Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!


Team Udayavani, Sep 19, 2024, 11:28 AM IST

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

ಬೆಂಗಳೂರು: ಪ್ರೀತಿಸುತ್ತಿದ್ದ ಯುವತಿಗೆ ಮದುವೆ ಯಾಗುವಂತೆ ಪೀಡಿಸುತ್ತಿದಲ್ಲದೆ, ಪಾರ್ಕ್‌ಗೆ ಬರುವಂತೆ ಹೇಳಿ ಅಸಭ್ಯವಾಗಿ ನಡೆದುಕೊಂಡಿದ್ದ ಬಟ್ಟೆ ಅಂಗಡಿ ಮಾಲಿಕನಿಗೆ ಪ್ರಿಯಕರ ಚಾಕುವಿನಿಂದ ಇರಿದಿರುವ ಘಟನೆ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುದ್ದಗುಂಟೆಪಾಳ್ಯ ನಿವಾಸಿ ಹಿತೇಂದ್ರ ಕುಮಾರ್‌(58) ಚಾಕು ಇರಿತಕ್ಕೊಳಗಾದ ವ್ಯಾಪಾರಿ. ಕೃತ್ಯ ಎಸಗಿದ ಬೆಳಗಾವಿಯ ಸಿದ್ದು(28) ಮತ್ತು ಆತನ ಪ್ರೇಯಸಿ ಕಿರಣ ನಿಕ್ಕಂ (24) ಎಂಬುವರನ್ನು ಬಂಧಿಸಲಾಗಿದೆ. ಹಿತೇಂದ್ರ ಕುಮಾರ್‌ ಪ್ರಾಣಾಪಾ ಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಿದ್ದು ಮತ್ತು ಕಿರಣ ಒಂದೇ ಊರಿನವರಾಗಿದ್ದು, ಐದಾರು ವರ್ಷ ಗಳಿಂದ ಪ್ರೀತಿಸುತ್ತಿದ್ದರು. ಜೂನ್‌ನಲ್ಲಿ ಬೆಂಗಳೂರಿಗೆ ಬಂದಿದ್ದು, ಸುದ್ದಗುಂಟೆಪಾಳ್ಯ ಸಮೀಪದ ತಾವರೆಕೆರೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಸಹ ಜೀವನ ನಡೆಸುತ್ತಿದ್ದರು. ಕಿರಣ, ಜಯನಗರದ 9ನೇ ಬ್ಲಾಕ್‌ಲ್ಲಿರುವ ಹಿತೇಂದ್ರ ಕುಮಾರ್‌ ಅವರ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಸಿದ್ದು ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದ.

ಈ ಮಧ್ಯೆ ಹಿತೇಂದ್ರ ಕುಮಾರ್‌, ಕಿರಣಗೆ ತನ್ನನ್ನು ಮದುವೆ ಆಗುವಂತೆ ಪೀಡಿಸುತ್ತಿದ್ದ. ಅದರಿಂದ ಬೇಸರಗೊಂಡಿದ್ದ ಕಿರಣ ಒಂದು ತಿಂಗಳ ಹಿಂದಷ್ಟೇ ಕೆಲಸ ಬಿಟ್ಟಿದ್ದಳು. ಆದರೂ ಹಿತೇಂದ್ರ ಕುಮಾರ್‌ ಆಕೆಗೆ ಪ್ರೀತಿಯ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸುತ್ತಿದ್ದ. ಅದರಿಂದ ಪ್ರೇರಿತಳಾದ ಕಿರಣ, ಹಿತೇಂದ್ರ ಕುಮಾರ್‌ ಪ್ರೀತಿಯನ್ನು ಒಪ್ಪಿಕೊಂಡಿದ್ದಳು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪಾರ್ಕ್‌ಗೆ ಕರೆದು ಚಾಕು ಇರಿತ: ಈ ನಡುವೆ ಸೆ.14ರಂದು ಹಿತೇಂದ್ರ ಕುಮಾರ್‌, ಕಿರಣಗೆ ಕರೆ ಮಾಡಿ ಭೇಟಿ ಮಾಡುವಂತೆ ಕೇಳಿದ್ದಾನೆ. ಅದಕ್ಕೆ ಆಕೆ ಕೂಡ ಒಪ್ಪಿಕೊಂಡಿದ್ದು, ಅಂದು ರಾತ್ರಿ 9.30ರ ಸುಮಾರಿಗೆ ಕೆಇಬಿ ಪಾರ್ಕ್‌ನಲ್ಲಿ ಇಬ್ಬರು ಭೇಟಿಯಾಗಿದ್ದಾರೆ. ಈ ವೇಳೆ ಹಿತೇಂದ್ರ ಕುಮಾರ್‌, ಕಿರಣಗೆ ತನ್ನ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಅದಕ್ಕೆ ಕಿರಣ ಕೂಡ ಒಪ್ಪಿಕೊಡಿದ್ದಾಳೆ. ಕೆಲ ಹೊತ್ತು ಪಾರ್ಕ್‌ನಲ್ಲೇ ಸಮಯ ಕಳೆದು ಮನೆ ಹೋಗಿದ್ದಾರೆ.

ತಡರಾತ್ರಿ ಮನೆಗೆ ಹೋದ ಕಿರಣಗೆ, ಪ್ರಿಯಕರ ಸಿದ್ದು ಪ್ರಶ್ನಿಸಿದ್ದಾನೆ. ಆಗ ಕಿರಣ, ತನ್ನ ಮೊಬೈಲ್‌ ತೋರಿಸಿ ಹಿತೇಂದ್ರ ಕುಮಾರ್‌ ಪ್ರೀತಿಸುವಂತೆ, ಮದುವೆ ಆಗುವಂತೆ ಪೀಡಿಸುತ್ತಿದ್ದಾನೆ. ಆತನ ಭೇಟಿಗೆ ಪಾರ್ಕ್‌ಗೆ ಹೋಗಿದ್ದಾಗಿ ಹೇಳಿಕೊಂಡಿದ್ದಾಳೆ. ಆಗ ಇಬ್ಬರ ನಡುವೆ ಇದೇ ವಿಚಾರಕ್ಕೆ ಜಗಳ ಉಂಟಾಗಿದೆ. ಅದರಿಂದ ಕೋಪಗೊಂಡ ಸಿದ್ದು, ಹಿತೇಂದ್ರ ಕುಮಾರ್‌ ಕೊಲೆಗೆ ಸಂಚು ರೂಪಿಸಿ, ತನ್ನ ಪ್ರೇಯಸಿಯಿಂದಲೇ ಹಿತೇಂದ್ರ ಕುಮಾರ್‌ ಸೆ.15ರಂದು ಬೆಳಗ್ಗೆ ಕರೆ ಮಾಡಿಸಿ, ಇಂದು ರಾತ್ರಿ ಕೆಇಬಿ ಪಾರ್ಕ್‌ಗೆ ಬರುವಂತೆ ಹೇಳಿಸಿದ್ದಾನೆ. ಅದರಂತೆ ರಾತ್ರಿ 10 ಗಂಟೆ ಸುಮಾರಿಗೆ ಹಿತೇಂದ್ರಕುಮಾರ್‌ ಪಾರ್ಕ್‌ಗೆ ಬಂದು ಕಲ್ಲಿನ ಬೆಂಚ್‌ ಮೇಲೆ ಕುಳಿತು, ಕಿರಣ ಜತೆ ಮಾತನಾಡುತ್ತಿದ್ದ.

ಮತ್ತೂಂದೆಡೆ ಮೊದಲೇ ಸಂಚು ರೂಪಿಸಿದಂತೆ ಕಿರಣ ಕುಳಿತಿದ್ದ ಕಲ್ಲಿನ ಬೆಂಚ್‌ ಹಿಂಭಾಗದಲ್ಲೇ ಸಿದ್ದು ಚಾಕು ಹಿಡಿದು ಅವಿತುಕೊಂಡಿದ್ದ. ಹಿತೇಂದ್ರ ಕುಮಾರ್‌, ಕಿರಣ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಂತೆ ಆತನ ಕುತ್ತಿಗೆ, ಬೆನ್ನು ಹಾಗೂ ಹೊಟ್ಟೆ ಭಾಗಕ್ಕೆ ಇರಿದಿದ್ದಾನೆ. ಬಳಿಕ ಪ್ರೇಯಸಿ ಜತೆ ಸ್ಥಳದಿಂದ ಪರಾರಿಯಾಗಿದ್ದ.

ನಂತರ ಪರಿಚಯಸ್ಥರೊಬ್ಬರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡ ಹಿತೇಂದ್ರ ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.16ರಂದು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ಕೈಗೊಂಡು ಪ್ರೇಮಿಗಳ ಬಂಧಿಸಲಾಗಿದೆ. ಹಿತೇಂದ್ರಕುಮಾರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.