Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್‌ ಕುಸಿದು ಬಿದ್ದು ಸಾ*ವು

ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಮಗು ಸಾವು: ಪಾಲಕರ ಆರೋಪ, ಶಿಕ್ಷಕರು ಹೇಳುವುದೇ ಬೇರೆ..!!

Team Udayavani, Sep 19, 2024, 5:56 PM IST

suicide (2)

ಶಹಾಪುರ: 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಗರದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಬುಧವಾರ ನಡೆದಿದೆ.

ತಾಲೂಕಿನ ಕರ್ಕಳ್ಳಿ ತಾಂಡಾದ ರಾಮುಲು ರಾಠೊಡ ಎಂಬುವರ ಪುತ್ರ ಚೇತನ್‌ ಮೃತಪಟ್ಟ ಬಾಲಕ. ನನ್ನ ಮಗನಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗದ ಕಾರಣ ಮಗ ಚೇತನ ಮೃತಪಟ್ಟಿದ್ದಾನೆ. ಶಾಲಾ ಮಂಡಳಿ ಅಥವಾ ಶಿಕ್ಷಕರ ನಿರ್ಲಕ್ಷ್ಯವೇ ಕಾರಣವೆಂದು ಪಾಲಕರು ಆರೋಪಿಸಿದ್ದಾರೆ. ಮಗ ಆರಾಮವಿಲ್ಲವೆಂದು ಬೇಡಿಕೊಂಡರೂ, ವಾಂತಿ ಆದರೂ ವಿದ್ಯಾರ್ಥಿಗೆ ಹಿಂದಿನ ಬೆಂಚ್‌ ಮೇಲೆ ಮಲಗಲು ಸೂಚಿಸಿದ್ದಾರೆ. ಮಗ ಮಲಗಿದ್ದಲೇ ಜೀವ ಬಿಟ್ಟಿದ್ದಾನೆ. ಇದು ಶಿಕ್ಷಕರ ಮತ್ತು ಆಡಳಿತ ಮಂಡಳಿ ನಿರ್ಲಕ್ಷವೇ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ. ಮೃತ ದೇಹವನ್ನೇ ಬೈಕ್‌ ಮೇಲೆ ಕೂಡಿಸಿಕೊಂಡು ಸರ್ಕಾರಿ ಆಸ್ಪತ್ರೆಗೆ ತಂದು ಹಾಕಿದ್ದಾರೆ ಎಂದು ಮೃತ ಚೇತನ್‌ ತಂದೆ ರಾಮುಲು ರಾಠೊಡ ಆರೋಪಿಸಿದ್ದಾರೆ.

ಶಿಕ್ಷಕರು ಹೇಳುವುದೇ ಬೇರೆ..
ಚೇತನ ಎರಡ್ಮೂರು ದಿನದಿಂದ ಶಾಲೆಗೆ ಬಂದಿರಲಿಲ್ಲ. ಪಾಲಕರನ್ನು ವಿಚಾರಿಸಲಾಗಿ ಆತನಿಗೆ ಜ್ವರ ಬಂದಿವೆ. ಆರಾಮ ಆದ ತಕ್ಷಣ ಕರೆದುಕೊಂಡು ಬರುತ್ತೇವೆಂದು ತಿಳಿಸಿದ್ದಾರೆ. ಇಂದು ಅವರ ಪಾಲಕರೇ ಶಾಲೆಗೆ ಬಂದು ಚೇತನನನ್ನು ಬಿಟ್ಟು ಹೋಗಿದ್ದಾರೆ. ಒಂದು ವಿಷಯದ ಸಮಯ ಆಗುತ್ತಿದ್ದಂತೆ ಬೆಂಚಿನ ಮೇಲೆ ಮಲಗಿದ್ದಾನೆ. ಅದನ್ನು ಕಂಡ ಶಿಕ್ಷಕರು ಪರೀಕ್ಷಿಸಿ ತಡ ಮಾಡದೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈತ ಏಕಾಏಕಿ ಮೃತಪಟ್ಟಿರೋದು ನಮಗೂ ಆಘಾತ ತಂದಿದೆ ಎಂದು ಶಾಲೆಯ ಮುಖ್ಯ ಗುರುಗಳು ಪತ್ರಿಕೆಗೆ ತಿಳಿಸಿದ್ದಾರೆ. ಈ ಕುರಿತು ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ.

ಸುಳ್ಳು ಹೇಳುತ್ತಿದ್ದಾರೆ
ಆಡಳಿತ ಮಂಡಳಿಯವರು ನನ್ನ ಮಗನಿಗೆ ಮೈಯಲ್ಲಿ ಹುಷಾರಿಲ್ಲವೆಂದು ಸುಳ್ಳು ಹೇಳುತ್ತಿದ್ದಾರೆ. ಮೈಯಲ್ಲಿ ಹುಷಾರಿಲ್ಲದಿದ್ದರೆ ನಾವು ಶಾಲೆಗೆ ಹೇಗೆ ಕಳಿಸುತ್ತೇವೆ. ನಮ್ಮ ಮಕ್ಕಳ ಬಗ್ಗೆ ನಮಗೆ ಕಾಳಜಿ ಇಲ್ಲವೇ? ಶಾಲೆಯವರ ನಿರ್ಲಕ್ಷ್ಯದಿಂದ ನನ್ನ ಮಗ ಸತ್ತಿದ್ದಾನೆ ಎಂದು ಮೃತ ಬಾಲಕನ ತಂದೆ ರಾಮುಲು ರಾಠೊಡ ಹೇಳಿದ್ದಾರೆ.

ಆಂಬ್ಯುಲೆನ್ಸ್‌ ನಲ್ಲಿ ಕರೆದುಕೊಂಡು ಹೋಗಬೇಕಿತ್ತು
ನಮ್ಮ ಅಣ್ಣನ ತರಗತಿ ಶಿಕ್ಷಕರ ಹತ್ತಿರ ಹೋಗಿ ನಮ್ಮಣ್ಣ ವಾಂತಿ ಮಾಡಿಕೊಳ್ಳುತ್ತಿದ್ದಾನೆ ಫೋನ್‌ ಕೊಡಿ ನಮ್ಮ ಅಪ್ಪ ಅಮ್ಮನಿಗೆ ಫೋನ್‌ ಮಾಡಬೇಕೆಂದು ಕೇಳಿದರೆ ಫೋನ್‌ ಕೊಡದೆ ಕ್ಲಾಸ್‌ ಸರ್‌ ಬೆದರಿಸಿ ಹಾಗೆಲ್ಲ ಕೊಡಕ್ಕಾಗಲ್ಲ ಎಚ್‌ಎಮ್‌ ಅವರ ಅನುಮತಿ ಬೇಕು ಎಂದು ಗದರಿಸಿ ಕಳುಹಿಸಿದ್ದಾರೆ. ತಕ್ಷಣ ನನ್ನ ಅಣ್ಣನನ್ನು ದವಾಖಾನೆಗೆ ಕರೆದುಕೊಂಡು ಹೋಗಿದ್ದರೆ ನಮ್ಮಣ್ಣ ಉಳಿಯುತ್ತಿದ್ದ. ನನ್ನ ಅಣ್ಣನನ್ನು ಶಾಲಾ ವಾಹನ ಅಥವಾ ಆಂಬ್ಯುಲೆನ್ಸ್‌ ನಲ್ಲಿ ಕರೆದುಕೊಂಡು ಹೋಗಬಹುದಾಗಿತ್ತು. ಹಾಗೆ ಮಾಡದೆ ಇಬ್ಬರು ಎತ್ತಿಕೊಂಡು ಬೈಕ್‌ ಮೇಲೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಲ್ಲಿಂದ ಸರ್ಕಾರಿ ದವಾಖಾನೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಮೃತ ವಿದ್ಯಾರ್ಥಿ ಚೇತನನ ತಂಗಿ ಪವಿತ್ರಾ ಮಾಧ್ಯಮದೆದುರು ತನ್ನ ಅಳಲು ತೋಡಿಕೊಂಡಳು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.