Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
Team Udayavani, Sep 19, 2024, 6:23 PM IST
ಚಿಕ್ಕಮಗಳೂರು: ಇತ್ತೀಚೆಗೆ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಶೃಂಗೇರಿ ಶಾರದಾ ಪೀಠದಲ್ಲಿ ಗುರುಗಳ ದರ್ಶನ, ಗುರುಗಳ ಪಾದ ಪೂಜೆ, ಗರ್ಭಗುಡಿ ಪ್ರವೇಶಿಸುವ ಭಕ್ತರು ಸಂಪ್ರದಾಯಿಕ ವಸ್ತ್ರವನ್ನು ತೊಟ್ಟು ಬರುವಂತೆ ಆಡಳಿತ ಮಂಡಳಿ ಆದೇಶಿಸಿದ ಬಳಿಕ ಜಿಲ್ಲೆಯ ಮತ್ತೊಂದು ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ ಆದಿಶಕ್ತತ್ಯಾತ್ಮಕ ಹೊರನಾಡು ಶ್ರೀ ಅನ್ನಪೂರ್ಣ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದೆ.
ಸಂಪ್ರದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಆಡಳಿತ ಮಂಡಳಿ ಹೇಳಿದೆ.
ಆಧುನಿಕ ಉಡುಪು ಧರಿಸಿ ದೇವಸ್ಥಾನಕ್ಕೆ ಭಕ್ತರು ಬರುವುದರಿಂದ ಇತರೆ ಭಕ್ತರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಜತೆಗೆ ಸಂಪ್ರದಾಯಿಕ ಉಡುಗೆ ಸಂಪ್ರದಾಯ ಕಣ್ಮರೆಯಾಗುತ್ತಿರುವುದರಿಂದ ದೇವಸ್ಥಾನ ಪ್ರವೇಶಕ್ಕೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲು ಮುಂದಾಗಿದೆ.
ಗಂಡಸರು ಮತ್ತು ಗಂಡು ಮಕ್ಕಳು ಶಲ್ಯ, ಪ್ಯಾಂಟ್, ಪಂಚೆ ಧರಿಸಿ ಬರಬೇಕು. ಹೆಂಗಸರು ಮತ್ತು ಹೆಣ್ಣು ಮಕ್ಕಳು ಸೀರೆ ಮತ್ತು ಚೂಡಿದಾರ್ ಗಳಂತಹ ಸಂಪ್ರದಾಯಿಕ ಉಡುಪು ಧರಿಸಿ ಬಂದರೆ ಮಾತ್ರ ದೇವಸ್ಥಾನ ಒಳಗೆ ಪ್ರವೇಶಿಸಲು ಶ್ರೀ ಕ್ಷೇತ್ರ ಹೊರನಾಡು ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.