Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
ರೋಗಿಗಳ ಚಿಕಿತ್ಸೆಗೆಂದು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಮೀಸಲು: ಡಿಎಚ್ಒ ಡಾ.ತಿಮ್ಮಯ್ಯ
Team Udayavani, Sep 19, 2024, 7:12 AM IST
ಮಂಗಳೂರು: ಕೇರಳದಲ್ಲಿ ನಿಫಾ ಬೆನ್ನಲ್ಲೇ ಮಂಗನ ಕಾಯಿಲೆ ಭೀತಿ ಉಂಟಾಗಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೀ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಆಫ್ರಿಕನ್ ದೇಶಗಳಲ್ಲೂ ಮಂಗನ ಕಾಯಿಲೆ ಹರಡಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಪ್ರತ್ಯೇಕ ಆ್ಯಂಬುಲೆನ್ಸ್ ಸನ್ನದ್ಧವಾಗಿದೆ. ಮಂಗನ ಕಾಯಿಲೆ ಪೀಡಿತ ರೋಗಿಗಳ ಚಿಕಿತ್ಸೆಗೆಂದು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಅನ್ನು ಕಾದಿರಿಸಲಾಗಿದೆ.
ವಿಶೇಷ ಸಭೆ
“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಮಂಗನ ಕಾಯಿಲೆಯ ಯಾವುದೇ ಆತಂಕ ಇಲ್ಲ. ರಾಜ್ಯ ಸರಕಾರದಿಂದಲೂ ಸದ್ಯಕ್ಕೆ ಯಾವುದೇ ಸೂಚನೆ ಬಂದಿಲ್ಲ. ವಿಮಾನ ನಿಲ್ದಾಣ, ಬಂದರಿನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರಂತರ ತಪಾಸಣೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಗೆಂದು ವೆನ್ಲಾಕ್ನಲ್ಲಿ ಆರು ಬೆಡ್ಗಳನ್ನು ಮೀಸಲಿಟ್ಟಿದ್ದೇವೆ. ಸದ್ಯದಲ್ಲೇ ವಿಶೇಷ ಸಭೆ ನಡೆಸಲಾಗುತ್ತದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದ್ದಾರೆ.
ವೈರಲ್ ಜ್ವರ ಹೆಚ್ಚಳ
ಕೆಲವು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ವೈರಲ್ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಕೆಮ್ಮು, ಶೀತ, ಗಂಟಲು ನೋವು ಸಹಿತ ಜ್ವರದ ಲಕ್ಷಣ ಜಿಲ್ಲೆಯ ಅಲ್ಲಲ್ಲಿ ಕಂಡು ಬರುತ್ತಿದೆ. ಚಿಕಿತ್ಸೆಗೆಂದು ವೈದ್ಯರ ಬಳಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಅದರಲ್ಲೂ ಮಕ್ಕಳಿಗೆ ಹೆಚ್ಚಾಗಿ ಜ್ವರ ಕಾಣಿಸಿಕೊಳ್ಳುತ್ತಿದೆ. ನಗರದಲ್ಲಿ ಕೆಲವು ದಿನಗಳಿಂದ ಬಿಸಿಲಿನ ವಾತಾವರಣ ಇದೆ. ರಾತ್ರಿ ವೇಳೆ ಕೆಲವು ಕಡೆ ಮಳೆ ಯಾಗುತ್ತಿದೆ. ಈ ನಿಟ್ಟಿನಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳುವ ಅಗತ್ಯವಿದೆ ಎನ್ನುತ್ತಾರೆ ವೈದ್ಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.