BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್


Team Udayavani, Sep 19, 2024, 5:59 PM IST

BBK11: ಚೈತ್ರಾ ಕುಂದಾಪುರ To ಕೆಜಿಎಫ್‌ ಬಾಬು.. ಬಿಗ್‌ ಬಾಸ್‌ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ (Bigg Boss Kannada-11) ಕಾರ್ಯಕ್ರಮ ಆರಂಭದ ಅಧಿಕೃತ ಮಾಹಿತಿ ಹೊರಬಿದ್ದ ಬಳಿಕ ಸ್ಪರ್ಧಿಗಳು ಯಾರೆಲ್ಲ ಎನ್ನುವುದರ ಪಟ್ಟಿ ಎಲ್ಲೆಡೆ ಹರಿದಾಡುತ್ತಿದೆ. ಇದೀಗ ಮತ್ತೊಂದು ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಹೊರಬಿದ್ದಿದೆ.

ಕಿಚ್ಚ ಸುದೀಪ್ (Kiccha sudeep) ಮತ್ತೆ ಬಿಗ್‌ ಬಾಸ್‌ ಶೋ ನಡೆಸಿಕೊಡಲಿದ್ದಾರೆ.  ”10 ವರ್ಷದಿಂದ ಒಂದು ಲೆಕ್ಕ, ಈಗಿನಿಂದ ಬೇರೇನೇ ಲೆಕ್ಕ ಇದು ಹೊಸ ಅಧ್ಯಾಯ” ಎಂದು ಹೇಳಿ ಬಿಗ್‌ ಬಾಸ್‌ ಆರಂಭದ ದಿನಾಂಕವನ್ನು ಕಿಚ್ಚ ರಿವೀಲ್‌ ಮಾಡಿದ್ದಾರೆ.

ಇತ್ತೀಚೆಗೆ ಪ್ರೋಮೊ ರಿಲೀಸ್‌ ಮಾಡಿದ ಬಳಿಕ ಪ್ರೋಮೊ ಮೇಕಿಂಗ್‌ ವಿಡಿಯೋವನ್ನು ಕಲರ್ಸ್‌ ಕನ್ನಡ ರಿಲೀಸ್‌ ಮಾಡಿದೆ. ಸಂಭಾವ್ಯ ಸ್ಪರ್ಧಿಗಳ ಹೊಸ ಪಟ್ಟಿ ಹೊರಬಿದ್ದಿದ್ದು, ಇದರಲ್ಲಿ ಹಲವು ಅಚ್ಚರಿಯ ಹೆಸರುಗಳಿವೆ..

ಚೈತ್ರಾ ಕುಂದಾಪುರ: ಹಿಂದೂ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತಿಯಾಗಿದ್ದ ಕುಂದಾಪುರ ಮೂಲದ ಚೈತ್ರಾ ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ಅವಿನಾಶ್ (ಜೂನಿಯರ್ ದರ್ಶನ್): ಜೂನಿಯರ್‌ ದರ್ಶನ್‌ ಎಂದೇ ಸೋಶಿಯಲ್‌ ಮೀಡಿಯಾದಲ್ಲಿ ಫೇಮ್‌ ಆಗಿರುವ ಅವಿನಾಶ್‌ ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಆಗುತ್ತಾರೆ ಎನ್ನಲಾಗುತ್ತಿದೆ.

ಪವಿ ಪಡುಕೋಣೆ: ಫಿಟ್ನೆಸ್ ಮಾಡಲ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಖ್ಯಾತರಾಗಿರುವ ಗ್ಲಾಮರ್‌ ಬೆಡಗಿ ಪವಿ ಪಡುಕೋಣೆ ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಪಡೆಯುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

ಇಂಟರ್‌ ನೆಟ್‌ ನಲ್ಲಿ ಫಿಟ್ನೆಸ್‌ ಜತೆ ತನ್ನ ಹಾಟ್‌ ಫೋಟೋಗಳಿಂದಲೂ ಅವರು ಸದಾ ಟ್ರೆಂಡ್ ನಲ್ಲಿರುತ್ತಾರೆ.

ಕರಣ್‌ ಕೆಆರ್:‌  ಕಳೆದ ಕೆಲ ವರ್ಷಗಳಿಂದ ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಿರುತೆರೆ  ನಟ ಕರಣ್‌ ಬಿಗ್‌ ಬಾಸ್‌ ಹೋಗುತ್ತಾರೆ ಎನ್ನಲಾಗುತ್ತಿದೆ. ʼಅಮೃತಾಧಾರೆʼ ಧಾರಾವಾಹಿಯಿಂದ ಅವರು ಜನಮನದ ಪ್ರೀತಿಯನ್ನು ಗಳಿಸಿದ್ದಾರೆ.

ಅನುಷಾ ರೈ: ನಟಿಯಾಗಿ ಸ್ಯಾಂಡಲ್ ವುಡ್‌‌ ನಲ್ಲಿ ಗುರುತಿಸಿಕೊಂಡಿರುವ ಅನುಷಾ ರೈ ಅವರ ಹೆಸರು ಕೂಡ ಬಿಗ್‌ ಬಾಸ್‌ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ. ʼಖಡಕ್ʼ, ʼಅಬ್ಬಬ್ಬʼ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಕೆಜಿಎಫ್‌ ಬಾಬು:  ಶ್ರೀಮಂತ ಕುಳ, ಉದ್ಯಮಿ ಹಾಗೂ ರಾಜಕಾರಣಿ ಕೆಜಿಎಫ್ ಬಾಬು ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಬರುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇವರೂ ಹೋಗಬಹುದು… ಇವರಿಷ್ಟು ಮಾತ್ರವಲ್ಲದೆ ಈ ಪಟ್ಟಿಯಲ್ಲಿ ಇನ್ನು ಹಲವರು ಹೆಸರು ಕೇಳಿ ಬರುತ್ತಿದೆ. ಹುಲಿ ಕಾರ್ತಿಕ್‌, ಗೌರವ್‌ ಶೆಟ್ಟಿ, ಮಾನಸ ಸಂತು, ನಟಿ ಪ್ರೇಮಾ, ಹರೀಶ್ ನಾಗರಾಜ್, ಐಶ್ವರ್ಯಾ ರಂಗರಾಜನ್, ಅಮೂಲ್ಯ ಭಾರದ್ವಾಜ್, ಭವ್ಯಾ ಗೌಡ, ದೀಪಕ್‌ ಗೌಡ, ಅಕ್ಷಯ್‌ ನಾಯಕ್‌, ಲೇಖಿ ಗೋಸ್ವಾಮಿ, ರೇಷ್ಮಾ, ಚಂದ್ರಪ್ರಭ, ರಾಘವೇಂದ್ರ, ಜಾಹ್ನವಿ, ಶರ್ಮಿತಾ ಗೌಡ, ನಟ ತ್ರಿವಿಕ್ರಮ್, ನಟಿ ಸುಕೃತಾ ನಾಗ್, ನಟಿ ಗೌತಮಿ ಜಾಧವ್, ಶರತ್ ಕುಮಾರ್ ಹೆಸರು ಸಹ ಬಿಗ್‌ ಬಾಸ್‌ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.

ಇದೇ ಸೆ.29ರಿಂದ ಬಿಗ್‌ ಬಾಸ್‌ ಶೋ ಆರಂಭಗೊಳ್ಳಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಪಿಕ್ಸ್

BBK-11: ಕೊನೆಗೂ ಬಿಗ್‌ ಬಾಸ್‌ ಆ್ಯಂಕರ್ ಮುಖ ರಿವೀಲ್…‌ ಶೋ ಆರಂಭಕ್ಕೆ ಡೇಟ್‌ ಫಿಕ್ಸ್

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

Bigg Boss 18: ಬಿಗ್‌ಬಾಸ್‌ನಲ್ಲಿ ಭಾಗಿಯಾಗಲು ನಟನಿಗೆ 5 ಕೋಟಿ ಆಫರ್; ಯಾರೀತ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.