Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು
Team Udayavani, Sep 19, 2024, 6:40 PM IST
ಯಳಂದೂರು : ಚಿರತೆಯನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿನಿಂದ ನಾಲ್ವರು ರೈತರು ಗಾಯಗೊಂಡಿದ್ದಾರೆ.ಇದೇ ವೇಳೆ ಚಿರತೆಯೂ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆಡಿದೆ.
ತಾಲೂಕಿನ ಮದ್ದೂರು ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ಬಗ್ಗೆ ರೈತರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯನ್ನು ಓಡಿಸಲು ತಮ್ಮ ಬಂದೂಕಿನಿಂದ ಗುಂಡನ್ನು ಹಾರಿಸಿದ್ದಾರೆ. ಈ ನಾಲ್ವರಿಗೆ ಗುಂಡು ತಗುಲಿದ್ದು ನಾಲ್ಕು ಜನ ರೈತರು ಗಾಯಗೊಂಡಿದ್ದಾರೆ. ಅಲ್ಲದೆ ಅದಾಗಲೇ ಚಿರತೆಯೂ ಮೃತಪಟ್ಟಿದೆ. ಆದರೆ ಚಿರತೆ ಯಾವುದರಿಂದ ಮೃತಪಟ್ಟಿದೆ ಎಂಬುದು ಇನ್ನು ಖಚಿತವಾಗಿಲ್ಲ.
ಗಾಯಗೊಂಡ ವ್ಯಕ್ತಿಗಳನ್ನು ಇದೇ ಗ್ರಾಮದ ಶಿವು,ರವಿ, ರಂಗಸ್ವಾಮಿ ಹಾಗೂ ಮೂರ್ತಿ ಎಂದು ಗುರುತಿಸಲಾಗಿದೆ.
ಗಾಯಗೊಂಡ ಈ ನಾಲ್ಕು ರೈತರನ್ನು ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೆಗಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆಯು ಸಹಜವಾಗಿಯೇ ಮೃತಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
ಚಿರತೆಯ ಸಾವಿನ ಸುತ್ತ ಅನುಮಾನಗಳ ಹುತ್ತ: ಚಿರತೆಯು ಅರಣ್ಯ ಇಲಾಖೆಯವರು ಹಾರಿಸಿದ ಗುಂಡಿನಿಂದಲೇ ಮೃತಪಟ್ಟಿದೆ ಅಥವಾ ಅರಣ್ಯದ ಇಲಾಖೆಯವರು ತಮ್ಮ ಸ್ವರಕ್ಷಣೆಗಾಗಿ ಇದರ ಮೇಲೆ ಹಲ್ಲೆ ಮಾಡಿ ಮೃತಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ ಅರಣ್ಯ ಇಲಾಖೆಯವರು ಇದು ಸಹಜವಾಗಿಯೇ ಮೃತಪಟ್ಟಿದೆ ಎಂದು ಹೇಳುತ್ತಿದ್ದಾರೆ.
ಈ ಬಗ್ಗೆ ಅರಣ್ಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರ ಬಿದ್ದ ಮೇಲೆ ಸತ್ಯ ಬಯಲಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.