Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Team Udayavani, Sep 19, 2024, 6:47 PM IST
ದಾವಣಗೆರೆ: ಪಂಚ ಗ್ಯಾರಂಟಿ ಯೋಜನೆಗಳು ಮತ ಪಡೆಯುವುದಕ್ಕಾಗಿ ರೂಪಿಸಿರುವ ಕಾರ್ಯಕ್ರಮ ಎಂದು ರೈತಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrashekar) ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಮತ ಪಡೆಯುವುದಕ್ಕಾಗಿಯೇ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮ ರೂಪಿಸಲಾಗಿದೆ. ಅಂದ ಮಾತ್ರಕ್ಕೆ ನಾವು ಸಂಪೂರ್ಣವಾಗಿ ಗ್ಯಾರಂಟಿ ಯೋಜನೆಗಳ ವಿರೋಧ ಮಾಡುವುದಿಲ್ಲ ಎಂದರು.
ಪಕ್ಷಗಳು ಮತ ಪಡೆಯುವುದಕ್ಕಾಗಿ ಪುಕ್ಕಟೆ ಯೋಜನೆಗಳ ರೂಪಿಸುವ ಬದಲಿಗೆ ಬಡತನ ನಿರ್ಮೂಲನೆಯ ಜೊತೆಗೆ ಪ್ರತಿಯೊಬ್ಬರ ಪ್ರತಿ ದಿನದ ಆದಾಯ ವೃದ್ಧಿಸುವಂತಹ ಕಾರ್ಯಕ್ರಮ, ಯೋಜನೆಗಳ ಅನುಷ್ಟಾನಕ್ಕೆ ತರಬೇಕು. ಆದರೆ, ಅಂತಹ ಕೆಲಸ ಆಗುತ್ತಿಲ್ಲ. ಕೇಂದ್ರ ಸರ್ಕಾರ ತಲಾ ಆದಾಯ ಹೆಚ್ಚಾಗಿದೆ ಎಂದು ಹೇಳುತ್ತದೆ. ತಲಾ ಆದಾಯ ಹೆಚ್ಚಾಗಿದ್ದರೆ ರೂಪಾಯಿಯ ಮೌಲ್ಯ ದಿವಾಳಿ ಆಗಿದೆ ಎಂಬುದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅಧಿಕಾರ, ಕುರ್ಚಿಯ ಆಸೆಗಾಗಿ ಪುಕ್ಕಟೆ ಯೋಜನೆಗಳ ಬದಲಿಗೆ ಬಡತನ ನಿರ್ಮೂಲನೆ, ಆರ್ಥಿಕ ಶಕ್ತಿ ಅಭಿ ವೃದ್ಧಿಯ ಕಾರ್ಯಕ್ರಮ ಜಾರಿಗೊಳಿಸಬೇಕು. ಕೇಂದ್ರ ಸರ್ಕಾರ ಕನಿಷ್ಟ ಬೆಂಬಲ ಬೆಲೆ ಯೋಜನೆಗೆ ಕಾನೂನು ರೂಪ ನೀಡಿದಲ್ಲಿ ಯಾವುದೇ ರೈತರಿಗೆ ಸಹಾಯಧನ ನೀಡಬೇಕಾಗಿಲ್ಲ. ರೈತರು ಸರ್ಕಾರದಿಂದ ಭಿಕ್ಷೆ ಬೇಡುವುದೇ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.