Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು


Team Udayavani, Sep 19, 2024, 2:54 PM IST

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಬುಧವಾರದಿಂದ ಮರದ ಅಂಬಾರಿ ಹೊರುವ ತಾಲೀಮು ಆರಂಭವಾಗಿದ್ದು, ಮೊದಲ ದಿನವೇ ಕ್ಯಾಪ್ಟನ್‌ ಅಭಿಮನ್ಯು ರಾಜ ಬೀದಿ ಯಲ್ಲಿ ಗಾಂಭೀರ್ಯದಿಂದ ಮರದ ಅಂಬಾರಿ ಹೊತ್ತು ಬೀಗಿದ.

ಸಂಜೆ 5.50ಕ್ಕೆ ಅರಮನೆ ಅಂಗಳ ದಿಂದ ಮರದ ಅಂಬಾರಿ ಹೊತ್ತು ಸಖಿಯರಾದ ಹಿರಣ್ಯಾ ಮತ್ತು ಲಕ್ಷ್ಮೀಯೊಂದಿಗೆ ಬನ್ನಿಮಂಟಪದತ್ತ ಹೆಜ್ಜೆ ಹಾಕಿದ. ಈ ವೇಳೆ ಮಂಹೇಂದ್ರ, ಧನಂಜಯ, ಭೀಮ, ಪ್ರಶಾಂತ, ಗೋಪಿ, ಕಂಜನ್‌, ಸುಗ್ರೀವ, ರೋಹಿತ, ಏಕಲವ್ಯ, ದೊಡ್ಡಹರವೆ ಲಕ್ಷ್ಮೀ, ವರಲಕ್ಷ್ಮೀ ಆನೆಗಳು ಅಭಿಮನ್ಯುವನ್ನು ಅನುಸರಿಸುವ ಮೂಲಕ ಆತನಿಗೆ ಸಾಥ್‌ ನೀಡಿದವು. ರಾಜ ಬೀದಿಯಲ್ಲಿ ಅಭಿಮನ್ಯು ತನ್ನ ಪಡೆಯೊಂದಿಗೆ ಗಾಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗಿ ದರೆ, ದಾರಿಯುದ್ದಕ್ಕೂ ರಸ್ತೆ ಬದಿ ವ್ಯಾಪಾರಿಗಳು, ಸಾರ್ವಜನಿಕರು ಕೈಮುಗಿದು ನಮಸ್ಕರಿಸಿದರೆ, ಹೂ ಮತ್ತು ಹಣ್ಣು ವ್ಯಾಪಾರಿಗಳು ಆನೆಗಳಿಗೆ ನೀಡಿ ತಮ್ಮ ಭಕ್ತಿ ಮೆರೆದರು.

ವಿಶೇಷ ಪೂಜೆ: ಮರದ ಅಂಬಾರಿ ತಾಲೀಮು ಹಿನ್ನೆಲೆ ಸಂಜೆ 4ಕ್ಕೆ ಅರಮನೆ ಅಂಗಳದಲ್ಲಿನ ಕೋಡಿ ಸೋಮೇಶ್ವರ ದೇವಾಲಯ ಅಭಿಮನ್ಯುವಿನ ಹೆಗಲಿಗೆ ಗಾದಿ ಮತ್ತು ನಮª ಬಿಗಿದು, ರಾಜವಂಶಸ್ಥರು ವಾಸಿಸುವ ಖಾಸಗಿ ಅರಮನೆಯ ಮುಂಭಾಗಲ್ಲಿರುವ ಅಂಬಾರಿ ಕಟ್ಟುವ ಜಾಗಕ್ಕೆ ಕರೆತರಲಾಯಿತು. ಬಳಿಕ ಅರ್ಚಕ ಪ್ರಹ್ಲಾದ್‌ ರಾವ್‌ ಅವರು ಅಭಿ ಮನ್ಯು ನೇತೃತ್ವದ ಗಜಪಡೆ ಹಾಗೂ ಮರದ ಅಂಬಾರಿಗೆ ಪೂಜೆ ನೆರವೇರಿಸಿದರು. ಮೊದಲಿಗೆ ಎಲ್ಲಾ ಆನೆಗಳಿಗೂ ತೀರ್ಥ ಪ್ರೋಕ್ಷಣೆ ಮಾಡಿದ ಅವರು, ಹೂ ಮುಡಿಸಿ, ಅರಿಶಿನಿ, ಕುಂಕುಮ ಮತ್ತು ಗಂಧದ ಲೇಪ ನ ಹಚ್ಚಿ, 4.40ರಿಂದ 5ಗಂಟೆಯವರೆಗೆ ಪೂಜೆ ಸಲ್ಲಿಸಿ ದರು. ಬಳಿಕ ಎಲ್ಲಾ ಆನೆಗಳಿಗೂ ಪಂಚಫ‌ಲ, ಕಬ್ಬು, ಬೆಲ್ಲ ನೀಡಲಾಯಿತು.

ನಂತರ ಅಂಬಾರಿ ಕಟ್ಟುವ ಸ್ಟಾಂಡ್‌ ಬಳಿ ಬಂದ ಅಭಿಮನ್ಯವಿಗೆ 5.15ರಿಂದ 5.40ರವರೆಗೆ ಅಂಬಾರಿ ಕಟ್ಟುವ ಕಾರ್ಯ ನಡೆಯಿತು. ಮರದ ಅಂಬಾರಿಯನ್ನು ಹೊತ್ತ ಅಭಿಮನ್ಯು ರಾಜವಂಶಸ್ಥರ ಖಾಸಗಿ ಅಮರನೆ ಎದುರು ನಿಂತು ನಮಿಸಿ, ಬಳಿಕ ತಾಲೀಮು ಆರಂಭಿಸಿದ. ಹಿರಣ್ಯಾ ಮತ್ತು ಲಕ್ಷ್ಮೀಯೊಂದಿಗೆ 280 ಕೆ.ಜಿ. ತೂಕದ ಮರದ ಅಂಬಾರಿ ಹಾಗೂ ಗಾದಿ, ನಮª ಮತ್ತು ಮರಳಿನ ಮೂಟೆ ಸೇರಿ 750 ಕೆ.ಜಿ. ಭಾರ ಹೊತ್ತು ಅರಮನೆಯಿಂದ ಬನ್ನಿ ಮಂಟಪದವರೆಗೆ ಸಾಗಿದ. ಬಳಿಕ ಅಲ್ಲಿಂದ ವಾಪಾಸ್‌ ಅರಮನೆಗೆ ಯಾವ ಆಯಾಸವಿಲ್ಲದೇ ತಾಲೀಮು ನಡೆಸಿ ಯಶಸ್ವಿಯಾದ.

ಉಳಿದ ಆನೆಗಳಿಗೂ ತಾಲೀಮು: ಅಭಿಮನ್ಯು ನಂತರ ಮಹೇಂದ್ರ, ಭೀಮ, ಧನಂಜಯ, ಗೋಪಿ, ಸುಗ್ರೀವ ಆನೆಗಳಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಹಿಂದೆ ಧನಂಜಯ, ಭೀಮ ಹಾಗೂ ಮಹೇಂದ್ರ ಆನೆಗಳು ಅರಮನೆಯಿಂದ ಬನ್ನಿಮಂಟ ಪದವರೆಗೆ ಯಶಸ್ವಿಯಾಗಿ ಮರದ ಅಂಬಾರಿ ಹೊತ್ತಿವೆ. ಮರದ ಅಂಬಾರಿ ಮತ್ತು ಗಜಪಡೆಯ ಪೂಜಾ ಕಾರ್ಯಕ್ರಮದಲ್ಲಿ ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ, ಎಸಿಪಿ ಚಂದ್ರಶೇಖರ್‌, ವೈದ್ಯ ಮುಜೀಬ್‌, ಆರ್‌ಎಫ್ಒ ಸಂತೋಷ್‌ ಸೇರಿದಂತೆ ಇತರರು ಇದ್ದರು.

ಗಜಪಡೆಗೆ ಮರದ ಅಂಬಾರಿ ಹೊರುವ ತಾಲೀಮನ್ನು ಆರಂಭಿಸಲಾಗಿದ್ದು, ಮೊದಲ ದಿನ ಅಭಿಮನ್ಯವಿಗೆ ನಡೆಸಲಾಗುತ್ತಿದೆ. 280 ಕೆ.ಜಿ. ತೂಕದ ಮರದ ಅಂಬಾರಿಯೊಂದಿಗೆ ಮರಳು ಮೂಟೆ, ಗಾದಿ ಮತ್ತು ನಮª ಸೇರಿ 750 ಕೆಜಿಯ ಭಾರ ಹೊರುವ ತಾಲೀಮು ಇದಾಗಿದೆ. ಹಂತ ಹಂತವಾಗಿ ಎಲ್ಲಾ ಆನೆಗಳಿಗೂ ಈ ತಾಲೀಮು ಇರಲಿದೆ. -ಡಾ.ಐ.ಬಿ. ಪ್ರಭುಗೌಡ, ಡಿಸಿಎಫ್

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.