು ಎದುರಿಸಲು ತಂಡವನ್ನು ಸನ್ನದ್ಧಗೊಳಿಸಿ ಎಂದರು. ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ ಕುಮಾರ್‌ ಮಾತನಾಡಿ, ದೇಶದಲ್ಲಿ ಎನ್‌ಡಿಆರ್‌ಎಫ್‌ ಬಳಿಕ ಅತಿ ದೊಡ್ಡ ಸೇವಾ ಪಡೆಯಿದ್ದರೆ ಅದು ಶೌರ್ಯ ತಂಡ ಎಂದರು.

ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿನ್ಸೆಂಟ್‌ ಪಾಯಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದ 638 ಘಟಕಗಳ ಮೂಲಕ 10,460 ಮಂದಿ ಸೇವೆ ನೀಡುತ್ತಿದ್ದಾರೆ. ಇವುಗಳಲ್ಲಿ 14 ಕ್ಷಿಪ್ರ ತಂಡಗಳಿವೆ. ಧರ್ಮಾಧಿಕಾರಿಯವರು 2 ಕೋ.ರೂ. ಮೌಲ್ಯದ ರಕ್ಷಣ ಕಿಟ್‌ ಒದಗಿಸಿದ್ದಾರೆ. ಜತೆಗೆ 75 ಸಾವಿರ ರೂ. ಸಂಪೂರ್ಣ ಸುರಕ್ಷಾ ವಿಮೆ ನೀಡಲಾಗಿದೆ ಎಂದು ಹೇಳಿದರು.

ಈವರೆಗೆ 1.74 ಲಕ್ಷ ವಿಪತ್ತು ಸೇವೆ ನೀಡಿದ್ದು, 2.02 ಲಕ್ಷ ಒಟ್ಟು ಸಾಮಾಜಿಕ ಸೇವೆ ನೀಡುವ ಮೂಲಕ 22 ಲಕ್ಷ ಮಾನವ ದಿನಗಳನ್ನು ಸೃಜಿಸಿದೆ. ಇತ್ತೀಚೆಗೆ ವಯನಾಡಿನಲ್ಲೂ ಸೇವೆ ನೀಡಿದೆ ಎಂದರು. ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆಯ (ಎನ್‌ಡಿಆರ್‌ಎಫ್‌) ಟೀಮ್‌ ಕಮಾಂಡರ್‌ ಶಾಂತಿಲಾಲ್‌ ಜಟಿಯಾ ಕಾರ್ಯಾಗಾರ ನಡೆಸಿಕೊಟ್ಟರು. ವಿಪತ್ತು ನಿರ್ವಹಣ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್‌ ಪಟಗಾರ ವಂದಿಸಿದರು. ಜನಜಾಗೃತಿ ಯೋಜ ನಾಧಿಕಾರಿ ಗಣೇಶ್‌ ಆಚಾರ್ಯ ನಿರೂಪಿಸಿದರು.

ಪ್ರಥಮ ಚಿಕಿತ್ಸೆ (ಸಿಆರ್‌ಪಿ) ನಡೆಸಿದ 8 ಸ್ವಯಂ ಸೇವಕರಿಗೆ ಬಹುಮಾನ, ಶೌರ್ಯ ತಂಡದವರಿಗೆ ಸಮವಸ್ತ್ರ, ಮಾಹಿತಿ ಪುಸ್ತಕವನ್ನು ಡಾ| ಹೆಗ್ಗಡೆ ಬಿಡುಗಡೆ ಮಾಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.