Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Team Udayavani, Sep 19, 2024, 3:51 PM IST
ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ತಂದೆ ಸಲೀಂ ಖಾನ್ (Salim Khan) ಅವರಿಗೆ ಬುರ್ಖಾಧಾರಿ ಮಹಿಳೆ ಹಾಗೂ ವ್ಯಕ್ತಿಯೊಬ್ಬನಿಂದ ಜೀವ ಬೆದರಿಕೆ ಬಂದಿರುವ ಘಟನೆ ನಡೆದಿರುವುದು ವರದಿಯಾಗಿದೆ.
ಇತ್ತೀಚೆಗಷ್ಟೇ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ಗೆ (Lawrence Bishnoi) ಅವರ ಸೂಚನೆಯ ಮೇರೆಗೆ ನಡೆದಿತ್ತು.
ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರು ಬೆಳಗ್ಗೆ ವಾಕಿಂಗ್ ಮಾಡುವ ವೇಳೆ ಅವರಿಗೆ ಬೆದರಿಕೆ ಬಂದಿದೆ. ಸ್ಕೂಟರ್ನಲ್ಲಿ ಬಂದ ವ್ಯಕ್ತಿ ಹಾಗೂ ಬುರ್ಖಾಧಾರಿ ಮಹಿಳೆ ವಾಕಿಂಗ್ ಮಾಡಿ ಬೆಂಚ್ ನಲ್ಲಿ ಕೂತಿದ್ದ ಸಲೀಂ ಖಾನ್ ಅವರ ಬಳಿ ಬಂದು “ಲಾರೆನ್ಸ್ ಬಿಷ್ಣೋಯ್ ಅವರನ್ನು ಕರೆಯಬೇಕಾ” ಎಂದು ಬೆದರಿಕೆ ಹಾಕಿ ಪರಾರಿ ಆಗಿದ್ದಾರೆ.
ಬಾಂದ್ರಾದ ವಿಂಡ್ಮೇರ್ ಕಟ್ಟಡದ ಬಳಿ ಈ ಘಟನೆ ಸಂಭವಿಸಿದ್ದು, ಸಲೀಂ ಖಾನ್ ಅವರ ಬಾಡಿಗಾರ್ಡ್ ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದ್ದು, ದೂರು ನೀಡಿದ ಬಳಿಕ ಬಳಿಕ ಬಾಂದ್ರಾ ಪೊಲೀಸರು ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ.
ಈ ಸಂಬಂಧ ಪೊಲೀಸರು ಸ್ಕೂಟರ್ನಲ್ಲಿದ್ದ ಮಹಿಳೆ ಹಾಗೂ ವ್ಯಕ್ತಿಯನ್ನು ಮೊದಲಿಗೆ ವಶಕ್ಕೆ ಪಡೆದು ಆ ಬಳಿಕ ಬಂಧಿಸಿದ್ದಾರೆ. ಈ ಕೃತ್ಯವನ್ನು ತಮಾಷೆಗೆ ಮಾಡಲು ಹೋಗಿದ್ದಾರೆ. ಸಲೀಂ ಖಾನ್ ಅವರಿಗೆ ಜೋಡಿ ಪ್ರಾಂಕ್ ಮಾಡಲು ಹೋಗಿದೆ. ಇವರಿಗೆ ಯಾವುದೇ ಪೂರ್ವ ಕ್ರಿಮಿನಲ್ ದಾಖಲೆಗಳಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಈ ಹಿಂದೆಯೂ ಸಲ್ಮಾನ್ ತಂದೆಗೆ ಜೀವ ಬೆದರಿಕೆವುಳ್ಳ ಪತ್ರವೊಂದು ಬಂದಿತ್ತು.
ಲಾರೆನ್ಸ್ ಈ ಹಿಂದೆ ಸಲ್ಮಾನ್ ಖಾನ್ ಅವರಿಗೆ ಅನೇಕ ಸಲಿ ಬೆದರಿಕೆ ಹಾಕಿದ್ದಾರೆ. ಇತ್ತೀಚೆಗೆ ಅವರ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಬಳಿಕ ಸಲ್ಮಾನ್ ಖಾನ್ ಅವರಿಗೆ ಮುಂಬೈ ಪೊಲೀಸರು ವೈ+ ಭದ್ರತೆಯನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.