INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ


Team Udayavani, Sep 19, 2024, 3:52 PM IST

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

ಚೆನ್ನೈ: ಒಂದು ತಿಂಗಳ ವಿರಾಮದ ಬಳಿಕ ಭಾರತೀಯ ಪುರುಷರ ಕ್ರಿಕೆಟ್‌ ತಂಡವು ಇದೀಗ ಮತ್ತೆ ದ್ವಿಪಕ್ಷೀಯ ಸರಣಿ ಆಡುತ್ತಿದೆ. ಪ್ರವಾಸಿ ಬಾಂಗ್ಲಾದೇಶ ವಿರುದ್ದದ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಚೆನ್ನೈನಲ್ಲಿ ಗುರುವಾರ (ಸೆ.19) ಆರಂಭವಾಗಿದೆ. ಎಂ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ ನಾಯಕ ನಜ್ಮುಲ್‌ ಹುಸೇನ್‌ ಶಾಂಟೋ ಅವರು ಮೊದಲು ಭಾರತವನ್ನು ಬ್ಯಾಟಿಂಗ್‌ ಗೆ ಆಹ್ವಾನಿಸಿದ್ದಾರೆ.

ಮೊದಲು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಆರಂಭದಲ್ಲಿಯೇ ಸತತ ವಿಕೆಟ್‌ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ 6 ರನ್‌ ಗಳಿಸಿದರೆ, ಶುಭಮನ್‌ ಗಿಲ್‌ 0, ವಿರಾಟ್‌ ಕೊಹ್ಲಿ 6 ರನ್‌ ಮಾಡಿ ಪೆವಿಲಿಯನ್‌ ಸೇರಿದರು. ಆದರೆ ಯಶಸ್ವಿ ಜೈಸ್ವಾಲ್‌, ರಿಷಭ್‌ ಪಂತ್‌ ಮತ್ತು ರವಿ ಅಶ್ವಿನ್‌ ತಂಡದವನ್ನು ಭಾರೀ ಕುಸಿತದಿಂದ ಪಾರು ಮಾಡಿದರು.

ಗಿಲ್ ಅವರು ಔಟಾದ ರೀತಿಯು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯನ್ನು ಹುಟ್ಟುಹಾಕಿತು. ಬಲಗೈ ಬ್ಯಾಟರ್‌ ಗಿಲ್‌ ಅವರು ಭಾರತೀಯ ಕ್ರಿಕೆಟ್‌ನ ಬಾಬರ್ ಆಜಮ್ ಎಂದು ಅಭಿಮಾನಿಗಳು ಟೀಕೆ ಮಾಡಿದ್ದಾರೆ.

ಲೆಗ್ ಸೈಡ್‌ನಿಂದ ಕೆಳಕ್ಕೆ ಬಂದ ಚೆಂಡನ್ನು ಗಿಲ್‌ ಎಡ್ಜ್‌ ಮಾಡಿದರು. ಈ ಚೆಂಡು ನೇರವಾಗಿ ವಿಕೆಟ್‌ ಕೀಪರ್‌ ಲಿಟ್ಟನ್‌ ದಾಸ್‌ ಗ್ಲೌಸ್‌ ಸೇರಿತು. ಎಂಟು ಎಸೆತ ಎದುರಿಸಿದ ಗಿಲ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಹೊರನಡೆದರು.

ಬಾಂಗ್ಲಾದ ವೇಗಿ ಹಸನ್‌ ಮೆಹಮೂದ್‌ ಆರಂಭದಲ್ಲಿ ಟೀಂ ಇಂಡಿಯಾ ಬ್ಯಾಟರ್‌ ಗಳನ್ನು ಕಾಡಿದರು. ಉರುಳಿದ ಮೊದಲ ನಾಲ್ಕು ವಿಕೆಟ್‌ ಗಳು ಹಸನ್‌ ಪಾಲಾಯಿತು.

ಪಾಕಿಸ್ತಾನದಲ್ಲಿ ಐತಿಹಾಸಿಕ 2-0 ಟೆಸ್ಟ್ ಸ್ವೀಪ್‌ನಿಂದ ಬಾಂಗ್ಲಾದೇಶ ಉತ್ಸಾಹದಲ್ಲಿದೆ. ಆದರೆ ಇದುವರೆಗೆ 13 ಪಂದ್ಯಗಳಲ್ಲಿ ಒಮ್ಮೆಯೂ ಭಾರತ ವಿರುದ್ದ ಗೆಲ್ಲಲಾಗಲಿಲ್ಲ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.