Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ನಗರದಲ್ಲಿದೆ 15 ವರ್ಷ ಹಳೆಯ ಒಂದೇ ಜೆಟ್ಟಿಂಗ್‌ ಯಂತ್ರ; ದುರ್ವಾಸನೆಯಿಂದ ಜನರು ಹೈರಾಣ, ರೋಗ ಭೀತಿ

Team Udayavani, Sep 19, 2024, 3:04 PM IST

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಉಡುಪಿ: ನಗರಸಭೆ ವ್ಯಾಪ್ತಿ ಕೆಲವು ಕಡೆಗಳಲ್ಲಿ ಡ್ರೈನೇಜ್‌ ಚೇಂಬರ್‌ ಅವ್ಯವಸ್ಥೆಯಾದರೆ ಶೀಘ್ರ ಪರಿಹಾರ ದೊರೆಯುವುದಿಲ್ಲ. ಚರಂಡಿ ಬ್ಲಾಕ್‌ ಆಗಿ ದಿನಗಟ್ಟಲೇ ರಸ್ತೆಗಳ ಮೇಲೆ ನೀರು ಹರಿಯುತ್ತ ದುರ್ವಾಸನೆಯಿಂದ ಕೂಡಿರುತ್ತದೆ.

ನಗರದ ನಿಟ್ಟೂರು ವಾರ್ಡ್‌ನಲ್ಲಿ ದುಗ್ಗಣಬೆಟ್ಟು ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಇನ್ನೊಂದೆದೆ ಡ್ರೈನೇಜ್‌ ಚೇಂಬರ್‌ ಅವ್ಯವಸ್ಥೆಯಿಂದಾ‌ಗಿ ಕೊಳಚೆ ನೀರು ಹೊರಬರುವ ಮೂಲಕ ಪರಿಸರ ದುರ್ವಾಸನೆಯಿಂದ ಕೂಡಿದೆ ಎಂದು ಸಾರ್ವಜನಿಕರು ಆರೋಪವಾಗಿದೆ. ಇಲ್ಲಿನ ಡ್ರೈನೈಜ್‌ ಚೇಂಬರ್‌ನಿಂದ ಹೊರಬರುವ ಕೊಳಚೆ ನೀರು ರಸ್ತೆಯ ಉದ್ದಕ್ಕೂ ಹರಿಯುತ್ತಿದೆ. ಸ್ಥಳೀಯರು ಮೂಗು ಮುಚ್ಚಿಕೊಂಡು ಅನಾರೋಗ್ಯ ಭೀತಿಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇಲ್ಲಿ ಓಡಾಡುವ ಸ್ಥಳೀಯರು ಮಾಸ್ಕ್ ಧರಿಸಿಯೇ ಆಚೀಚೆ ಹೋಗುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪರಿಸರವು ಆರೋಗ್ಯಕ್ಕೆ ಮಾರಕವಾದ ಸೊಳ್ಳೆಗಳ ಉತ್ಪತ್ತಿಸುವ ಕಾರ್ಖಾನೆಯಂತಾಗಿದೆ. ಜನರಿಗೆ ಡೆಂಗ್ಯೊ, ಮಲೇರಿಯಾ ಜ್ವರಬಾಧೆಗಳ ಭೀತಿ ಎದುರಿಸುತ್ತಿದ್ದಾರೆ.

ಪರಿಸರದಲ್ಲಿ ಹರಡಿರುವ ವಾಕರಿಕೆ ತರಿಸುವ ಅಸಹ್ಯ ವಾಸನೆಯಿಂದಾಗಿ, ಆಹಾರವನ್ನೂ ಸೇವಿಸಲಾಗದ ಸ್ಥಿತಿಯಲ್ಲಿ ಸ್ಥಳೀಯರಿದ್ದಾರೆ ಎಂದು ಇಲ್ಲಿನ ನಾಗರಿಕರು ದೂರು ತೋಡಿಕೊಂಡಿದ್ದಾರೆ. ನಗರಸಭೆ ಬಳಿ ಅತ್ಯಾಧುನಿಕ ಜೆಟ್ಟಿಂಗ್‌ ಯಂತ್ರ ಸೌಕರ್ಯವಿದ್ದಿದ್ದರೆ ಈ ಸಮಸ್ಯೆಗೆ ಶೀಘ್ರ ಪರಿಹಾರ ಸಿಗುತ್ತಿತ್ತು ಎಂದು ನಗರಸಭೆ ಸದಸ್ಯರು ತಿಳಿಸಿದ್ದಾರೆ.

ಜನಪ್ರತಿನಿಧಿಗಳು, ಅಧಿಕಾರಿಗಳು ಸಮಸ್ಯೆ ಬಗ್ಗೆ ಶೀಘ್ರ ಸ್ಪಂದಿಸಿ ಪರಿಹಾರ ನೀಡುವಂತೆ ನಗರಸಭೆ ಆಡಳಿತವನ್ನು ಒತ್ತಾಯಿಸಿದ್ದಾರೆ. ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಪೂರ್ಣಪ್ರಮಾಣದಲ್ಲಿ ವ್ಯವಸ್ಥಿತವಾಗಿ ನಡೆಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಎಂಬುದು ನಾಗರಿಕರ ಸಲಹೆಯಾಗಿದೆ.

ಶೀಘ್ರ ದುರಸ್ತಿಗೆ ಕ್ರಮ
ದುಗ್ಗಣಬೆಟ್ಟು ಮುಖ್ಯ ರಸ್ತೆ, ಒಳ ಚರಂಡಿ ವ್ಯವಸ್ಥೆ ಅಭಿವೃದ್ಧಿ ಕಾಮಗಾರಿ ಅನುದಾನ ಮೀಸಲಿರಿಸಿ ಹಂತಹಂತವಾಗಿ ಕಾಮಗಾರಿ ನಡೆಯುತ್ತಿದೆ. ಯುಜಿಡಿ ಮುಖ್ಯಪೈಪ್‌ ಲೈನ್‌ 22 ಆಳದಲ್ಲಿದ್ದು, 7 ಚೇಂಬರ್‌ ಹೊಂದಿದೆ. ಜತೆಗೆ ಹಳೆಯ ಪೈಪ್‌ಲೈನ್‌ ಸಂಪರ್ಕವು ಇರುವುದರಿಂದ ಕೆಲವೆಡೆ ಬ್ಲಾಕ್‌ ಆಗಿ ಚೇಂಬರ್‌ನಿಂದ ಕೊಳಚೆ ನೀರು ಹೊರಬರುತ್ತಿದ್ದು, ಇದನ್ನು ಶೀಘ್ರ ಸರಿಪಡಿಸುವ ಬಗ್ಗೆ ಕ್ರಮ ವಹಿಸಿದ್ದೇವೆ. ರಸ್ತೆಯ ನಿರ್ಮಾಣಕ್ಕೂ ಅನುದಾನವಿದ್ದು, ಯುಜಿಡಿ ವ್ಯವಸ್ಥೆ ಸಮರ್ಪಕವಾದ ಬಳಿಕ ಉತ್ತಮ ರಸ್ತೆ ನಿರ್ಮಿಸಲಾಗುತ್ತದೆ.
– ಸಂತೋಷ್‌ ಜತ್ತನ್ನ, ನಗರಸಭೆ ಸದಸ್ಯರು

ಬರಲಿದೆ ಅತ್ಯಾಧುನಿಕ ಜೆಟ್ಟಿಂಗ್‌ ಯಂತ್ರ
ಮ್ಯಾನ್‌ಹೋಲ್‌ ಬ್ಲಾಕ್‌ ಸರಿಪಡಿಸಲು ಅತ್ಯಾಧುನಿಕ ಜೆಟ್ಟಿಂಗ್‌ ಯಂತ್ರ ಅವಶ್ಯವಾಗಿದೆ. ಸದ್ಯ ನಮ್ಮ ಬಳಿ ಇರುವುದು 15 ವರ್ಷ ಹಳೆ ಯಂತ್ರವಾಗಿದ್ದು, ಹೊಸ ಯಂತ್ರ ಖರೀದಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಶೌಚಾಲಯ ಪಿಟ್‌ನಲ್ಲಿ ತ್ಯಾಜ್ಯ ಎಸೆಯುವುದು ಮ್ಯಾನ್‌ಹೋಲ್‌ ಬ್ಲಾಕ್‌ ಆಗಲು ಪ್ರಮುಖ ಕಾರಣವಾಗಿದೆ, ಸ್ಯಾನಿಟರಿ ಪ್ಯಾಡ್ಸ್‌, ಹಳೆಚಪ್ಪಲಿ, ಬಟ್ಟೆ ಯುಜಿಡಿ ಪೈಪ್‌ನಲ್ಲಿ ಸಿಲುಕಿ ಬ್ಲಾಕ್‌ ಆಗುತ್ತಿದೆ. ತ್ಯಾಜ್ಯವನ್ನು ಶೌಚಫಿಟ್‌ನಲ್ಲಿ ಎಸೆಯದಂತೆ ಅರಿವು ಹೊಂದಿರಬೇಕು. – ಸ್ನೇಹಾ, ಪರಿಸರ ಎಂಜಿನಿಯರ್‌, ಉಡುಪಿ ನಗರಸಭೆ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.