China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ


Team Udayavani, Sep 19, 2024, 11:49 PM IST

1-malavika

ಚಾಂಗ್‌ಝೂ (ಚೀನ): ಭಾರತದ ಉದಯೋನ್ಮುಖ ಶಟ್ಲರ್‌ ಮಾಳವಿಕಾ ಬನ್ಸೋಡ್‌ ಅವರು ಕಠಿನ ಹೋರಾಟದಲ್ಲಿ ತನಗಿಂತ ಉನ್ನತ ರ್‍ಯಾಂಕಿನ ಆಟಗಾರ್ತಿ ಕ್ರಿಸ್ಟಿ ಗಿಲ್ಮೋರ್‌ ಅವರನ್ನು ಮೂರು ಗೇಮ್‌ಗಳ ಹೋರಾಟದಲ್ಲಿ ಕೆಡಹಿ ಚೊಚ್ಚಲ ಬಾರಿ ಸೂಪರ್‌ 1000 ಚೀನ ಓಪನ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ್ದಾರೆ.

43ನೇ ರ್‍ಯಾಂಕಿನ ಮಾಳವಿಕಾ ಅವರು ಎರಡು ಬಾರಿಯ ಕಾಮನ್ವೆಲ್ತ್‌ ಗೇಮ್ಸ್‌ ಪದಕ ಗೆದ್ದಿರುವ ಸ್ಕಾಟ್ಲೆಂಡಿನ 25ನೇ ರ್‍ಯಾಂಕಿನ ಗಿಲ್ಮೋರ್‌ ಅವರನ್ನು 21-17, 19-21, 21-16 ಗೇಮ್‌ಗಳಿಂದ ಕೆಡಹಿ ಮುನ್ನಡೆದರು.
ಸೂಪರ್‌ 1000 ಕೂಟದ ಕ್ವಾರ್ಟರ್‌ಫೈನಲ್‌ನಲ್ಲಿ ನಾನು ಇದೆಇಈ ಮೊದಲ ಬಾರಿ ಆಡುತ್ತಿದ್ದೇನೆ. ಈ ಮೂಲಕ ನನ್ನ ಕನಸು ನನಸಾಗಿದೆ. ಇದು ಇಷ್ಟರವರೆಗೆ ನನ್ನ ಬಾಳ್ವೆಯ ಬಲುದೊಡ್ಡ ಸಾಧನೆ ಎಂದು ಪಂದ್ಯದ ಬಳಿಕ ಮಾಳವಿಕಾ ಹೇಳಿದರು.

ಕಣದಲ್ಲಿ ಉಳಿದಿರುವ ಭಾರತದ ಏಕೈಕ ಸ್ಪರ್ಧಿ ಯಾಗಿರುವ ಮಾಳವಿಕಾ ಕ್ವಾರ್ಟರ್‌ಫೈನಲ್‌ನಲ್ಲಿ ಎರಡು ಬಾರಿಯ ವಿಶ್ವ ಚಾಂಪಿಯನ್‌ ಮತ್ತು ನಾಲ್ಕನೇ ಶ್ರೇಯಾಂಕದ ಜಪಾನಿನ ಅಕಾನೆ ಯಮಗುಚಿ ಅವರ ಸವಾಲನ್ನು ಎದುರಿಸಬೇಕಾಗಿದೆ. ಮಾಳವಿಕಾ ವಿರುದ್ಧ ಈ ಹಿಂದೆ ನಡೆದ ಎರಡು ಮುಖಾಮುಖೀಯಲ್ಲಿ ಯಮಗುಚಿ ಗೆಲುವು ಸಾಧಿಸಿದ್ದಾರೆ. ಆದರೆ ಒಂದು ಹೋರಾಟದಲ್ಲಿ ಮಾಳವಿಕಾ ತೀವ್ರ ಹೋರಾಟ ಸಂಘಟಿಸಿ ಗೆಲುವಿನ ಹೊಸ್ತಿಲಲ್ಲಿ ಎಡವಿದ್ದರು. ಈ ಬಾರಿ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿ ಮಾಳವಿಕಾ ಇದ್ದಾರೆ.

ಒಳ್ಳೆಯ ಫ‌ಲಿತಾಂಶಕ್ಕಾಗಿ ಕಾಯುತ್ತೇನೆ. ನಾನೀಗ ಉತ್ತಮ ಫಾರ್ಮ್ನಲ್ಲಿದ್ದೇನೆ ಮತ್ತು ಕ್ವಾರ್ಟರ್‌ಫೈನಲ್‌ ಹೋರಾಟದಲ್ಲಿ ಶ್ರೇಷ್ಠ ನಿರ್ವಹಣೆ ನೀಡಿ ಗೆಲುವು ದಾಖಲಿ ಸಲು ಪ್ರಯತ್ನಿಸುತ್ತೇನೆ ಎಂದು ಮಾಳವಿಕಾ ಹೇಳಿದ್ದಾರೆ.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

1-sa

ODI;ಮೊದಲ ಬಾರಿಗೆ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಅಫ್ಘಾನಿಸ್ಥಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.