2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Team Udayavani, Sep 19, 2024, 12:13 PM IST
ಹಾವೇರಿ: ನಮ್ಮ ಸಮಾಜದ ಶಾಸಕರು ಕೈಕೊಟ್ಟ ನಂತರ, ವಕೀಲರ ಬಳಿ ಬಂದಿದ್ದೇನೆ. ಶಾಸಕಾಂಗದ ಮೇಲೆ ನಂಬಿಕೆ ಕಳೆದುಕೊಂಡು, ಈಗ ನ್ಯಾಯಾಂಗದ ಮೇಲೆ ವಿಶ್ವಾಸ ಇಟ್ಟಿದ್ದೇನೆ. 2A ಮೀಸಲಾತಿ ಹೋರಾಟಕ್ಕೆ ಈಗ ಅಡ್ವೋಕೇಟ್ ಪರಿಷತ್ ಮೂಲಕ ಹೋರಾಟ ಪ್ರಾರಂಭ ಮಾಡಿದ್ದೇವೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಶಾಸಕರು ಮತ್ತು ಜನಪ್ರತಿನಿಧಿಗಳು ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ಈಗ ಲಿಂಗಾಯತ ಪಂಚಮಸಾಲಿ ಅಡ್ವೋಕೇಟ್ ಪರಿಷತ್ತಿನ ಪ್ರಥಮ ಮಹಾಪರಿಷತ್ ನಡೆಸುತ್ತೇವೆ. ಸೆಪ್ಟೆಂಬರ್ 22 ಬೆಳಗಾವಿಯಲ್ಲಿ ರಾಜ್ಯಮಟ್ಟದ ಸಮಾವೇಶ ಮಾಡುತ್ತೇವೆ. ಬೊಮ್ಮಾಯಿ ಸರ್ಕಾರ ಇದ್ದಾಗ ನಮ್ಮ ಶಾಸಕರು ಮುಂದೆ ನಿಂತು ಕೇಳುತ್ತಿದ್ದರು. ಈಗ ಅವರ ಮನೆ ಬಾಗಿಲು ನಾನು ಹೋಗುವ ಪರಸ್ಥಿತಿ ಬಂದಿದೆ ಎಂದರು.
ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ. ನಮ್ಮ ಶಾಸಕರು ಈಗ ಧ್ವನಿ ಕಳೆದುಕೊಂಡಿದ್ದಾರೆ ಸರ್ಕಾರ ಕಾನೂನು ಸಭೆ ಕರೆದು ಮೀಸಲಾತಿ ಬಗ್ಗೆ ಚರ್ಚೆ ಮಾಡುವವರಿಗೂ ಹೋರಾಟ ಮುಂದುವರೆಸುತ್ತೇವೆ. 60 ಜನ ಶಾಸಕರು ಇದ್ದರು ವಿಧಾನಸೌಧ ಒಳಗೆ ಮಾತನಾಡುತ್ತಿಲ್ಲ. ಸ್ಪೀಕರ್ ಮಾತನಾಡಲು ಅವಕಾಶ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ಬರಲು ಅಲ್ಪಸಂಖ್ಯಾತರಷ್ಟೇ ಕಾರಣ ನಮ್ಮ ಸಮಾಜದ ಪಾತ್ರ ಇದೆ. 2A ಮೀಸಲಾತಿ ಕೊಡಲು ತಡವಾದರೂ ಪರವಾಗಿಲ್ಲ. ಒಬಿಸಿ ಗೆ ಸೇರಿಸಿ ಪುಣ್ಯ ಕೊಟ್ಟಿಕೊಳ್ಳಿ. ನಮ್ಮ ಸಮಾಜದ ಋಣ ತೀರಿಸುವ ಕೆಲಸ ಮಾಡಿ ಎಂದು ಸ್ವಾಮೀಜಿ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.