Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


Team Udayavani, Sep 20, 2024, 10:19 AM IST

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

ಅನು ಪ್ರಭಾಕರ್‌ ಮೊದಲ ಬಾರಿಗೆ ಹಾರರ್‌ ಶೇಡ್‌ನ‌ಲ್ಲಿ ಕಾಣಿಸಿಕೊಂಡಿರುವ “ಹಗ್ಗ’ ಚಿತ್ರ ಇಂದು ತೆರೆಕಾಣುತ್ತಿದೆ. ಈಗಾಗಲೇ ಟೀಸರ್‌, ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ತಂಡ ಖುಷಿಯಾಗಿದೆ.

ಚಿತ್ರದ ಬಗ್ಗೆ ಮಾತನಾಡುವ ಅನು ಪ್ರಭಾಕರ್‌, ನಾನು ಈ ಚಿತ್ರ ಒಪ್ಪಿದ್ದು ನಿರ್ದೇಶಕ ಅವಿನಾಶ್‌ ಹೇಳಿದ ಕಥೆಗಾಗಿ. ನನಗೆ ಹಾರರ್‌ ಚಿತ್ರಗಳೆಂದರೆ ಇಷ್ಟವಿಲ್ಲ. ನಾನು ಹಾರರ್‌ ಚಿತ್ರಗಳನ್ನು ನೋಡುವುದಿಲ್ಲ. ಆದರೂ ನಾನು ಒಪ್ಪಿದ್ದು ಅವರು ಹೇಳಿದ ಕಥೆಗಾಗಿ. ನನಗೆ ಅವರ ಸ್ಪಷ್ಟತೆ ಇಷ್ಟವಾಯಿತು. ಅವರು ಏನು ಹೇಳಿದ್ದರೋ, ಅದನ್ನು ತೆರೆ ಮೇಲೆ ತಂದಿದ್ದಾರೆ. ಮೊದಲ ಚಿತ್ರದಲ್ಲೇ ಇಷ್ಟೊಂದು ಚೆನ್ನಾಗಿ ಕೆಲಸ ಮಾಡಿದ್ದು ನೋಡಿ ಖುಷಿಯಾಯಿತು. ಹಾಗಂತ ಚಿತ್ರೀಕರಣ ಸುಲಭವಾಗಿರಲಿಲ್ಲ. ನನ್ನ ಭಾಗದ ಚಿತ್ರೀಕರಣ ರಾತ್ರಿ 7ಕ್ಕೆ ಶುರುವಾಗಿ ಬೆಳಗ್ಗಿನ ಜಾವಕ್ಕೆ ಮುಗಿಯುತ್ತಿತ್ತು. ಆದರೆ, ನಾನು ಎಲ್ಲರು ಹೋದ ಮೇಲೆ ಹೋಗಬೇಕಿತ್ತು. ಏಕೆಂದರೆ, ಮೇಕಪ್‌ ಹಾಕುವುದಕ್ಕೆ, ತೆಗೆಯುವುದಕ್ಕೆ ಎರಡು ತಾಸು ಬೇಕಾಗುತ್ತಿತ್ತು. ನನ್ನ ಜೊತೆಗೆ ತಾಳ್ಮೆಯಿಂದ ಕಾದಿದ್ದ ನನ್ನ ತಂಡಕ್ಕೆ ಧನ್ಯವಾದ ಹೇಳಬೇಕು’ ಎಂದರು.

“ನಮ್ಮ ಟೀಸರ್‌ ಬಹಳ ಯಶಸ್ವಿಯಾಯಿತು. ಹಲವು ದಿನಗಳ ಕಾಲ ಟ್ರೆಂಡ್‌ ಆಗಿತ್ತು. ಈ ಚಿತ್ರ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ. ಅದರಲ್ಲೂ ಅನು ಪ್ರಭಾಕರ್‌ ಅವರು ದ್ವಿತೀಯಾರ್ಧವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ ಮತ್ತು ತಮ್ಮ ಪಾತ್ರವನ್ನು ಬಹಳ ಚೆನ್ನಾಗಿ ನಿಭಾಯಿಸಿದ್ದಾರೆ’ ಎನ್ನುವುದು ನಿರ್ಮಾಪಕ ರಾಜ್‌ ಭಾರದ್ವಾಜ್‌ ತಿಳಿಸಿದರು.

ಈ ಚಿತ್ರವನ್ನು ಅವಿನಾಶ್‌ ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮೊದಲು ರಾಜ್‌ ಭಾರದ್ವಾಜ್‌ ನಿರ್ಮಾಣದಲ್ಲಿ ಒಂದು ಕಿರುಚಿತ್ರ ನಿರ್ದೇಶಿಸಿದ ಅನುಭವ ಅವರಿಗಿದೆ. “ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ಹಗ್ಗವನ್ನು ಆಯುಧವನ್ನಾಗಿ ಬಳಸಿ ಕೊಳ್ಳಲಾಗಿದೆ. ಒಳ್ಳೆಯ ವಿಷಯಕ್ಕಾಗಿ ಹಗ್ಗ ಹೋರಾಟ ಮಾಡುತ್ತದೆ. ಇದೊಂದು ಹಾರರ್‌ ಫ್ಯಾಂಟಸಿ ಆ್ಯಕ್ಷನ್‌ ಥ್ರಿಲ್ಲರ್‌ ಚಿತ್ರ. ಇಲ್ಲಿ ಸಂದೇಶವಿದೆ, ಸಾಕಷ್ಟು ಗ್ರಾಫಿಕ್ಸ್‌ ಇದೆ. ಒಂದು ಪಾತ್ರಕ್ಕಾಗಿ ಅನು ಪ್ರಭಾಕರ್‌ ಇದ್ದರೇ ಚೆನ್ನ ಎಂದನಿಸಿತು. ಅವರೂ ಒಪ್ಪಿಕೊಂಡರು. ಆ ನಂತರ ಆ ಪಾತ್ರವನ್ನು ಅವರು ಬಿಟ್ಟರೆ ಯಾರಿಂದಲೂ ಸಾಧ್ಯವಿಲ್ಲ ಎಂದೆನಿಸಿತು’ ಎಂದರು ನಿರ್ದೇಶಕ ಅವಿನಾಶ್‌.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.