Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ನಗರದಲ್ಲಿದೆ 15 ವರ್ಷ ಹಳೆಯ ಒಂದೇ ಜೆಟ್ಟಿಂಗ್‌ ಯಂತ್ರ; ದುರ್ವಾಸನೆಯಿಂದ ಜನರು ಹೈರಾಣ, ರೋಗ ಭೀತಿ

Team Udayavani, Sep 19, 2024, 3:04 PM IST

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಉಡುಪಿ: ನಗರಸಭೆ ವ್ಯಾಪ್ತಿ ಕೆಲವು ಕಡೆಗಳಲ್ಲಿ ಡ್ರೈನೇಜ್‌ ಚೇಂಬರ್‌ ಅವ್ಯವಸ್ಥೆಯಾದರೆ ಶೀಘ್ರ ಪರಿಹಾರ ದೊರೆಯುವುದಿಲ್ಲ. ಚರಂಡಿ ಬ್ಲಾಕ್‌ ಆಗಿ ದಿನಗಟ್ಟಲೇ ರಸ್ತೆಗಳ ಮೇಲೆ ನೀರು ಹರಿಯುತ್ತ ದುರ್ವಾಸನೆಯಿಂದ ಕೂಡಿರುತ್ತದೆ.

ನಗರದ ನಿಟ್ಟೂರು ವಾರ್ಡ್‌ನಲ್ಲಿ ದುಗ್ಗಣಬೆಟ್ಟು ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಇನ್ನೊಂದೆದೆ ಡ್ರೈನೇಜ್‌ ಚೇಂಬರ್‌ ಅವ್ಯವಸ್ಥೆಯಿಂದಾ‌ಗಿ ಕೊಳಚೆ ನೀರು ಹೊರಬರುವ ಮೂಲಕ ಪರಿಸರ ದುರ್ವಾಸನೆಯಿಂದ ಕೂಡಿದೆ ಎಂದು ಸಾರ್ವಜನಿಕರು ಆರೋಪವಾಗಿದೆ. ಇಲ್ಲಿನ ಡ್ರೈನೈಜ್‌ ಚೇಂಬರ್‌ನಿಂದ ಹೊರಬರುವ ಕೊಳಚೆ ನೀರು ರಸ್ತೆಯ ಉದ್ದಕ್ಕೂ ಹರಿಯುತ್ತಿದೆ. ಸ್ಥಳೀಯರು ಮೂಗು ಮುಚ್ಚಿಕೊಂಡು ಅನಾರೋಗ್ಯ ಭೀತಿಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇಲ್ಲಿ ಓಡಾಡುವ ಸ್ಥಳೀಯರು ಮಾಸ್ಕ್ ಧರಿಸಿಯೇ ಆಚೀಚೆ ಹೋಗುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪರಿಸರವು ಆರೋಗ್ಯಕ್ಕೆ ಮಾರಕವಾದ ಸೊಳ್ಳೆಗಳ ಉತ್ಪತ್ತಿಸುವ ಕಾರ್ಖಾನೆಯಂತಾಗಿದೆ. ಜನರಿಗೆ ಡೆಂಗ್ಯೊ, ಮಲೇರಿಯಾ ಜ್ವರಬಾಧೆಗಳ ಭೀತಿ ಎದುರಿಸುತ್ತಿದ್ದಾರೆ.

ಪರಿಸರದಲ್ಲಿ ಹರಡಿರುವ ವಾಕರಿಕೆ ತರಿಸುವ ಅಸಹ್ಯ ವಾಸನೆಯಿಂದಾಗಿ, ಆಹಾರವನ್ನೂ ಸೇವಿಸಲಾಗದ ಸ್ಥಿತಿಯಲ್ಲಿ ಸ್ಥಳೀಯರಿದ್ದಾರೆ ಎಂದು ಇಲ್ಲಿನ ನಾಗರಿಕರು ದೂರು ತೋಡಿಕೊಂಡಿದ್ದಾರೆ. ನಗರಸಭೆ ಬಳಿ ಅತ್ಯಾಧುನಿಕ ಜೆಟ್ಟಿಂಗ್‌ ಯಂತ್ರ ಸೌಕರ್ಯವಿದ್ದಿದ್ದರೆ ಈ ಸಮಸ್ಯೆಗೆ ಶೀಘ್ರ ಪರಿಹಾರ ಸಿಗುತ್ತಿತ್ತು ಎಂದು ನಗರಸಭೆ ಸದಸ್ಯರು ತಿಳಿಸಿದ್ದಾರೆ.

ಜನಪ್ರತಿನಿಧಿಗಳು, ಅಧಿಕಾರಿಗಳು ಸಮಸ್ಯೆ ಬಗ್ಗೆ ಶೀಘ್ರ ಸ್ಪಂದಿಸಿ ಪರಿಹಾರ ನೀಡುವಂತೆ ನಗರಸಭೆ ಆಡಳಿತವನ್ನು ಒತ್ತಾಯಿಸಿದ್ದಾರೆ. ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಪೂರ್ಣಪ್ರಮಾಣದಲ್ಲಿ ವ್ಯವಸ್ಥಿತವಾಗಿ ನಡೆಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಎಂಬುದು ನಾಗರಿಕರ ಸಲಹೆಯಾಗಿದೆ.

ಶೀಘ್ರ ದುರಸ್ತಿಗೆ ಕ್ರಮ
ದುಗ್ಗಣಬೆಟ್ಟು ಮುಖ್ಯ ರಸ್ತೆ, ಒಳ ಚರಂಡಿ ವ್ಯವಸ್ಥೆ ಅಭಿವೃದ್ಧಿ ಕಾಮಗಾರಿ ಅನುದಾನ ಮೀಸಲಿರಿಸಿ ಹಂತಹಂತವಾಗಿ ಕಾಮಗಾರಿ ನಡೆಯುತ್ತಿದೆ. ಯುಜಿಡಿ ಮುಖ್ಯಪೈಪ್‌ ಲೈನ್‌ 22 ಆಳದಲ್ಲಿದ್ದು, 7 ಚೇಂಬರ್‌ ಹೊಂದಿದೆ. ಜತೆಗೆ ಹಳೆಯ ಪೈಪ್‌ಲೈನ್‌ ಸಂಪರ್ಕವು ಇರುವುದರಿಂದ ಕೆಲವೆಡೆ ಬ್ಲಾಕ್‌ ಆಗಿ ಚೇಂಬರ್‌ನಿಂದ ಕೊಳಚೆ ನೀರು ಹೊರಬರುತ್ತಿದ್ದು, ಇದನ್ನು ಶೀಘ್ರ ಸರಿಪಡಿಸುವ ಬಗ್ಗೆ ಕ್ರಮ ವಹಿಸಿದ್ದೇವೆ. ರಸ್ತೆಯ ನಿರ್ಮಾಣಕ್ಕೂ ಅನುದಾನವಿದ್ದು, ಯುಜಿಡಿ ವ್ಯವಸ್ಥೆ ಸಮರ್ಪಕವಾದ ಬಳಿಕ ಉತ್ತಮ ರಸ್ತೆ ನಿರ್ಮಿಸಲಾಗುತ್ತದೆ.
– ಸಂತೋಷ್‌ ಜತ್ತನ್ನ, ನಗರಸಭೆ ಸದಸ್ಯರು

ಬರಲಿದೆ ಅತ್ಯಾಧುನಿಕ ಜೆಟ್ಟಿಂಗ್‌ ಯಂತ್ರ
ಮ್ಯಾನ್‌ಹೋಲ್‌ ಬ್ಲಾಕ್‌ ಸರಿಪಡಿಸಲು ಅತ್ಯಾಧುನಿಕ ಜೆಟ್ಟಿಂಗ್‌ ಯಂತ್ರ ಅವಶ್ಯವಾಗಿದೆ. ಸದ್ಯ ನಮ್ಮ ಬಳಿ ಇರುವುದು 15 ವರ್ಷ ಹಳೆ ಯಂತ್ರವಾಗಿದ್ದು, ಹೊಸ ಯಂತ್ರ ಖರೀದಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಶೌಚಾಲಯ ಪಿಟ್‌ನಲ್ಲಿ ತ್ಯಾಜ್ಯ ಎಸೆಯುವುದು ಮ್ಯಾನ್‌ಹೋಲ್‌ ಬ್ಲಾಕ್‌ ಆಗಲು ಪ್ರಮುಖ ಕಾರಣವಾಗಿದೆ, ಸ್ಯಾನಿಟರಿ ಪ್ಯಾಡ್ಸ್‌, ಹಳೆಚಪ್ಪಲಿ, ಬಟ್ಟೆ ಯುಜಿಡಿ ಪೈಪ್‌ನಲ್ಲಿ ಸಿಲುಕಿ ಬ್ಲಾಕ್‌ ಆಗುತ್ತಿದೆ. ತ್ಯಾಜ್ಯವನ್ನು ಶೌಚಫಿಟ್‌ನಲ್ಲಿ ಎಸೆಯದಂತೆ ಅರಿವು ಹೊಂದಿರಬೇಕು. – ಸ್ನೇಹಾ, ಪರಿಸರ ಎಂಜಿನಿಯರ್‌, ಉಡುಪಿ ನಗರಸಭೆ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.