ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ


Team Udayavani, Sep 20, 2024, 8:53 AM IST

2-mudhola

ಮುಧೋಳ: ‌ಕಾಂಗ್ರಸ್ ಸರ್ಕಾರದ ಮಂತ್ರಿಯೊಬ್ಬರು ನನ್ನನ್ನು ಬೊಗಳುವ ನಾಯಿಯೆಂದು ನಾಯಿಗೆ ಹೋಲಿಕೆ‌ ಮಾಡುತ್ತಾರೆ. ಹೌದು ನಾನು ದೇಶದ ಕಾನೂನಿಗೆ ಗೌರವ ನೀಡುವ, ನಮ್ಮ ನೆಲದ ಕಾನೂನನ್ನು ಗೌರವಿಸುವ ನಿಯತ್ತಿನ‌ ನಾಯಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಶಾಸಕ ಬಸನಗೌಡ ಪಾಟೀಲಯತ್ನಾಳ  ಪರೋಕ್ಷವಾಗಿ ಕುಟುಕಿದರು.

ನಗರದಲ್ಲಿ ಸೆ.19ರ ಗುರುವಾರ ರಾತ್ರಿ‌ ನಡೆದ ಜನತಾ ರಾಜ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮದಲ್ಲಿ‌ ಮಾತನಾಡಿದ ಅವರು, ಇಂದಿನ‌ ಕಾಂಗ್ರೆಸ್ ಸರ್ಕಾರದ ಹಲವಾರು ಭ್ರಷ್ಟಾಚಾರದ ಕೃತ್ಯದಿಂದ ಅಧಿಕಾರಿಗಳು ಬೇಸತ್ತು ಹೋಗಿದ್ದಾರೆ. ಇನ್ನು 6 ತಿಂಗಳಲ್ಲಿ‌ ಸರ್ಕಾರ ಪತನಗೊಳ್ಳಲಿದ್ದು, ನಮ್ಮ ಆಡಳಿತಾವಧಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ದೇಶದ ಭದ್ರತೆಗೆ ಹೆಚ್ಚಿನ ಒತ್ತು ನೀಡುತ್ತೇವೆ ಎಂದರು.

ಮುಸ್ಲಿಮರು ಸಮಾಜ ವಿರೋಧಿಗಳು, ಭಾರತದಲ್ಲಿ ಷರಿಯಾ ಕಾನೂನು ಜಾರಿಗೊಳಿಸಲು ಒಲವು ತೋರುವ ಅವರು, ನಮ್ಮ ನೆಲದ ಸಂವಿಧಾನವನ್ನು ವಿರೋಧಿಸುತ್ತಾರೆ. ಮುಸ್ಲಿಮರು ಭಾರತದ ಹಿಂದೂಗಳ ಸರ್ಕಾರವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಉಲ್ಲೇಖಿಸಿದ್ದಾರೆ. ಈ ನೆಲದ ಋಣ ಹೊತ್ತ ಪ್ರತಿಯೊಬ್ಬರೂ ಶಿವಾಜಿ ಮಹಾರಾಜ ಹಾಗೂ ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಪೂಜಿಸಬೇಕು. ಅಂತಹ ಮುಸ್ಲಿಮರಿಗೆ ನಾವು ಹೆಚ್ಚಿನ ಗೌರವ ನೀಡುತ್ತೇವೆ ಎಂದು ಹೇಳಿದರು.

ಬಾಬಾ ಸಾಹೇಬರನ್ನು‌ ಸೋಲಿಸಿ ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ನವರು. ಯಾದಗಿರಿಯಲ್ಲಿ ದಲಿತ ಪಿಎಸ್ ಐಗೆ ಅಲ್ಲಿನ ಎಂಎಲ್ಎ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮಾನಸಿಕ ಖಿನ್ನತೆಗೊಳಗಾದ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡರು ಎಂದ ಅವರು ವರ್ಗಾವಣೆಗಾಗಿ ಪೊಲೀಸರಿಗೆ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ ಇದು ಸರಿಯಲ್ಲ. ಅಧಿಕಾರ ಶಾಶ್ವತವಲ್ಲ, 6 ತಿಂಗಳಲ್ಲಿ ನಿಮ್ಮ ಸರ್ಕಾವೇ ಇರುವುದಿಲ್ಲ. ಮುಂದಿನ ದಿನದಲ್ಲಿ ನಾನು ಮುಖ್ಯಮಂತ್ರಿಯಾದರೆ ಅಧಿಕಾರಿಗಳಿಗೆ ಬೇರೆ ರೀತಿಯಲ್ಲಿಯೇ ಪಾಠ‌‌ ಕಲಿಸುವೆ ಎಂದರು.

ಮುಧೋಳಕ್ಕೆ ಬರಬೇಕಿದ್ದ ರಾಜಾಸಿಂಗರನ್ನು ನಿರ್ಬಂಧ ವಿಧಿಸಿರುವ ನಿಮಗೆ ಹೈಕೋರ್ಟ್ ನಿಂದ ತಕ್ಕ‌ ಪಾಠ ಕಲಿಸಿ‌ ಬಾಗಲಕೋಟೆ ತುಂಬ ಭಾಷಣ ಮಾಡುತ್ತೇವೆ. ಹೈದರಾಬಾದ್‌ ನ ಓವೈಸಿ ಇಳಕಲ್ಲದಲ್ಲಿ ಭಾಷಣ ಮಾಡಿದರೆ ನಿರ್ಬಂಧ ವಿಧಿಸಿಲ್ಲ. ಈಗ ಯಾಕೆ ನಿರ್ಬಂಧ ವಿಧಿಸುತ್ತೀರಿ. ಮುಂದಿನ ದಿನದಲ್ಲಿ ನಾವು ನಿಮಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ‌ ನೀಡಿದರು.

ನಾಗಮಂಗಲದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿ ಕೊಂಡ್ಯೊಯುತ್ತಾರೆ. ನಿಮಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ‌ ನಡೆಸಿದರು.

ದೇಶದ ಅನ್ನ ತಿಂದು ನಮ್ಮ‌‌ ಕಾನೂನು ಗೌರವಿಸುವ ಪ್ರತಿಯೊಂದು ಮುಸ್ಲಿಮನನ್ನು‌ ನಾವು ಗೌರವಿಸುತ್ತೇವೆ. ಮನೆಗೆ ದ್ರೋಹ ಬಗೆಯುವ ಮುಸ್ಲಿಮರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಚುನಾವಣೆ ವೇಳೆ ಯಾವ ಸಾಹುಕಾರ ಹಾಗೂ ಗೌಡನ ಮಾತುಗಳನ್ನು ಕೇಳಬೇಡಿ. ನಮ್ಮ ಪಾರ್ಟಿಯಲ್ಲಿನ ಕೆಲ ಹುಳುಕಿನಿಂದ ಈ ಬಾರಿ ಅಧಿಕಾರ ಕಳೆದುಕೊಂಡಿದ್ದೇವೆ. ಮುಂದಿನ ದಿನದಲ್ಲಿ ನಾವು ಅಧಿಕಾರಕ್ಕೆ ಬಂದು ಧರ್ಮದ್ರೋಹಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು.

ನಾನು ಸಿಎಂ ಆದರೆ ಒಂದೆ ಒಂದು ರೂ. ಲಂಚ ಪಡೆಯದೆ ಎಲ್ಲ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡುತ್ತೇನೆ. ದೇಶದ ಭದ್ರತೆಗಾಗಿ ಪೊಲೀಸ್ ಇಲಾಖೆಯನ್ನು ಭದ್ರಗೊಳಿಸಲು ಒತ್ತು ನೀಡಬೇಕು ಎಂದರು.

ಹಿಂದುಗಳು ಇದೇ ರೀತಿ ನಿರ್ಲಿಪ್ತವಾಗಿದ್ದರೆ ಮುಂದಿನ ದಿನದಲ್ಲಿ ಜೀವನ ನಡೆಸುವುದು ಕಠಿಣವಾಗುತ್ತದೆ ಎಂದು ಹದು ಜನಾಂಗವನ್ನು ಜಾಗೃತಗೊಳಿಸಿದರು. ಅಪ್ಪ-ಮಕ್ಕಳು ದುಡ್ಡು ನೀಡಿ ಮುಖ್ಯಮಂತ್ರಿಯಾಗಲು ಹವಣಿಸಿದರೆ ಜನಬಲದಿಂದ ನಾನು ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ತಮ್ಮ ಮುಖ್ಯಮಂತ್ರಿ ಹುದ್ದೆಯ ಕನಸನ್ನು ಬಿಚ್ಚಿಟ್ಟರು.

ದೇಶಕ್ಕೆ ಗಾಂಧಿ ಒಬ್ಬರಿಂದಲೇ ಸ್ವಾತಂತ್ರ್ಯ ಸಿಕ್ಕಿಲ್ಲ, ನೇತಾಜಿ, ಸುಭಾಷ್ ಚಂದ್ರ ಬೋಸ್ ಅವರ ಭಯದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆಕಿದೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದ ಅವರು ಪಾಕಿಸ್ತಾನದಲ್ಲಿ ಪ್ರವಾಹ ಉಂಟಾದರೆ ಸಿನಿಮಾ ನಟರು 10 ಕೋಟಿ ರೂ. ಪರಿಹಾರ ನಿಧಿ ಕೊಡುತ್ತಾರೆ. ಅಮೀರ್ ಖಾನ್ ನಮ್ಮ ದೇಶದಲ್ಲಿ ಅತಂತ್ರ ಭಯ ಕಾಡುತ್ತಿದೆ ಎಂಬ ಹೇಳಿಕೆ ನೀಡುತ್ತಾರೆ. ಯುವಕರು ಅವರನ್ನು ರೋಲ್ ಮಾಡೆಲ್ ಮಾಡಿಕೊಳ್ಳದೆ ನಮ್ಮ ಸೈನಿಕರು, ಪೊಲೀಸರು, ಕಾರ್ಮಿಕರನ್ನು ರೋಲ್ ಮಾಡೆಲ್ ಆಗಿ‌‌ ಮಾಡಿಕೊಳ್ಳಬೇಕು ಎಂದರು.

ರಾಜಾ ಸಿಂಗ್ ಅವರನ್ನು ನಿಷೇಧಿಸಿದ್ದಕ್ಕೆ ನನಗೆ ಬಹಳ ನೋವಾಗಿದೆ. ಓವೈಸಿಯನ್ನು ಬಿಟ್ಟು ರಾಜಾಸಿಂಗ್ ರನ್ನು ನಿಷೇಧಿಸುತ್ತೀರಿ, ಮುಂದಿನ ದಿನದಲ್ಲಿ‌ ನಾವು ಅಧಿಕಾರಕ್ಕೆ ಬಂದಾಗ ನಿಮ್ಮ ಹುದ್ದೆಗೆ ಕುತ್ತು ತರುತ್ತೇವೆ ಎಂದರು.

ಈ ವೇದಿಕೆಯಲ್ಲಿ ನನಗೆ ಭಾಷಣ ಇದೇ ರೀತಿ ಮಾಡಿ ಎಂದು ಸಲಹೆ ನೀಡುತ್ತೀರಿ. ನಾನು ಜನಪ್ರತಿನಿಧಿಯಾಗಿದ್ದೇನೆ, ನನಗೆ ಹೇಳುವ ಅಧಿಕಾರ ನಿಮಗಿಲ್ಲ. ಕೇವಲ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಪೊಲೀಸರ ನಡೆಗೆ ಬೇಸರ ವ್ಯಕ್ತಪಡಿಸಿದರು.

ಮೋದಿ ಆಡಳಿತದಲ್ಲಿ ಸೈನಿಕರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿದ ಪರಿಣಾಮ ದೇಶದ ಭದ್ರತೆ ಹೆಚ್ಚಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಯಾಗುವ ವ್ಯಕ್ತಿಯೊಬ್ಬನ ಬಗ್ಗೆ ಸಿಬಿಐ ಹಾಗೂ ಲೋಕಾಯುಕ್ತದಲ್ಲಿ ಕೇಸ್ ಹಾಕಿದ್ದೇನೆ. ಅದನ್ನು ಎದುರಿಸಲು ಸುಪ್ರೀಂ ಕೋರ್ಟ್ ನಲ್ಲಿ 17 ವಕೀಲರನ್ನು ಬುಕ್ ಮಾಡಿಕೊಂಡಿದ್ದಾರೆ ಎಂದು ಕುಟುಕಿದರು.

ಗಮನಸೆಳೆದ ಮೆರವಣಿಗೆ :

ಗಣೇಶೋತ್ಸವ ಮೆರಚಣಿಗೆಯುದ್ದಕ್ಕೂ ಬೊಂಬೆ ಕುಣಿತ, ಪುಣ್ಯಕೋಟಿ, ಆಂಜನೇಯ, ಶ್ರೀಕೃಷ್ಣ, ಛತ್ರಪತಿ‌ ಶಿವಾಜಿ‌ ಮಹಾರಾಜ, ಸ್ಥಬ್ದ ಚಿತ್ರ ಮೆರವಣಿಗೆ, ಮಹಾರಾಷ್ಟ್ರದ ಸ್ವರನಾದ ಸಂಭಾಳ, ಹಲಗೆ ವಾದನ ನೋಡುಗರ ಕಣ್ಮನ ಸೆಳೆಯಿತು. ಡಿಜೆ ಹಾಡಿಗೆ ಯುವಸಮೂಹ ಭರ್ಜರಿ ಹೆಜ್ಜೆ ಹಾಕಿದರು.

ಬಿಗಿ ಬಂದೋಬಸ್ತ್: ನಗರದ ಜನತಾ ರಾಜಾ ಎಂದೇ ಖ್ಯಾತಿ ಹೊಂದಿರುವ ಗಣೇಶ ಮೂರ್ತಿ ವಿಸರ್ಜನೆಗೆ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ಡಿವೈಎಸ್ಪಿ ಶಾಂತವೀರ ಈ, ಸಿಪಿಐ ಹಾಗೂ ಪಿಎಸ್ಐ ಅಜಿತ ಕುಮಾರ ಹೊಸಮನಿ ಸೇರಿದಂತೆ ನೂರಾರು ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಒದಗಿಸಿದ್ದರು.

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.