Koteshwara: ಎಂಬಿಬಿಎಸ್ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ
Team Udayavani, Sep 19, 2024, 6:56 PM IST
ಕುಂದಾಪುರ: ಕೋಟೇಶ್ವರ ದೇವಸ್ಥಾನದ ಕೆರೆಗೆ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ.
ಹಂಗಳೂರಿನ ಗೌರೀಶ್ ಬಿ.ಆರ್. (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿದ್ದ ಅವರು ಎಂಎಸ್ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡುಬಂದಿತ್ತು. ಸಂಜೆ 5.30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಹಾರಿರಬೇಕು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ.
ಅಣ್ಣ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.