Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Team Udayavani, Sep 19, 2024, 7:23 PM IST
ಚೆನ್ನೈ: ಗ್ರಾಹಕರೊಬ್ಬರು ನಿಂದಿಸಿದ್ದಕ್ಕೆ ಮನನೊಂದು ಫುಡ್ ಡೆಲಿವರಿ ಮಾಡುವ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಬಿಕಾಂ ವಿದ್ಯಾರ್ಥಿಯಾಗಿದ್ದ ಪವಿತ್ರನ್ ಬಿಡುವಿನ ವೇಳೆ ಫುಡ್ ಡೆಲಿವರಿ ಮಾಡುವ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 11 ರಂದು ಕೊರಟ್ಟೂರು ಪ್ರದೇಶದಲ್ಲಿ ಫುಡ್ ಡೆಲಿವರಿ ಮಾಡಲು ಹೋಗಿದ್ದಾಗ ಕೆಲ ನಿಮಿಷ ತಡವಾಗಿತ್ತು. ತಡವಾದ ಕಾರಣದಿಂದ ಆಹಾರವನ್ನು ತೆಗೆದುಕೊಳ್ಳುವ ಗ್ರಾಹಕ ಪವಿತ್ರನ್ ಅವರಿಗೆ ನಿಂದಿಸಿ, ಬೈಯ್ದಿದ್ದಾರೆ.
ಇದನ್ನೂ ಓದಿ: BBK11: ಚೈತ್ರಾ ಕುಂದಾಪುರ To ಕೆಜಿಎಫ್ ಬಾಬು.. ಬಿಗ್ ಬಾಸ್ ಸ್ಪರ್ಧಿಗಳ ಹೊಸ ಪಟ್ಟಿ ವೈರಲ್
ಇದರಿಂದ ಮನನೊಂದು ಮನೆಗೆ ಬಂದಿದ್ದ ಪವಿತ್ರನ್ ಎರಡು ದಿನಗಳ ನಂತರ ನಿಂದಿಸಿದ್ದ ಗ್ರಾಹಕರ ನಿವಾಸದ ಮೇಲೆ ಕಲ್ಲು ಎಸೆದು, ಕಿಟಕಿಯನ್ನು ಒಡೆದು ಹಾಕಿದ್ದ. ಈ ಘಟನೆಯಿಂದಾಗಿ ಅವರು ಯುವಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
ಇದರಿಂದ ಮನನೊಂದಿದ್ದ ಪವಿತ್ರನ್ ಬುಧವಾರ (ಸೆ.18ರಂದು) ತನ್ನ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳದಲ್ಲಿ ಪತ್ರವೊಂದು ಸಿಕ್ಕಿದ್ದು, “ಫುಡ್ ಡೆಲಿವರಿ ಸಮಯದಲ್ಲಿ ವ್ಯಕ್ತಿಯಿಂದ ನಿಂದಿಸಲ್ಪಟ್ಟ ನಂತರ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಇಂತಹ ಮಹಿಳೆಯರು ಇರುವವರೆಗೆ ಹೆಚ್ಚಿನ ಸಾವುಗಳು ಸಂಭವಿಸುತ್ತವೆ” ಎಂದು ಬರೆದುಕೊಂಡಿದ್ದರು.
ಕೊಳತ್ತೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.